ಸಂಕಷ್ಟದಲ್ಲಿರುವ 4000 ಜನರಿಗೆ ಹಣಕಾಸಿನ ನೆರವು ನೀಡಿದ ಸಚಿನ್ ತೆಂಡೂಲ್ಕರ್
Team Udayavani, May 9, 2020, 11:49 AM IST
ಮುಂಬೈ: ಭಾರತದ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರು ಲಾಕ್ ಡೌನ್ ನಿಂದ ಸಂಕಷ್ಟ ಅನುಭವಿಸುತ್ತಿರುವ ಕುಟುಂಬಗಳಿಗೆ ಸಹಾಯಹಸ್ತ ಚಾಚಿದ್ದಾರೆ. ಬೃಹತ್ ಮುಂಬೈ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಕೋವಿಡ್-19 ಲಾಕ್ ಡೌನ್ ನಿಂದ ಸಂಕಷ್ಟ ಅನುಭವಿಸುತ್ತಿರುವ ಮಕ್ಕಳು ಹಿರಿಯರಿಗೆ ಕ್ರಿಕೆಟ್ ದೇವರು ಸಹಾಯ ಮಾಡಿದ್ದಾರೆ.
ಸಚಿನ್ ತೆಂಡೂಲ್ಕರ್ ಅವರು ಮುಂಬೈನ ಹೈ5 ಫೌಂಡೇಶನ್ ಎಂಬ ಸೇವಾ ಸಂಸ್ಥೆಯೊಂದಕ್ಕೆ ಧನ ಸಹಾಯ ಮಾಡಿದ್ದಾರೆ . ಆದರೆ ಸಚಿನ್ ಎಷ್ಟು ಹಣ ನೀಡಿದ್ದಾರೆ ಎಂದು ತಿಳಿದಿಲ್ಲ. ಈ ಹಣದಿಂದ ಆ ಸಂಸ್ಥೆ ಸಂಕಷ್ಟಲ್ಲಿರುವವರಿಗೆ ಸಹಾಯ ಮಾಡಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಂಸ್ಥೆ, ಸಚಿನ್ ತೆಂಡೂಲ್ಕರ್ ಅವರಿಗೆ ಧನ್ಯವಾದಗಳು. ನೀವು ನೀಡಿದ ಸಹಾಯದಿಂದ ನಗರ ಪಾಲಿಕೆ ಶಾಲೆಯ ಮಕ್ಕಳು ಸೇರಿದಂತೆ 4000 ಕ್ಕೂ ಹೆಚ್ಚಿನ ಜನರಿಗೆ ಸಹಾಯವಾಗಿದೆ ಎಂದಿದ್ದಾರೆ.
ಇದಕ್ಕೆ ಉತ್ತರಿಸಿರುವ ಸಚಿನ್, ದಿನಗೂಲಿ ನೌಕರರ ಕುಟುಂಬಗಳಿಗೆ ಸಹಾಯ ಮಾಡುತ್ತಿರುವ ನಿಮ್ಮ ಆಶಯ ಮತ್ತು ಸಂಸ್ಥೆಗೆ ಒಳ್ಳೆಯದಾಗಲಿ ಎಂದಿದ್ದಾರೆ,
ಕಳೆದ ತಿಂಗಳು ಸಚಿನ್ ತೆಂಡೂಲ್ಕರ್ ಅಪ್ನಾಲಯಾ ಎಂಬ ಸಂಸ್ಥೆಯ ಮುಖಾಂತರ ಐದು ಸಾವಿರಕ್ಕೂ ಹೆಚ್ಚಿನ ಜನರಿಗೆ ಸಹಾಯ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ