ಲಂಕಾ ಕ್ರಿಕೆಟ್ ನಲ್ಲಿ ವಿವಾದ: ಮಂಡಳಿ ವಿರುದ್ಧ ಬಂಡೆದ್ದ ದಿಮುತ್,ಚಂಡಿಮಾಲ್, ಮ್ಯಾಥ್ಯೂಸ್
Team Udayavani, May 22, 2021, 8:40 AM IST
ಕೊಲಂಬೊ: ಶ್ರೀಲಂಕಾ ಕ್ರಿಕೆಟ್ನಲ್ಲಿ ವೇತನ ವಿವಾದವೊಂದು ಹುಟ್ಟಿಕೊಂಡಿದೆ. ಉಳಿದ ದೇಶಗಳಿಗೆ ಹೋಲಿಸಿದರೆ ತಮಗೆ ನೀಡುವ ವೇತನ ಕಡಿಮೆಯಾಯಿತು ಎಂದು ಬಂಡೆದ್ದ ಕ್ರಿಕೆಟಿಗರು, ಮಂಡಳಿಯ ಒಪ್ಪಂದ ಪತ್ರಕ್ಕೆ ಸಹಿ ಹಾಕಲು ನಿರಾಕರಿಸಿದ್ದಾರೆ.
ಟೆಸ್ಟ್ ನಾಯಕ ದಿಮುತ್ ಕರುಣರತ್ನೆ ಸೇರಿದಂತೆ ಹಿರಿಯ ಕ್ರಿಕೆಟಿಗರಾದ ದಿನೇಶ್ ಚಂಡಿಮಾಲ್, ಏಂಜೆಲೊ ಮ್ಯಾಥ್ಯೂಸ್ ಮೊದಲಾದವರು ಒಡಂಬಡಿಕೆಗೆ ಸಹಿ ಹಾಕುವುದಿಲ್ಲ ಎಂದು ಪಟ್ಟುಹಿಡಿದಿದ್ದಾರೆ. ನಿಜಕ್ಕೂ ಇದೊಂದು ಆಘಾತಕಾರಿ ಹಾಗೂ ನಿರಾಶಾದಾಯಕ ಬೆಳವಣಿಗೆ ಎಂದು ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:ಸೈಬರ್ ದಾಳಿ: ಏರ್ ಇಂಡಿಯಾ ಸರ್ವರ್ ನಿಂದ 45 ಲಕ್ಷ ಪ್ರಯಾಣಿಕರ ವೈಯಕ್ತಿಕ ಮಾಹಿತಿ ಸೋರಿಕೆ!
ಜೂನ್ 3 ಗಡುವು: ಇದು ಶೀಘ್ರದಲ್ಲಿ ಇತ್ಯರ್ಥವಾಗದೇ ಹೋದರೆ ಮುಂಬರುವ ಭಾರತ ವಿರುದ್ಧದ ಸರಣಿಗೆ ಅಡಚಣೆಯಾಗುವ ಸಾಧ್ಯತೆ ಇದೆ. ಇಲ್ಲವೇ ಶ್ರೀಲಂಕಾ ಕೂಡ ದ್ವಿತೀಯ ದರ್ಜೆಯ ತಂಡವನ್ನೇ ಕಣಕ್ಕೆ ಇಳಿಸಬೇಕಾಗುತ್ತದೆ. ಸಹಿ ಹಾಕಲು ಜೂನ್ 3 ಅಂತಿಮ ದಿನವಾಗಿದೆ ಎಂದು ಶ್ರೀಲಂಕಾ ಮಂಡಳಿ ಸೂಚಿಸಿದೆ.
ಲಂಕಾ- ಭಾರತ ನಡುವೆಜುಲೈ 13ರಿಂದ 27ರವರೆಗೆ ಈ ಸರಣಿ ನಡೆಯಲಿದೆ. ಈ ಅವಧಿಯಲ್ಲಿ ಟೀಂ ಇಂಡಿಯಾ ಲಂಕಾ ವಿರುದ್ಧ ಮೂರು ಏಕದಿನ ಪಂದ್ಯಗಳು ಮತ್ತು ಮೂರು ಟಿ20 ಪಂದ್ಯಗಳನ್ನಾಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ