ಸಾನಿಯಾ ಪಾಕಿಸ್ತಾನವನ್ನು ಖಂಡಿಸಿಲ್ಲ!​​​​​​​


Team Udayavani, Feb 19, 2019, 12:30 AM IST

sania-pak.jpg

ನವದೆಹಲಿ: ಪಾಕಿಸ್ತಾನಿ ಕ್ರಿಕೆಟಿಗ ಶೋಯಿಬ್‌ ಮಲಿಕ್‌ರನ್ನು ವಿವಾಹವಾಗಿರುವ ಭಾರತದ ವಿಶ್ವವಿಖ್ಯಾತ ಟೆನಿಸ್‌ ಆಟಗಾರ್ತಿ ಸಾನಿಯಾ ಮಿರ್ಜಾ, ಮತ್ತೂಂದು ವಿವಾದದಲ್ಲಿ ಸಿಕ್ಕಿಕೊಂಡಿದ್ದಾರೆ. 

ಕಾಶ್ಮೀರ ಘಟನೆಗೆ ಸಾನಿಯಾ ಪ್ರತಿಕ್ರಿಯಿಸಿಲ್ಲ ಎಂದು ಅಲ್ಲಲ್ಲಿ ಧ್ವನಿಗಳು ಹೊರಡುತ್ತಿದ್ದಂತೆ, ಸುದೀರ್ಘ‌ ಟ್ವೀಟ್‌ನಲ್ಲಿ (ಚಿತ್ರರೂಪದಲ್ಲಿ) ಘಟನೆಯನ್ನು ಖಂಡಿಸಿದ್ದಾರೆ. ಅದರ ಬೆನ್ನಲ್ಲೇ ಸಾನಿಯಾ, ಪಾಕಿಸ್ತಾನದ ವಿರುದ್ಧ ಸೊಲ್ಲೆತ್ತಿಲ್ಲ ಎಂಬ ಅಪಸ್ವರ ಕೇಳಿಬಂದಿದೆ.

ಟ್ವೀಟ್‌ನಲ್ಲಿ ಸಾನಿಯಾ ಹೇಳಿದ್ದೇನು?: ಕಾಶ್ಮೀರ ಘಟನೆಗೆ ತಮ್ಮ ಸಂತಾಪವನ್ನು ಸಾನಿಯಾ ತುಸು ದೀರ್ಘ‌ವಾಗಿಯೇ ಪ್ರಕಟಿಸಿದ್ದಾರೆ. ಅಲ್ಲದೇ ತಮ್ಮನ್ನು ಅನುಮಾನಿಸುವವರ ವಿರುದ್ಧ ಕಿಡಿಕಾರಿದ್ದಾರೆ. “ತಾರೆಯರು ಘಟನೆಯನ್ನು ಸಾಮಾಜಿಕ ತಾಣದಲ್ಲಿ ಖಂಡಿಸಬೇಕು ಎನ್ನುವವರಿಗಾಗಿ ನಾನು ಈ ಪೋಸ್ಟ್‌ ಮಾಡಿದ್ದೇನೆ. ನಾವು ಸಾಮಾಜಿಕ ತಾಣದಲ್ಲಿ ದೇಶಭಕ್ತಿಯನ್ನು, ನಮ್ಮ ಬದ್ಧತೆಯನ್ನು ಪ್ರದರ್ಶಿಸಬೇಕೆಂದು ಬಯಸುತ್ತಾರೆ. ಯಾಕೆ? ಕಾರಣ ನಾವು ತಾರೆಯರು. ಕೆಲವು ಪ್ರಕ್ಷುಬ್ಧ ಮನಸುಗಳಿಗೆ ತಮ್ಮ ಸಿಟ್ಟನ್ನು ಎಲ್ಲಿ ತೋರಿಸಬೇಕೆಂದು ಗೊತ್ತಾಗುವುದಿಲ್ಲ. ಆದ್ದರಿಂದ ಸಿಗುವ ಎಲ್ಲ ಅವಕಾಶಗಳನ್ನು ಬಳಸಿಕೊಂಡು ದ್ವೇಷವನ್ನು ಬಿತ್ತಬೇಕೆ’? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

“ಪುಲ್ವಾಮ ಘಟನೆ ಭಾರತದ ಪಾಲಿಗೆ ಕಪ್ಪುದಿನ. ಇಂತಹ ಘಟನೆ ಭಾರತದಲ್ಲಿ ಮತ್ತೆಂದೂ ನಡೆಯದಿರಲಿ ಎಂದು ನಾನು ಬಯಸುತ್ತೇನೆ. ನೊಂದವರ ಜೊತೆಗೆ ನಾನಿದ್ದೇನೆ. ನಾನು ನನ್ನ ಕರ್ತವ್ಯ ಮಾಡುತ್ತೇನೆ, ನೀವು ನಿಮ್ಮ ಕೆಲಸ ಮಾಡಿ. ದಯವಿಟ್ಟು ದ್ವೇಷ ಬಿತ್ತುವ ಕೆಲಸ ಮಾಡಬೇಡಿ’ ಎಂದು ಸಾನಿಯಾ ಮನವಿ ಮಾಡಿದ್ದಾರೆ. ಈ ಸುದೀರ್ಘ‌ ಪೋಸ್ಟ್‌ನಲ್ಲಿ ಎಲ್ಲೂ ಅವರು ಪಾಕಿಸ್ತಾನದ ಹೆಸರನ್ನು ಪ್ರಸ್ತಾಪಿಸದಿರುವುದಕ್ಕೆ, ಅದರ ವಿರುದ್ಧ ಕಿಡಿಕಾರದಿರುವುದಕ್ಕೆ ಕೆಲವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಹಿಂದೆಯೂ ಸಾನಿಯಾ ಸಾಮಾಜಿಕ ತಾಣದಲ್ಲಿ ತೀವ್ರ ಟೀಕೆಗೊಳಗಾಗಿದ್ದರು. ದೇಶದ ಬಗ್ಗೆ ಅವರ ಬದ್ಧತೆಯನ್ನು ಪ್ರಶ್ನಿಸಲಾಗಿತ್ತು. ಕೆಲವು ಕಾಲ ಸಾನಿಯಾ ಸಾಮಾಜಿಕ ತಾಣದಿಂದಲೇ ಹೊರಗುಳಿದಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.