Sachin Dhas; U19 ವಿಶ್ವಕಪ್ ನಲ್ಲಿ ಮಿಂಚುತ್ತಿರುವ ಕಬಡ್ಡಿ ಆಟಗಾರನ ಮಗ


Team Udayavani, Feb 3, 2024, 12:32 PM IST

Sachin Dhas; Son Of Kabaddi Player scored century in  U-19 World Cup 2024

ಮುಂಬೈ: ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಅಂಡರ್ 19 ವಿಶ್ವಕಪ್ ನಲ್ಲಿ ಭಾರತ ಅದ್ಭುತ ಪ್ರದರ್ಶನ ನೀಡುತ್ತಿದೆ. ಸತತ ಪಂದ್ಯಗಳನ್ನು ಗೆಲ್ಲುತ್ತಿರುವ ಟೀಂ ಇಂಡಿಯಾ ಸೆಮಿ ಹಂತಕ್ಕೆ ಈಗಾಗಲೇ ಪ್ರವೇಶ ಪಡೆದಿದೆ. ನೇಪಾಳ ವಿರುದ್ದದ ಸೂಪರ್ ಸಿಕ್ಸ್ ಪಂದ್ಯದಲ್ಲಿ ಶತಕ ಸಿಡಿಸಿದ ಸಚಿನ್ ದಾಸ್ ಈಗ ಕ್ರಿಕೆಟ್ ಅಭಿಮಾನಿಗಳ ಗಮನ ಸೆಳೆಯುತ್ತಿದ್ದಾರೆ.

ಜರ್ಸಿ ಸಂಖ್ಯೆ 10 ಅನ್ನು ಧರಿಸಿರುವ ಸಚಿನ್ ದಾಸ್ ಹೆಸರು ಮತ್ತು ಜರ್ಸಿ ಸಂಖ್ಯೆ ಮಾತ್ರವಲ್ಲದೆ ದಂತಕಥೆ ಸಚಿನ್ ತೆಂಡೂಲ್ಕರ್ ಅವರನ್ನು ನೆನಪಿಸುವ ಪ್ರದರ್ಶನವನ್ನು ನೀಡಿದ್ದಾರೆ. ಸಚಿನ್ ದಾಸ್ ಮಹಾರಾಷ್ಟ್ರದ ಬೀಡ್ ಜಿಲ್ಲೆಯವರು. ಕ್ರಿಕೆಟ್ ಐಕಾನ್ ಸಚಿನ್ ತೆಂಡೂಲ್ಕರ್ ಅವರೊಂದಿಗೆ ವಿಶೇಷ ಕನೆಕ್ಷನ್ ಹಂಚಿಕೊಂಡಿದ್ದಾರೆ. ಅವರ ತಂದೆ ಸಂಜಯ್ ದಾಸ್ ಅವರು ತೆಂಡೂಲ್ಕರ್ ಅವರ ಕಟ್ಟಾ ಅಭಿಮಾನಿಯಾದ ಪುತ್ರನಿಗೆ ಕ್ರಿಕೆಟಿಗನ ಹೆಸರು ಇರಿಸಿದ್ದಾರೆ.

ಮಹಾರಾಷ್ಟ್ರದ ಬೀಡ್‌ ನಲ್ಲಿ ಜನಿಸಿದ ಸಚಿನ್ ದಾಸ್ ಕ್ರೀಡೆಯಲ್ಲಿ ಆಳವಾಗಿ ಬೇರೂರಿರುವ ಕುಟುಂಬದಿಂದ ಬಂದವರು. ಅವರ ತಂದೆ ಸಂಜಯ್ ದಾಸ್ ಅವರು ಕಬ್ಬಡ್ಡಿ ಆಟಗಾರನಾಗಿದ್ದರು. ಸಚಿನ್ ದಾಸ್ 2023ರ ಮಹಾರಾಷ್ಟ್ರ ಪ್ರೀಮಿಯರ್ ಲೀಗ್‌ನಲ್ಲಿ ಕೊಲ್ಲಾಪುರ ಟಸ್ಕರ್ಸ್ ಪರ ಆಡಿದ್ದರು.

ಸಚಿನ್ ದಾಸ್ ಅವರ ಕ್ರಿಕೆಟ್ ಪಯಣ ಹದಿನಾಲ್ಕನೇ ವಯಸ್ಸಿನಲ್ಲಿ ಪ್ರಾರಂಭವಾಯಿತು, ರಾಜ್ಯ ಮಟ್ಟದಲ್ಲಿ ಮಹಾರಾಷ್ಟ್ರವನ್ನು ಪ್ರತಿನಿಧಿಸಿದರು. ಅವರ ಸ್ಥಿರ ಪ್ರದರ್ಶನವು ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್‌ ನಲ್ಲಿ ಅವರ ಆಯ್ಕೆಗೆ ಕಾರಣವಾಯಿತು. ಅವರು ಈಗ U19 ವಿಶ್ವಕಪ್‌ ಗಾಗಿ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ.

U19 ವಿಶ್ವಕಪ್‌ನಲ್ಲಿ ಮಿಂಚಿದ ಪ್ರದರ್ಶನ ಮತ್ತು ನೇಪಾಳ ವಿರುದ್ಧ ಶತಕದೊಂದಿಗೆ, ಸಚಿನ್ ದಾಸ್ ತಮ್ಮ ಕ್ರಿಕೆಟ್ ಕೌಶಲ್ಯಕ್ಕಾಗಿ ಮಾತ್ರವಲ್ಲದೆ ಸಚಿನ್ ತೆಂಡೂಲ್ಕರ್ ಅವರೊಂದಿಗಿನ ಸಂಪರ್ಕಕ್ಕಾಗಿಯೂ ಗಮನ ಸೆಳೆಯುತ್ತಿದ್ದಾರೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.