ಚಾಂಪಿಯನ್‌ ಪಟ್ಟ ಅಲಂಕರಿಸಿದ ಸೌರಭ್‌ ವರ್ಮ

ಹೈದರಾಬಾದ್‌ ಓಪನ್‌ ಬ್ಯಾಡ್ಮಿಂಟನ್‌ ಟೂರ್ನಿ

Team Udayavani, Aug 12, 2019, 5:29 AM IST

Sourabh-Verma1

ಹೈದರಾಬಾದ್‌: ಹಾಲಿ ರಾಷ್ಟ್ರೀಯ ಚಾಂಪಿಯನ್‌ ಸೌರಭ್‌ ವರ್ಮ ‘ಹೈದರಾಬಾದ್‌ ಓಪನ್‌’ ಬ್ಯಾಡ್ಮಿಂಟನ್‌ ಕಿರೀಟ ಏರಿಸಿಕೊಂಡಿದ್ದಾರೆ. ರವಿವಾರ ನಡೆದ ಪುರುಷರ ಸಿಂಗಲ್ಸ್ ವಿಭಾಗದ ರೋಚಕ ಫೈನಲ್ನಲ್ಲಿ ಅವರು ಸಿಂಗಾಪುರದ ಲೊಹ್‌ ಕೀನ್‌ ವ್ಯೂ ವಿರುದ್ಧ 21-13, 14-21, 21-16 ಅಂತರದ ಗೆಲುವು ಸಾಧಿಸಿದರು.

ಸೌರಭ್‌ ಮತ್ತು ವಿಶ್ವದ 44ನೇ ರ್‍ಯಾಂಕಿಂಗ್‌ ಆಟಗಾರ ವ್ಯೂ ನಡುವಿನ ಫೈನಲ್ 52 ನಿಮಿಷಗಳ ತನಕ ಸಾಗಿತು. 26ರ ಹರೆಯದ ಮಧ್ಯಪ್ರದೇಶದ ಶಟ್ಲರ್‌ ಮೇ ತಿಂಗಳಲ್ಲಿ ಸ್ಲೊವೇನಿಯನ್‌ ಓಪನ್‌ ಪ್ರಶಸ್ತಿ ಗೆದ್ದು ಸುದ್ದಿಯಾಗಿದ್ದರು. ಕಳೆದ ವರ್ಷ ಡಚ್ ಓಪನ್‌ ಮತ್ತು ರಶ್ಯನ್‌ ಓಪನ್‌ ಚಾಂಪಿಯನ್‌ ಆಗಿದ್ದರು. ಈಗ ತಮ್ಮ ಸಾಧನೆಯ ಕಿರೀಟಕ್ಕೆ ತವರಿನ ಗರಿಯೊಂದನ್ನು ಸಿಕ್ಕಿಸಿಕೊಂಡಿದ್ದಾರೆ.

ಸೌರಭ್‌ ಭರ್ಜರಿ ಆರಂಭ
ಸೌರಭ್‌ ವರ್ಮ ಅವರದು ಭರವಸೆಯ ಆರಂಭವಾಗಿತ್ತು. 6-2ರ ಮುನ್ನಡೆ ಬಳಿಕ 11-4ರ ಭರ್ಜರಿ ಲೀಡ್‌ ಗಳಿಸಿದರು. ಹೀಗಾಗಿ ಮೊದಲ ಗೇಮ್‌ ಸುಲಭದಲ್ಲೇ ಭಾರತೀಯನ ವಶವಾಯಿತು.

ದ್ವಿತೀಯ ಗೇಮ್‌ನಲ್ಲೂ ಸೌರಭ್‌ 5-0 ಮುನ್ನಡೆಯೊಂದಿಗೆ ಮುನ್ನುಗ್ಗಿದರು. ಬಳಿಕ ವ್ಯೂ ಆಕ್ರಮಣಕಾರಿ ಆಟಕ್ಕಿಳಿದು 10-10 ಸಮಬಲ ಸಾಧಿಸುವಲ್ಲಿ ಯಶಸ್ವಿಯಾದರು. ವಿರಾಮದ ಬಳಿಕ ಸಿಂಗಾಪುರ್‌ ಶಟ್ಲರ್‌ ಮೇಲುಗೈ ಸಾಧಿಸಿ ಪಂದ್ಯವನ್ನು ಸಮಬಲಕ್ಕೆ ತಂದರು.

ನಿರ್ಣಾಯಕ ಗೇಮ್‌ ತೀವ್ರ ಪೈಪೋಟಿ ಯಿಂದ ಕೂಡಿತ್ತು. ಬ್ರೇಕ್‌ ವೇಳೆ ಸೌರಭ್‌ 11-10 ಅಂತರದ ಸಣ್ಣ ಮುನ್ನಡೆ ಹೊಂದಿದ್ದರು. ಬಳಿಕ ಇದನ್ನು ವಿಸ್ತರಿಸುತ್ತ ಸಾಗಿ ವ್ಯೂಗೆ ಬಾಗಿಲು ಮುಚ್ಚುವಲ್ಲಿ ಯಶಸ್ವಿಯಾದರು.

ಅಶ್ವಿ‌ನಿ-ಸಿಕ್ಕಿ ರೆಡ್ಡಿ ಪರಾಭವ
ವನಿತಾ ಡಬಲ್ಸ್‌ನಲ್ಲಿ ಭಾರತದ ಅಗ್ರ ಶ್ರೇಯಾಂಕದ ಅಶ್ವಿ‌ನಿ ಪೊನ್ನಪ್ಪ-ಎನ್‌. ಸಿಕ್ಕಿ ರೆಡ್ಡಿ ಫೈನಲ್ ಪಂದ್ಯದಲ್ಲಿ ಎಡವಿ ಪ್ರಶಸ್ತಿ ವಂಚಿತರಾದರು. ಕೊರಿಯಾದ ಬೇಕ್‌ ಹಾ ನಾ-ಜಂಗ್‌ ಕ್ಯುಂಗ್‌ ಯುನ್‌ ವಿರುದ್ಧ ಇವರು 17-21, 17-21 ನೇರ ಗೇಮ್‌ಗಳಲ್ಲಿ ಪರಾಭವಗೊಂಡರು.

ನನಗೆ ಯಾರೂ ಪ್ರಾಯೋಜಕರಿಲ್ಲ. ಯಾರಿಂದಲೂ ನೆರವು ಲಭಿಸಿಲ್ಲ. ಭಾರತವನ್ನು ಪ್ರತಿನಿಧಿಸಿದರೂ ಪರಿಸ್ಥಿತಿ ಬದಲಾಗಿಲ್ಲ. ಕೂಟದ ಖರ್ಚನ್ನೆಲ್ಲ ನಾನೇ ನೋಡಿಕೊಳ್ಳುತ್ತಿದ್ದೇನೆ. ಈ ಬಗ್ಗೆ ಚಿಂತಿಸದೆ ನನ್ನ ಪಂದ್ಯಗಳತ್ತ ಮಾತ್ರ ಗಮನ ಹರಿಸುತ್ತಿದ್ದೇನೆ.
– ಸೌರಭ್‌ ವರ್ಮ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.