ರಾಜ್ಯಸಭೆಯಲ್ಲಿ ತೆಂಡುಲ್ಕರ್ಭಾಷಣ!
Team Udayavani, Dec 21, 2017, 8:38 AM IST
ಹೊಸದಿಲ್ಲಿ: ಕ್ರಿಕೆಟ್ ದೇವರು ಎಂದೇ ಕರೆಸಿಕೊಳ್ಳುವ ಸಚಿನ್ ತೆಂಡುಲ್ಕರ್ ರಾಜ್ಯಸಭೆಯಲ್ಲಿ ಮಾತ್ರ ಕಳಪೆ ಪ್ರದರ್ಶನ ತೋರಿದ್ದಾರೆ. ರಾಜ್ಯಸಭೆಯ ಇತಿಹಾಸದಲ್ಲೇ ಕಳಪೆ ಪ್ರದರ್ಶನ ನೀಡಿದವರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಅಂತಹ ತೆಂಡುಲ್ಕರ್ ತಮ್ಮ ಅವಧಿ ಮುಗಿಯುವುದಕ್ಕೆ ಇನ್ನು ಕೇವಲ 1 ವರ್ಷವಿರುವಾಗ ಮಾತನಾಡಲು ತೀರ್ಮಾನಿಸಿದ್ದಾರೆ. ಗುರುವಾರ ಮಧ್ಯಾಹ್ನ 2 ಗಂಟೆಗೆ ಭಾರತ ಕ್ರೀಡೆಯ ಸ್ಥಿತಿಗತಿಗಳ ಬಗ್ಗೆ ಮಾತನಾಡಲಿದ್ದಾರೆ. ಇದು ರಾಜ್ಯಸಭೆಯಲ್ಲಿ ಅವರು ಮಾಡುತ್ತಿರುವ ಮೊದಲ ಭಾಷಣ!
2012ರಲ್ಲಿ ರಾಜ್ಯಸಭೆಗೆ ಆಯ್ಕೆಯಾಗಿದ್ದ ಅವರು ಒಟ್ಟು 348 ದಿನಗಳ ಅವಧಿಯಲ್ಲಿ ಕೇವಲ 23 ದಿನ (ಎಪ್ರಿಲ್ ಹೊತ್ತಿಗೆ) ಕಲಾಪಗಳಿಗೆ ಹಾಜರಾಗಿದ್ದರು. ಆದ್ದರಿಂದ ಬಹಿರಂಗ ಟೀಕೆಗೆ ಕಾರಣವಾಗಿದ್ದರು. ಸಮಾಜವಾದಿ ಪಕ್ಷದ ನಾಯಕ ನರೇಶ್ ಅಗರ್ವಾಲ್ ಇದನ್ನು ಪ್ರಶ್ನಿಸಿದ್ದರು. ಸಂವಿಧಾನದ ಸಂಸತ್ ನಿಯಮಗಳ ಪ್ರಕಾರ, 60 ದಿನಗಳಿಗೂ ಹೆಚ್ಚು ಕಾಲ ಒಬ್ಬ ಸದಸ್ಯ ಸಂಸತ್ಗೆ ಗೈರಾದರೆ ಆ ಸ್ಥಾನ ಖಾಲಿಯಿದೆ ಎಂದು ತೀರ್ಮಾನಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ
IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್ ನೀಡಿದ ಆರ್ಸಿಬಿ!
IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ
IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ