ಅಶ್ವತ್ಥ ಎಲೆಯಲ್ಲಿ ಕಲೆ ಮರ್ಣೆ ಕಲಾವಿದನ ಸಾಧನೆಗೆ ಸಚಿನ್ ಪ್ರಶಂಸೆ
Team Udayavani, Jun 15, 2022, 10:43 PM IST
ಕಟಪಾಡಿ: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ಅವರ ಭಾವಚಿತ್ರವನ್ನು ಅಶ್ವತ್ಥದ ಎಲೆಯಲ್ಲಿ ಕೇವಲ 7 ನಿಮಿಷದಲ್ಲಿ ಬಿಡಿಸುವ ಮೂಲಕ ಉಡುಪಿ ಜಿಲ್ಲೆಯ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮರ್ಣೆಯ ಯುವ ಕಲಾವಿದ ಮಹೇಶ್ ಮರ್ಣೆ ಎಕ್ಸ್ಕ್ಲೂಸಿವ್ ವರ್ಲ್ಡ್ ರೆಕಾರ್ಡ್ನಲ್ಲಿ ಸ್ಥಾನ ಪಡೆದಿದ್ದಾರೆ.
ಅವರು ಈ ಭಾವಚಿತ್ರವನ್ನು ತೆಂಡುಲ್ಕರ್ಗೆ ಕಳುಹಿಸಿದ್ದರು.
ಈ ಕಲಾಸಾಧನೆಯನ್ನು ಕಂಡು ಸಚಿನ್ ತೆಂಡುಲ್ಕರ್ ಸಂತಸಗೊಂಡು, ಶುಭಾಶಯ ಪತ್ರವೊಂದನ್ನು ಕಳುಹಿಸಿದ್ದಾರೆ.
“ನನ್ನ ಮೇಲೆ ಪ್ರೀತಿ ಇಟ್ಟು ನೀವು ರಚಿಸಿರುವ ಕಲಾಕೃತಿ ಕಂಡು ನಾನು ಬೆರಗಾಗಿದ್ದೇನೆ. ನೀವು ನನ್ನ ಮೇಲೆ ತೋರಿಸಿರುವ ಪ್ರೀತಿಗೆ ಪ್ರತಿಯಾಗಿ ನನ್ನ ಸಂಗ್ರಹದಲ್ಲಿರುವ ಎರಡು ಅಮೂಲ್ಯ ಫೋಟೋಗಳನ್ನು ನಿಮಗೆ ಕಳುಹಿಸುತ್ತಿದ್ದೇನೆ. ನನ್ನ ಎರಡನೇ ಇನ್ನಿಂಗ್ಸ್ಗೂ ಕೂಡಾ ನೀವು ತೋರಿಸುತ್ತಿರುವ ಪ್ರೀತಿ ಮತ್ತು ಬೆಂಬಲ ನನಗೆ ಪ್ರೇರಣೆಯಾಗಿದೆ” ಎಂದು ಬರೆದು, ಹಸ್ತಾಕ್ಷರ ಮಾಡಿದ ಪತ್ರವನ್ನು ಕಳುಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ