ಮಿಂಚಿದ ಸಮರ್ಥ್, ಪಡಿಕ್ಕಲ್, ಪ್ರಸಿಧ್ ಕೃಷ್ಣ: 291 ರನ್ ಅಂತರದ ಜಯ ಸಾಧಿಸಿದ ಕರ್ನಾಟಕ


Team Udayavani, Feb 22, 2021, 4:07 PM IST

ಮಿಂಚಿದ ಸಮರ್ಥ್, ಪಡಿಕ್ಕಲ್, ಪ್ರಸಿದ್ದ ಕೃಷ್ಣ: 291 ರನ್ ಅಂತರದ ಜಯ ಸಾಧಿಸಿದ ಕರ್ನಾಟಕ

ಸಂಗ್ರಹ ಚಿತ್ರ

ಬೆಂಗಳೂರು: ಬಿಹಾರ ತಂಡದ ವಿರುದ್ಧ ನಡೆದ ವಿಜಯ್ ಹಜಾರೆ ಟ್ರೋಫಿ ಪಂದ್ಯದಲ್ಲಿ ಕರ್ನಾಟಕ ತಂಡ ಭರ್ಜರಿ ಜಯ ಸಾಧಿಸಿದೆ. ನಾಯಕ ಸಮರ್ಥ್ ಆರ್. ಭರ್ಜರಿ ಶತಕ, ದೇವದತ್ತ್ ಪಡಿಕ್ಕಲ್ ಮತ್ತು ಸಿದ್ದಾರ್ಥ್ ಅರ್ಧಶತಕ, ಬೌಲರ್ ಗಳ ಬಿಗುದಾಳಿಯ ನೆರವಿನಿಂದ ತಂಡ 291 ರನ್ ಗಳ ಭಾರೀ ಅಂತರದಿಂದ ಗೆಲುವು ಕಂಡಿತು.

ಟಾಸ್ ಗೆದ್ದ ಬಿಹಾರ ಮೊದಲು ಕರ್ನಾಟಕ ತಂಡವನ್ನು ಮೊದಲು ಬ್ಯಾಟಿಂಗ್ ಗೆ ಆಹ್ವಾನಿಸಿತು. ಆರಂಭಿಕರಾದ ನಾಯಕ ಸಮರ್ಥ್ ಮತ್ತು ದೇವದತ್ತ ಪಡಿಕ್ಕಲ್ ಬಿಹಾರದ ಎಲ್ಲಾ ಲೆಕ್ಕಾಚಾರವನ್ನು ಬುಡಮೇಲು ಮಾಡಿದರು. ಸಮರ್ಥ್ ಶತಕ ಸಿಡಿಸಿ ಮಿಂಚಿದರೆ, ಪಡಿಕ್ಕಲ್ ಶತಕದಂಚಿನಲ್ಲಿ ಎಡವಿದರು.

144 ಎಸೆತ ಎದುರಿಸಿದ ಸಮರ್ಥ್ ಅಜೇಯ 158 ರನ್ ಬಾರಿಸಿದರು. ಪಡಿಕ್ಕಲ್ 97 ರನ್ ಗಳಿಸಿದ್ದಾಗ ಔಟಾದರು. ಸಿದ್ದಾರ್ಥ್ ಕೇವಲ 55 ಎಸೆತಗಳಲ್ಲಿ ನಾಲ್ಕು ಸಿಕ್ಸರ್ ನೆರವಿನಿಂದ 76 ರನ್ ಗಳಿಸಿದರು. ತಂಡ 50 ಓವರ್ ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 354 ರನ್ ಕಲೆಹಾಕಿತು.

ಇದನ್ನೂ ಓದಿ:ಸರ್ದಾರ್‌ ಪಟೇಲ್‌ ಸ್ಟೇಡಿಯಂ : ಕ್ರಿಕೆಟ್‌ ಲೋಕಕ್ಕೆ ನೂತನ ಹೆಬ್ಟಾಗಿಲು

ಬೃಹತ್ ಮೊತ್ತ ಬೆನ್ನಟ್ಟಿದ ಬಿಹಾರ ತಂಡ ಯಾವ ಹಂತದಲ್ಲೂ ಗೆಲುವಿನ ಹುರುಪು ತೋರಲಿಲ್ಲ. ಕರ್ನಾಟಕದ ಬೌಲರ್ ಗಳ ದಾಳಿಗೆ ಕಂಗಾಲಾಯಿತು. 6.2 ಓವರ್ ಕಳೆಯುವಷ್ಟರಲ್ಲಿ ಬಿಹಾರದ ಅರ್ಧ ತಂಡ ಪೆವಿಲಿಯನ್ ಸೇರಿಯಾಗಿತ್ತು. ಆರಂಭಿಕ ಆಟಗಾರ ಎಸ್.ಗನಿ 37 ರನ್ ಬಾರಿಸಿದ್ದೆ ಬಿಹಾರದ ಉತ್ತಮ ಸಾಧನೆ.

ಉಳಿದಂತೆ ನಾಯಕ ಅಶುತೋಷ್ ಅಮನ್ ಮತ್ತು ಅನುಜ್ ರಾಜ್ ಎರಡಂಕಿ ಮೊತ್ತ ಕಲೆಹಾಕಿದರು. ಬಿಹಾರ ಪರ ನಾಲ್ವರು ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. 27.2 ಓವರ್ ಗೆ ಬಿಹಾರ ತಂಡ 87 ರನ್ ಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು.

ಕರ್ನಾಟಕ ಪರ ಪ್ರಸಿಧ್ ಕೃಷ್ಣ ನಾಲ್ಕು ವಿಕೆಟ್ ಕಬಳಿಸಿದರೆ, ಅಭಿಮನ್ಯು ಮಿಥುನ್ ಮತ್ತು ಶ್ರೇಯಸ್ ಗೋಪಾಲ್ ತಲಾ ಎರಡು ವಿಕೆಟ್ ಪಡೆದರು.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.