ಮುನಿಸು ಮರೆತು ಒಂದಾದ ಗೋಪಿಚಂದ್‌-ಸೈನಾ


Team Udayavani, Sep 5, 2017, 7:55 AM IST

Pullela-Gopichand-and-Saina.jpg

ನವದೆಹಲಿ: ಮಾಜಿ ವಿಶ್ವ ನಂ.1 ಬ್ಯಾಡ್ಮಿಂಟನ್‌ ತಾರೆ ಸೈನಾ ನೆಹ್ವಾಲ್‌ ಅವರು ಭಾರತ ಬ್ಯಾಡ್ಮಿಂಟನ್‌ ಕೋಚ್‌ ಗೋಪಿಚಂದ್‌ರೊಂದಿಗಿನ ತಮ್ಮ ದೀರ್ಘ‌ಕಾಲದ ಮುನಿಸನ್ನು ಮರೆತು ಒಂದಾಗಿದ್ದಾರೆ. ಮತ್ತೆ ಹೈದರಾಬಾದ್‌ನಲ್ಲಿರುವ ಗೋಪಿಚಂದ್‌ ಅಕಾಡೆಮಿಗೆ ಮರಳಲು ಸಿದ್ಧವಾಗಿದ್ದಾರೆ. ಕಳೆದ ಮೂರು ವರ್ಷದಿಂದ ತರಬೇತಿ ನೀಡುತ್ತಿದ್ದ ವಿಮಲ್‌ಕುಮಾರ್‌ ಅವರಿಗೆ ಗೌರವಪೂರ್ಣ ವಿದಾಯ ಹೇಳಿದ್ದಾರೆ.

ಗೋಪಿಚಂದ್‌ ಮಾರ್ಗದರ್ಶನದಲ್ಲಿ ಸೈನಾ ನೆಹ್ವಾಲ್‌ 2012ರ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಸೇರಿದಂತೆ ಹಲವು ಸೂಪರ್‌ ಸೀರೀಸ್‌ ಟ್ರೋಫಿ ಗೆದ್ದಿದ್ದಾರೆ. ಆದರೆ 2014ರಲ್ಲಿ ಇಬ್ಬರ ನಡುವಿನ ಸಂಬಂಧ ಹಳಸಿತ್ತು. ಹೀಗಾಗಿ ಸೈನಾ 2014 ಸೆ.2ರಿಂದ ಬೆಂಗಳೂರಿನಲ್ಲಿ ವಿಮಲ್‌ ಕುಮಾರ್‌ ಅವರಿಂದ ಕೋಚಿಂಗ್‌ ಪಡೆಯಲು ಆರಂಭಿಸಿದ್ದರು. ಆದರೆ ಸೈನಾ 2016ರಲ್ಲಿ ರಿಯೋ ಒಲಿಂಪಿಕ್ಸ್‌ ನಂತರ ಮೋಣಕಾಲಿನ ಶಸ್ತ್ರಚಿಕಿತ್ಸೆಗೆ ತುತ್ತಾಗಿದ್ದರು. ಆ ನಂತರ ಸೈನಾ ಪ್ರದರ್ಶನವೂ ಕುಗ್ಗಿತ್ತು.

ಸೈನಾ ಟ್ವೀಟ್‌ನಲ್ಲಿ ಹೇಳಿದ್ದು ಏನು?: ಪುನಃ ಗೋಪಿಚಂದ್‌ ಅಕಾಡೆಮಿಗೆ ಮರಳುತ್ತಿರುವ ಬಗ್ಗೆ ಸೈನಾ ನೆಹ್ವಾಲ್‌ ಸರಣಿ ಟ್ವೀಟ್‌ ಮಾಡಿದ್ದಾರೆ. ಮೊದಲ ಟ್ವೀಟ್‌ನಲ್ಲಿ ತಾನು ಗೋಪಿಚಂದ್‌ ಅಕಾಡೆಮಿಗೆ ಮರಳುವ ಬಗ್ಗೆ ಚಿಂತಿಸುತ್ತಿದ್ದೇನೆ. ಈ ಬಗ್ಗೆ ಮಾತುಕತೆ ನಡೆಯುತ್ತಿದೆ ಎಂದು ತಿಳಿಸಿದ್ದರು. ಆ ನಂತರ ಗೋಪಿಚಂದ್‌ ಮಾರ್ಗದರ್ಶನದಲ್ಲಿ ಅಭ್ಯಾಸ ನಡೆಸಲು ಅನುಮತಿ ಸಿಕ್ಕಿದೆ. ಈ ಹಿಂದೆ ತರಬೇತಿ ನೀಡಿದ ವಿಮಲ್‌ ಕುಮಾರ್‌ ಸರ್‌ಗೆ ಧನ್ಯವಾದ ತಿಳಿಸುತ್ತೇನೆ ಎಂದು ಹೇಳಿದ್ದಾರೆ.

ಗೋಪಿಗೂ-ಸೈನಾಗೂ ಮುನಿಸುಂಟಾಗಿದ್ದೇಕೆ?
ರಾಷ್ಟ್ರೀಯ ಕೋಚ್‌ ಕೂಡ ಆಗಿರುವ ಗೋಪಿಚಂದ್‌ ಸೈನಾ, ಸಿಂಧು, ಪಿ.ಕಶ್ಯಪ್‌, ಕೆ.ಶ್ರೀಕಾಂತ್‌…ಸೇರಿದಂತೆ ಹಲವರಿಗೆ ಮಾರ್ಗದರ್ಶನ ನೀಡುತ್ತಿದ್ದರು. ಆರಂಭದಲ್ಲಿ ಸೈನಾಗೆ ಗೋಪಿಚಂದ್‌ ಹೆಚ್ಚಿನ ಮಾರ್ಗದರ್ಶನ ನೀಡುತ್ತಿದ್ದರು. ಆದರೆ ನಂತರದ ಹಂತದಲ್ಲಿ ಗೋಪಿ ಇತರೆ ಆಟಗಾರರ ಕಡೆ ಹೆಚ್ಚು ಲಕ್ಷ್ಯ ನೀಡುತ್ತಿದ್ದಾರೆ, ತನ್ನ ಕಡೆಗೆ ನಿರ್ಲಕ್ಷ್ಯ ತೋರುತ್ತಿದ್ದಾರೆ. ಇದರಿಂದ ಸೈನಾ ತನ್ನ ಪ್ರದರ್ಶನ ಮಟ್ಟ ಕುಗ್ಗುತ್ತಿದೆ ಎಂದು ಗೋಪಿಚಂದ್‌ ಅಕಾಡೆಮಿ ಬಿಟ್ಟು ಬೆಂಗಳೂರಿಗೆ ಆಗಮಿಸಿದ್ದರು.

ವಿಮಲ್‌ ಮಾರ್ಗದರ್ಶನದಲ್ಲಿ ಸೈನಾ ವಿಶ್ವ ನಂ.1
2014 ಸೆಪ್ಟೆಂಬರ್‌ 2 ರಿಂದ ವಿಮಲ್‌ ಕುಮಾರ್‌ ಮಾರ್ಗದರ್ಶನದಲ್ಲಿ ಸೈನಾ ಅಭ್ಯಾಸ ನಡೆಸುತ್ತಿದ್ದರು. ಇದೇ ಹಂತದಲ್ಲಿ ಸೈನಾ ವಿಶ್ವ ನಂ.1ನೇ ಸ್ಥಾನಕ್ಕೇರಿದ್ದರು. ಈ ಸಾಧನೆ ಮಾಡಿದ ಭಾರತದ ಪ್ರಥಮ ಮಹಿಳೆ ಎಂಬ ಖ್ಯಾತಿ ಪಡೆದಿದ್ದರು. 2015ರ ವಿಶ್ವಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಮತ್ತು 2017ರ ವಿಶ್ವಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ವಿವಿಧ ಸೂಪರ್‌ ಸೀರೀಸ್‌ ಟ್ರೋಫಿಯನ್ನು ಪಡೆದಿದ್ದಾರೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.