ದ್ರೋಣಾಚಾರ್ಯ ಪಟ್ಟಿಯಿಂದ ಸತ್ಯನಾರಾಯಣ ವಜಾ 


Team Udayavani, Aug 20, 2017, 6:45 AM IST

Ban20081713Medn.jpg

ಹೊಸದಿಲ್ಲಿ: ಕ್ರಿಮಿನಲ್‌ ಮಾನನಷ್ಟ ಪ್ರಕರಣದ ಹಿನ್ನೆಲೆಯಲ್ಲಿ ಕೋಚ್‌ ಕರ್ನಾಟಕದ ಸತ್ಯನಾರಾಯಣ ಅವರ ಹೆಸರನ್ನು ಪ್ರತಿಷ್ಠಿತ ದ್ರೋಣಾಚಾರ್ಯ ಶಿಫಾರಸು ಪಟ್ಟಿಯಿಂದ ಕೇಂದ್ರ ಸರಕಾರ ಕಿತ್ತು ಹಾಕಿದೆ. ಉಳಿದಂತೆ ಖೇಲ್‌ ರತ್ನ ಮತ್ತು ಅರ್ಜುನ ಪ್ರಶಸ್ತಿಗೆ ಶಿಫಾರಸು ಮಾಡಲಾದ ಪಟ್ಟಿಯಲ್ಲಿ ಯಾವುದೇ ಬದಲಾವಣೆ ಮಾಡದಿರಲು ಕ್ರೀಡಾ ಸಚಿವಾಲಯ ನಿರ್ಧರಿಸಿದೆ.

ಶನಿವಾರ ಈ ವಿಷಯವನ್ನು ಕೇಂದ್ರ ಕ್ರೀಡಾ ಸಚಿವಾಲಯ ಅಧಿಕಾರಿಗಳು ಮಾಧ್ಯಮಗಳಿಗೆ ಸ್ಪಷ್ಟಪಡಿಸಿದರು. ಸತ್ಯ ನಾರಾಯಣ ರಿಯೋ ಪ್ಯಾರಾಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಭಾರತದ ಹೈಜಂಪ್‌ ಸ್ಪರ್ಧಿ ತಂಗವೇಲು ಮರಿಯಪ್ಪನ್‌ ಅವರಿಗೆ ತರಬೇತಿ ನೀಡಿದ್ದರು. ಈ ಸಲ ಪ್ರತಿಷ್ಠಿತ  ದ್ರೋಣಾ ಚಾರ್ಯ ಗೌರವಕ್ಕೆ ಸತ್ಯನಾರಾಯಣ ಅವರ ಹೆಸರನ್ನು ಶಿಫಾರಸು ಮಾಡಲಾಗಿತ್ತು. ಈ ಬೆನ್ನಲ್ಲೇ ಕೆಲವರು ಇದಕ್ಕೆ ತೀವ್ರ ಆಕ್ಷೇಪ  ವ್ಯಕ್ತಪಡಿಸಿದ್ದರು. ಇದನ್ನು ಆಲಿಸಿದ ಕೇಂದ್ರ ಕ್ರೀಡಾ ಸಚಿವಾಲಯ ಅವರ ಹೆಸರನ್ನು ಶಿಫಾರಸು ಪಟ್ಟಿಯಿಂದ ಕಿತ್ತು ಹಾಕಲು ನಿರ್ಧರಿಸಿತು.  ಸತ್ಯನಾರಾಯಣ ವಿರುದ್ಧದ ಪ್ರಕರಣ ಇನ್ನು ವಿಚಾರಣೆಯಲ್ಲಿದೆ. ಹೀಗಾಗಿ ಅವರ ಹೆಸರನ್ನು ಪ್ರಸ್ತುತ ವರ್ಷದ ದ್ರೋಣಾಚಾರ್ಯ ಪಟ್ಟಿಯಿಂದ ಕಿತ್ತು ಹಾಕ ಲಾಗುತ್ತಿದೆ. ಅವರು ಆರೋಪದಿಂದ ಮುಕ್ತರಾಗುವ ತನಕ ಆಯ್ಕೆಗೆ ಪರಿಗಣಿಸಲಾಗುವುದಿಲ್ಲ ಎಂದು ಕ್ರೀಡಾ ಸಚಿವಾಲಯ ಸ್ಪಷ್ಟಪಡಿಸಿದೆ.

ಆ.13ರಂದೇ ಕೇಂದ್ರಕ್ಕೆ ಪತ್ರ ಬರೆದಿದ್ದ ಸತ್ಯನಾರಾಯಣ ಆಗಸ್ಟ್‌ 13ರಂದು ಕೇಂದ್ರ ಕ್ರೀಡಾ ಸಚಿವಾಲಯಕ್ಕೆ ಸತ್ಯನಾರಾ ಯಣ ಪತ್ರ ಬರೆದಿದ್ದರು. ಕೆಲವರು  ಹೊಟ್ಟೆ ಉರಿಯಿಂದ ತನ್ನ ವಿರುದ್ಧ ವೈಯಕ್ತಿಕ ಹಠ ಸಾಧಿಸುತ್ತಿದ್ದಾರೆ. ನನ್ನ ವಿರುದ್ಧ ಅಭಿಯಾನ ಹಮ್ಮಿಕೊಂಡಿದ್ದಾರೆ. ನಿರಪರಾಧಿ ಎನ್ನುವುದನ್ನು ಸಾಬೀತುಪಡಿಸಲು ಅವಕಾಶ ನೀಡಬೇಕು ಎಂದು ಅಲವತ್ತುಕೊಂಡಿದ್ದರು.

ಕ್ರೀಡಾ ಸಚಿವಾಲಯ ನೇಮಕ ಮಾಡಿದ ಆಯ್ಕೆ ಸಮಿತಿ ಈ ಬಾರಿ ಇಬ್ಬರು ಪ್ಯಾರಾ ಆ್ಯತ್ಲೀಟ್‌ ಸಹಿತ 17 ಮಂದಿಯ ಹೆಸರನ್ನು ಅರ್ಜುನ ಪ್ರಶಸ್ತಿಗೆ ಮತ್ತು ದೇಶದ ಅತ್ಯುನ್ನತ ಕ್ರೀಡಾ ಗೌರವ ರಾಜೀವ್‌ ಗಾಂಧಿ ಖೇಲ್‌ ರತ್ನಕ್ಕೆ ಹಾಕಿ ತಾರೆ ಸರ್ದಾರ್‌ ಸಿಂಗ್‌ ಮತ್ತು ರಿಯೋ ಪ್ಯಾರಾಲಿಂಪಿಕ್ಸ್‌ ಚಿನ್ನ ವಿಚೇತ ದೇವೇಂದ್ರ ಜಜಾರಿಯಾ ಅವರ ಹೆಸರನ್ನು ಶಿಫಾರಸು ಮಾಡಿತ್ತು. 

ಟಾಪ್ ನ್ಯೂಸ್

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.