ಭಾರತ ಹಾಕಿ ಮಾಜಿ ನಾಯಕ ಸರ್ದಾರ್‌ಗೆ ಜೀವದಾನ


Team Udayavani, Feb 21, 2018, 6:40 AM IST

Sardar-750.jpg

ಹೊಸದಿಲ್ಲಿ: ಮಲೇಶ್ಯದ ಇಪೋನಲ್ಲಿ ಮಾ. 3ರಿಂದ ಆರಂಭವಾಗುವ 27ನೇ ಸುಲ್ತಾನ್‌ ಅಜ್ಲಾನ್‌ ಶಾ ಕಪ್‌ ಹಾಕಿ ಕೂಟದಲ್ಲಿ ಭಾರತೀಯ ತಂಡವನ್ನು ಸರ್ದಾರ್‌ ಸಿಂಗ್‌ ಮುನ್ನಡೆಸಲಿದ್ದಾರೆ.

ಆರನೇ ರ್‍ಯಾಂಕಿನ ಭಾರತ ಸಹಿತ ವಿಶ್ವದ ನಂಬರ್‌ ವನ್‌ ಆಸ್ಟ್ರೇಲಿಯ, ದ್ವಿತೀಯ ರ್‍ಯಾಂಕಿನ ಆರ್ಜೆಂಟೀನ, ಇಂಗ್ಲೆಂಡ್‌, ಅಯರ್‌ಲ್ಯಾಂಡ್‌ ಮತ್ತು ಆತಿಥೇಯ ಮಲೇಶ್ಯ ಈ ಕೂಟದಲ್ಲಿ ಆಡಲಿದೆ. ಫೈನಲ್‌ ಪಂದ್ಯ ಮಾ. 10ರಂದು ನಡೆಯಲಿದೆ.

2018ರಲ್ಲಿ ಸಾಕಷ್ಟು ಹಾಕಿ ಕೂಟಗಳಲ್ಲಿ ಭಾಗವಹಿಸುವ ಕಾರಣಕ್ಕೆ ಸರ್ದಾರ್‌ ಸಿಂಗ್‌ ಅವರಿಗೆ ಕೆಲವೊಂದು ಕೂಟಗಳಿಗೆ ವಿಶ್ರಾಂತಿ ನೀಡಲಾಗಿತ್ತು ಮತ್ತು ಯುವ ಆಟಗಾರರಿಗೆ ಅವಕಾಶ ಕಲ್ಪಿಸಲಾಗಿತ್ತು. ಇದೀಗ ಸರ್ದಾರ್‌ ಅವರು ತಂಡಕ್ಕೆ ಮರಳಿದ್ದು ಸುಲ್ತಾನ್‌ ಅಜ್ಲಾನ್‌ ಶಾ ಕೂಟದಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. 2020ರ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಆಡುವ ಬಯಕೆ ವ್ಯಕ್ತಪಡಿಸಿದ್ದರಿಂದ ಸರ್ದಾರ್‌ ಅವರನ್ನು ತಂಡಕ್ಕೆ 
ಸೇರಿಸಿಕೊಳ್ಳಲಾಗಿದೆ.

ಕೋರ್‌ ಬಣದ ನಾಯಕರಲ್ಲಿ ಸರ್ದಾರ್‌ ಒಬ್ಬರಾಗಿದ್ದಾರೆ. ಮನ್‌ಪ್ರೀತ್‌ ಸಿಂಗ್‌ ಅವರ ಅನುಪಸ್ಥಿತಿಯಲ್ಲಿ ತಂಡವನ್ನು ಮುನ್ನಡೆಸಲು ಅವರನ್ನು ಆಯ್ಕೆ ಮಾಡಲಾಗಿದೆ. ಅವರೊಬ್ಬ ಅತ್ಯಂತ ಅನುಭವಿ ಆಟಗಾರ. ಈ ಹಿಂದಿನ ಎರಡು ಕೂಟಗಳನ್ನು ತಪ್ಪಿಸಿಕೊಂಡಿರುವ ಅವರಿಗೆ ತನ್ನ ಸಾಮರ್ಥ್ಯ ಪ್ರದರ್ಶಿಸಲು ಇದೊಂದು ಒಳ್ಳೆಯ ಅವಕಾಶ ಎಂದು ಕೋಜ್‌ ಜೋರ್ಡ್‌ ಮರಿನೆ ಹೇಳಿದ್ದಾರೆ.

ರಮಣದೀಪ್‌ ಸಿಂಗ್‌ ಅವರನ್ನು ತಂಡದ ಉಪನಾಯಕರನ್ನಾಗಿ ಹೆಸರಿಸಲಾಗಿದೆ. ತಂಡದಲ್ಲಿ ಮೂವರು (ಮನ್‌ದೀಪ್‌ ಮೋರ್‌, ಸುಮಿತ್‌ ಕುಮಾರ್‌ ಮತ್ತು ಶಿಲಾನಂದ್‌ ಲಾಕ್ರ) ಹೊಸಬರಿದ್ದಾರೆ. ಸುಮಿತ್‌ ಸದ್ಯ ಸಾಗುತ್ತಿರುವ ರಾಷ್ಟ್ರೀಯ ಶಿಬಿರದಲ್ಲಿ ತರಬೇತಿ ಪಡೆಯುತ್ತಿದ್ದಾರೆ.  ಈ ಮೂವರು ಕಳೆದ ವರ್ಷ ನಡೆದ ಸುಲ್ತಾನ್‌ ಆಫ್ ಜೊಹೋರ್‌ ಕಪ್‌ ಹಾಕಿ ಕೂಟದಲ್ಲಿ ಭಾರತೀಯ ತಂಡ ಕಂಚಿನ ಪದಕ ಗೆಲ್ಲಲು ನೆರವಾಗಿದ್ದರು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.