“ಸಾಯ್‌’ ಕೋಚ್‌ ಆಗಲಿದ್ದಾರೆ ಆ್ಯತ್ಲೀಟ್‌ ಅಶ್ವಿ‌ನಿ ಅಕ್ಕುಂಜೆ


Team Udayavani, Feb 23, 2019, 12:30 AM IST

z-4.jpg

ಬೆಂಗಳೂರು: ಕಾಮನ್ವೆಲ್ತ್‌, ಏಶ್ಯನ್‌ ಗೇಮ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಆ್ಯತ್ಲೀಟ್‌ ಅಶ್ವಿ‌ನಿ ಅಕ್ಕುಂಜೆ ಈಗ ಕೋಚಿಂಗ್‌ನತ್ತ ಮುಖ ಮಾಡಿದ್ದಾರೆ. ಮುಂದಿನ ಎರಡು ತಿಂಗಳಲ್ಲಿ ಭಾರತೀಯ ಕ್ರೀಡಾ ಪ್ರಾಧಿಕಾರ (ಸಾಯ್‌)ದ ಕೋಚ್‌ ಆಗಿ ದ್ವಿತೀಯ ಇನ್ನಿಂಗ್ಸ್‌ ಆರಂಭಿಸಲಿದ್ದಾರೆ. ಸಾಯ್‌ ಪ್ರಕಟಿಸಿದ 14 ಮಂದಿ ತರಬೇತುದಾರರ ಯಾದಿ ಯಲ್ಲಿ ಅಶ್ವಿ‌ನಿ ಕೂಡ ಒಬ್ಬರು. ಈ ವಿಷಯವನ್ನು “ಉದಯವಾಣಿ’ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಬಹಿರಂಗಪಡಿಸಿದ್ದಾರೆ.

31 ವರ್ಷದ ಅಶ್ವಿ‌ನಿ ಓರ್ವ ಸಮರ್ಥ ಆ್ಯತ್ಲೀಟ್‌. ಮೂಲತಃ ಉಡುಪಿ ಜಿಲ್ಲೆಯ ಕುಂದಾಪುರದವರು. ಹಲವು ವರ್ಷ ಟ್ರ್ಯಾಕ್‌ನಲ್ಲಿ ಮಿಂಚಿ ಚಿನ್ನದ ಪದಕಗಳನ್ನು ಬೇಟೆಯಾಡಿದ ಸಾಧಕಿ. ಸಾಧನೆಯ ಜತೆಗೆ ಅವಮಾನ, ಅಪನಿಂದನೆ ಕೂಡ. ಉದ್ದೀಪನ ಪ್ರಕರಣವೊಂದರಲ್ಲಿ ಸಿಕ್ಕಿಬಿದ್ದಿದ್ದ ಅಶ್ವಿ‌ನಿ ನಿಷೇಧಕ್ಕೂ ತುತ್ತಾಗಿದ್ದರು. ನಿಷೇಧದಿಂದ ಹೊರಬಂದ ಅವರು ಪಟಿಯಾಲದಲ್ಲಿ ಆ್ಯತ್ಲೀಟ್‌ ಆಗಿ ಮುಂದುವರಿದರು. ಸದ್ಯ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಿದ್ದರೂ ಮುಂದಿನ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸಲು ಕೊನೇ ಪ್ರಯತ್ನ ನಡೆಸುವ ಗುರಿ ಹೊಂದಿದ್ದಾರೆ. ಇದಕ್ಕೂ ಮೊದಲು ಕೋಚ್‌ ಆಗಿ ಕೆಲಸಕ್ಕೆ ಸೇರಿಕೊಳ್ಳುವ ಸುಳಿವನ್ನೂ ನೀಡಿದ್ದಾರೆ.

ಬೆಂಗಳೂರಲ್ಲೇ ಕೆಲಸ ನಿರ್ವಹಿಸುವ ಕನಸು
“ಹಲವಾರು ವರ್ಷಗಳಿಂದ ನನ್ನ ಊರು, ರಾಜ್ಯ ತೊರೆದು ಪಟಿಯಾಲದಲ್ಲೇ ಇದ್ದೆ. ಇಷ್ಟು ವರ್ಷ ದೇಶಕ್ಕಾಗಿ ಕುಟುಂಬ, ಮನೆ, ಬಂಧು, ಬಳಗ ಎಲ್ಲದರಿಂದಲೂ ದೂರವಿದ್ದೆ. ಇನ್ನು ಮುಂದಾದರೂ ಸ್ವಲ್ಪ ಸಮಯ ಕುಟುಂಬಕ್ಕೆ ಮೀಸಲಿಡ ಬೇಕು ಅಂದುಕೊಂಡಿದ್ದೇನೆ. ಜತೆಗೆ ರಾಜ್ಯದ ಕ್ರೀಡಾಪಟುಗಳನ್ನು ಬೆಳೆಸಲು ನಿರ್ಧರಿಸಿದ್ದೇನೆ. ಹೀಗಾಗಿ ಬೆಂಗಳೂರಿನ ಸಾಯ್‌ನಲ್ಲಿ ಕೆಲಸ ಸಿಗಲಿ ಎನ್ನುವುದು ನನ್ನ ಆಸೆ’ ಎಂದು ಅಶ್ವಿ‌ನಿ ಹೇಳಿದರು.

ಒಲಿಂಪಿಕ್ಸ್‌ ಕೊನೆಯ ಕನಸು
“ಮುಂದಿನ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುವ ಕನಸು ಕಂಡಿದ್ದೇನೆ. ಗಾಯದಿಂದಾಗಿ ಇದು ಸಾಧ್ಯ ವಾಗುತ್ತದೋ ಇಲ್ಲವೋ ಗೊತ್ತಿಲ್ಲ. ಆದರೆ ಕೊನೆಯ ದಾಗಿ ನನ್ನ ಪ್ರಯತ್ನ ನಡೆಸುತ್ತೇನೆ. ಇದರಲ್ಲಿ ವಿಫ‌ಲ ಳಾದರೆ ಬೇಸರವಾಗುವುದಿಲ್ಲ. ಪ್ರಯತ್ನಿಸಿದ ಸಂತೋಷ ನನಗಿರುತ್ತದೆ’ ಎನ್ನುತ್ತಾರೆ ಅಶ್ವಿ‌ನಿ. 

ಹೊಸ ಇನ್ನಿಂಗ್ಸ್‌, ಹೊಸ ಸವಾಲು
“ಬ್ಯಾಂಕ್‌ ಮ್ಯಾನೇಜರ್‌ ಹುದ್ದೆ ತೊರೆದು ಕೋಚ್‌ ಆಗಬೇಕೆಂದುಕೊಂಡಿರುವೆ. ಭವಿಷ್ಯದ ಆ್ಯತ್ಲೀಟ್‌ಗಳನ್ನು ರೂಪಿಸುವುದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚುವಂತೆ ಮಾಡುವುದು ನನ್ನ ಜೀವನದ ಬಹುದೊಡ್ಡ ಕನಸು. ಕೆಲವರು ನನಗೆ ಅಕಾಡೆಮಿ ಆರಂಭಿಸಿದರೆ ಒಳ್ಳೆಯದು ಎನ್ನುವ ಸಲಹೆ ನೀಡಿದರು. ಆದರೆ ನಾನು ಅಕಾಡೆಮಿ ತೆರೆದು ಹಣ ಸಂಪಾದಿಸಲು ಇಷ್ಟಪಡುವುದಿಲ್ಲ. ಮುಂದಿನೆರಡು ತಿಂಗಳ ಒಳಗಾಗಿ ಸಾಯ್‌ ಕೋಚ್‌ ಆಗಿ ಕೆಲಸಕ್ಕೆ ಸೇರುವುದು ಬಹುತೇಕ ಖಚಿತಗೊಂಡಿದೆ. ಅದಕ್ಕೂ ಮೊದಲು ನಾನು ಕೆಲಸ ನಿರ್ವಹಿಸುತ್ತಿರುವ ಬ್ಯಾಂಕ್‌ನಿಂದ ಎನ್‌ಒಸಿ (ನಿರಾಕ್ಷೇಪಣಾ ಪತ್ರ) ಸಿಗಬೇಕಿದೆ’                           
ಅಶ್ವಿ‌ನಿ ಅಕ್ಕುಂಜೆ

ಹೇಮಂತ್‌ ಸಂಪಾಜೆ

ಟಾಪ್ ನ್ಯೂಸ್

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

11-plastic

Eco-friendly Bio Plastic: ಪರಿಸರ ಸ್ನೇಹಿ ಮೆಕ್ಕೆಜೋಳದ ಬಯೋ ಪ್ಲಾಸ್ಟಿಕ್‌

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Raichur Lok Sabha Constituency: ಬಿಸಿಲೂರಿನಲ್ಲಿ ಕಾವೇರಿದ “ನಾಯಕ’ತ್ವದ ಹೋರಾಟ

Raichur Lok Sabha Constituency: ಬಿಸಿಲೂರಿನಲ್ಲಿ ಕಾವೇರಿದ “ನಾಯಕ’ತ್ವದ ಹೋರಾಟ

13-uv-fusion

UV Fusion: ನಾವು ನಮಗಾಗಿ ಬದುಕುತ್ತಿರುವುದು ಎಷ್ಟು ಹೊತ್ತು?

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.