ಸಚಿನ್ ಸ್ಪೆಷಲ್: ಇವು ತೆಂಡೂಲ್ಕರ್ ರ ಐದು ಮಾಸ್ಟರ್ ಕ್ಲಾಸ್ ಏಕದಿನ ಇನ್ನಿಂಗ್ಸ್ ಗಳು


Team Udayavani, Apr 24, 2021, 12:40 PM IST

sachin tendulkar

ಕ್ರಿಕೆಟ್ ದೇವರು, ಕ್ರಿಕೆಟ್ ದಂತಕಥೆ, ದಾಖಲೆಗಳ ಸರದಾರ ಸಚಿನ್ ತೆಂಡೂಲ್ಕರ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಚಿಗುರು ಮೀಸೆಯ ಹುಡುಗನಾಗಿ ಕ್ರಿಕೆಟ್ ಅಂಗಳಕ್ಕೆ ಕಾಲಿಟ‍್ಟ ಸಚಿನ್ ರಮೇಶ್ ತೆಂಡೂಲ್ಕರ್ ಎರಡು ದಶಕಗಳ ಕಾಲ ವಿಶ್ವಕ್ರಿಕೆಟ್ ನ ದೊರೆಯಾಗಿ ಮೆರೆದವರು. ಮುಂಬೈಕರ್ ನ 48ನೇ ಬರ್ತ್ ಡೇ ಗಾಗಿ ಅವರು ಆಡಿದ ಐದು ಮಾಸ್ಟರ್ ಕ್ಲಾಸ್ ಏಕದಿನ ಇನ್ನಿಂಗ್ಸ್ ಗಳ ವಿವರಣೆ ಇಲ್ಲಿದೆ.

ಆಸೀಸ್ ವಿರುದ್ಧ 143 ರನ್- 1998

ಡೆಸರ್ಟ್ ಸ್ಟಾರ್ಮ್ ಇನ್ನಿಂಗ್ಸ್ ಎಂದು ಪ್ರಸಿದ್ದಿ ಪಡೆದ ಇನ್ನಿಂಗ್ಸ್ ಇದು. ಸಚಿನ್ ಆಡಿದ ಸಾರ್ವಕಾಲಿಕ ಶ್ರೇಷ್ಠ ಇನ್ನಿಂಗ್ಸ್ ಗಳಲ್ಲಿ ಇದೂ ಒಂದು. ಶಾರ್ಜಾದಲ್ಲಿ ನಡೆದ ಈ ಪಂದ್ಯದಲ್ಲಿ ಬಲಿಷ್ಠ ಆಸೀಸ್ ಬೌಲರ್ ಗಳ ಎಸೆತಗಳನ್ನು ಸಚಿನ್ ಧೂಳಿಪಟ ಮಾಡಿದ್ದರು. 131 ಎಸೆತಗಳನ್ನು ಎದುರಿಸಿದ್ದ ಸಚಿನ್ 143 ರನ್ ಬಾರಿಸಿದ್ದರು. 9 ಬೌಂಡರಿ ಮತ್ತು ಐದು ಸಿಕ್ಸರ್ ಗಳನ್ನು ಸಚಿನ್ ಅಂದು ಸಿಡಿಸಿದ್ದರು. ಆದರೆ ಸಚಿನ್ ಔಟಾಗುತ್ತಿದ್ದಂತೆ ತಂಡ ಕುಸಿತ ಕಂಡಿತು. ಪಂದ್ಯದಲ್ಲಿ ಭಾರತ ಸೋಲನುಭವಿಸಿತ್ತು.

ಪಾಕಿಸ್ಥಾನ ವಿರುದ್ಧ 93 ರನ್-    2003

ದಕ್ಷಿಣ ಆಫ್ರಿಕಾದಲ್ಲಿ ನಡೆದ 2003ರ ವಿಶ್ವಕಪ್ ನಲ್ಲಿ ಪಾಕ್ ವಿರುದ್ಧ ನಡೆದ ಪಂದ್ಯವಿದು. ಶೋಯೆಬ್ ಅಕ್ತರ್, ವಾಖರ್ ಯೂನಿಸ್, ವಾಸಿಂ ಅಕ್ರಮ್ ರಂತಹ ಬಲಿಷ್ಠ ಬೌಲಿಂಗ್ ಪಡೆಯನ್ನು ಹೊಂದಿತ್ತು ಪಾಕಿಸ್ಥಾನ. ಈ ವೇಗದ ಕೋಟೆಯನ್ನು ಪುಡಿಪುಡಿ ಮಾಡಿದ ಸಚಿನ್ ಬೌಂಡರಿ ಸುರಿಮಳೆಗರೆದರು. ಶೋಯೆಬ್ ಅಕ್ತರ್ ಓವರ್ ನಲ್ಲಿ ಸಾಲು ಸಾಲು ಬೌಂಡರಿ ಬಾರಿಸಿದ ಸಚಿನ್ ನಂತರ 75 ಎಸೆತಗಳಲ್ಲಿ 93 ರನ್ ಬಾರಿಸಿದ್ದ ವೇಳೆ ಅಕ್ತರ್ ಎಸೆತದಲ್ಲೇ ಔಟಾದರು. ಭಾರತ ಈ ಪಂದ್ಯವನ್ನು ಜಯಿಸಿತ್ತು.

ದಕ್ಷಿಣ ಆಫ್ರಿಕಾ ವಿರುದ್ಧ ದ್ವಿಶತಕ- 2010

ಏಕದಿನ ಕ್ರಿಕೆಟ್ ನಲ್ಲಿ ದಾಖಲಾದ ಮೊತ್ತ ಮೊದಲ ದ್ವಿಶತಕ ಬಾರಿಸಿದವರು ಸಚಿನ್ ತೆಂಡೂಲ್ಕರ್. ದಕ್ಷಿಣ ಆಫ್ರಿಕಾ ವಿರುದ್ಧ ಗ್ವಾಲಿಯರ್ ನಲ್ಲಿ ನಡೆದ ಪಂದ್ಯದಲ್ಲಿ ಸಚಿನ್ ವಿಶ್ವ ದಾಖಲೆ ಬರೆದರು. ಡೇಲ್ ಸ್ಟೇನ್, ಮಾರ್ನೆ ಮಾರ್ಕೆಲ್ ರಂತಹ ವೇಗಿಗಳ ಎಸೆತಗಳನ್ನು ಮೈದಾನದ ಮೂಲೆ ಮೂಲೆಗೆ ಅಟ್ಟಿದ ಸಚಿನ್ ಕೇವಲ 147 ಎಸೆತಗಳಲ್ಲಿ 200 ರನ್ ಬಾರಿಸಿದ್ದರು. ಪಂದ್ಯದಲ್ಲಿ ಭಾರತ 153 ರನ್ ಅಂತರದಿಂದ ಗೆಲುವು ಕಂಡಿತ್ತು.

ಆಸೀಸ್‍ ವಿರುದ್ಧ 134 ರನ್ -1998

ಡೆಸರ್ಟ್ ಸ್ಟಾರ್ಮ್ ಇನ್ನಿಂಗ್ಸ್ ನ ಎರಡು ದಿನ ನಂತರದ ಪಂದ್ಯವಿದು. ಶಾರ್ಜಾ ಕಪ್ ನ ಫೈನಲ್ ಪಂದ್ಯ. ಎದುರಾಳಿ ಮತ್ತದೆ ಆಸೀಸ್ ತಂಡ. ಆಸೀಸ್ ಬೌಲರ್ ಗಳನ್ನು ಬೆಂಡೆತ್ತಿದ ಸಚಿನ್ ಮತ್ತೊಂದು ಆಕರ್ಷಕ ಶತಕ ಬಾರಿಸಿದರು. 134 ಎಸತ ಎದುರಿಸಿದ ಸಚಿನ್ 131 ರನ್ ಬಾರಿಸಿದ್ದರು. ಆದರೆ ಈ ಬಾರಿ ಅವರ ಶತಕ ವ್ಯರ್ಥವಾಗಲಿಲ್ಲ. ಭಾರತ ಆರು ವಿಕೆಟ್ ಅಂತರದಿಂದ ಕಾಂಗರೂಗಳನ್ನು ಮಣಿಸಿತ್ತು.

ಕಿವೀಸ್ ವಿರುದ್ಧ 82 ರನ್: 1994

ಇದು ಆರಂಭಿಕನಾಗಿ ಸಚಿನ್ ತೆಂಡೂಲ್ಕರ್ ಆಡಿದ ಮೊದಲ ಪಂದ್ಯ. ಯುವ ಸಚಿನ್ ಕಿವೀಸ್ ವಿರುದ್ಧ ಅಬ್ಬರಿಸಿದ್ದರು. ಕೇವಲ 49 ಎಸೆತ ಎದುರಿಸಿದ ಸಚಿನ್ 82 ರನ್ ಗಳಿಸಿದ್ದರು. ಈ ಸಿಡಿಲಬ್ಬರದ ಇನ್ನಿಂಗ್ಸ್ ನಲ್ಲಿ ಸಚಿನ್ 15 ಬೌಂಡರಿ ಮತ್ತು ಎರಡು ಭರ್ಜರಿ ಸಿಕ್ಸರ್ ಬಾರಿಸಿದ್ದರು. ಪಂದ್ಯದಲ್ಲಿ ಭಾರತ ಎಳು ವಿಕೆಟ್ ಅಂತರದ ಜಯ ಸಾಧಿಸಿತ್ತು.

ಇದನ್ನೂ ಓದಿ:ರಾಜಸ್ಥಾನ್‌ ರಾಯಲ್ಸ್‌ ಗೆ ಆಘಾತ : ಈ ಬಾರಿಯ IPLನಿಂದ ಜೋಫ್ರಾ ಆರ್ಚರ್ ಹೊರಗೆ

ಟಾಪ್ ನ್ಯೂಸ್

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.