ಭಾರತ ಮಹಿಳಾ ತಂಡಕ್ಕೆ ಆಯ್ಕೆ : ಕನ್ನಡತಿ ತಾನ್ಯ ಆಶಯ


Team Udayavani, Apr 27, 2019, 9:57 AM IST

tanya-m-rao

ಭಾರತದ ಮಹಿಳಾ ಕ್ರಿಕೆಟ್‌ ತಂಡದಲ್ಲಿ ಸ್ಥಾನ ಗಳಿಸುವುದೇ ನನ್ನ ಕ್ರಿಕೆಟ್‌ ಬದುಕಿನ ಹಂಬಲ ಎನ್ನುತ್ತಾರೆ ಸೌರಾಷ್ಟ್ರದ 19ಕ್ಕಿಂತ ಕಿರಿಯರ ಕ್ರಿಕೆಟ್‌ ತಂಡದ ನಾಯಕಿಯಾಗಿದ್ದು, ಈಗ ರಾಜ್ಯದ ಮುಖ್ಯ ತಂಡಕ್ಕೆ ಆಡುತ್ತಿರುವ ತಾನ್ಯ ಎಂ. ರಾವ್‌ ಅವರು. ವಿಶೇಷವೆಂದರೆ ಈಕೆಯ ಕೌಟುಂಬಿಕ ಮೂಲ ಪಡುಬಿದ್ರೆಯ ಸಮೀಪದ ನಂದಿಕೂರು.

19ಕ್ಕಿಂತ ಕಿರಿಯರ ಸೌರಾಷ್ಟ್ರ ತಂಡದ ಆಟಗಾರ್ತಿಯಾಗಿ ಬಳಿಕ ನಾಯಕಿ ಯಾಗಿ ಮಹತ್ವದ ಆಲ್‌ರೌಂಡರ್‌ ಕೊಡುಗೆ ತಾನ್ಯ ನೀಡುತ್ತಾ ಬಂದಿದ್ದಾರೆ. ಸೌರಾಷ್ಟ್ರವನ್ನು ಪ್ರತಿನಿಧಿಸಿ ಜಮ್ಮು ಕಾಶ್ಮೀರ ತಂಡದ ಎದುರು ಗೋವಾದಲ್ಲಿ ಶತಕ ಬಾರಿಸಿ ಈ ಸಾಧನೆ ಮಾಡಿದ ಏಕೈಕ ಆಟಗಾರ್ತಿ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ. ತಂಡದ 185 ರನ್ನುಗಳಲ್ಲಿ ಅವರ ಕೊಡುಗೆ 105 ಮತ್ತು 50 ಓವರ್‌ಗಳ ಈ ಪಂದ್ಯವನ್ನು ಸೌರಾಷ್ಟ್ರ ಭರ್ಜರಿಯಾಗಿ ಜಯಿಸಿತು.

ತಂದೆ ಮಂಜುನಾಥ ರಾವ್‌, ತಾಯಿ ರಾಜಶ್ರೀ ರಾವ್‌ ಅವರ ವಿಶೇಷ ಪ್ರೋತ್ಸಾಹ ತನ್ನ ಪಾಲಿಗೆ ವರದಾನ ಎಂದವರು ವರ್ಣಿಸಿದರು. ಉದ್ಯೋಗ ನಿಮಿತ್ತ ಅವರ ಕುಟುಂಬ ಸೌರಾಷ್ಟ್ರದಲ್ಲಿ ನೆಲೆಸಿದೆ. ಕುಟುಂಬದ, ಶಿಕ್ಷಣ ಸಂಸ್ಥೆಗಳ, ಸೌರಾಷ್ಟ್ರ ರಾಜ್ಯ ಕ್ರಿಕೆಟ್‌ ಸಂಸ್ಥೆಯ ಪ್ರೋತ್ಸಾಹವೇ ನನ್ನ ಯಶಸ್ಸಿಗೆ ಕಾರಣ ಎಂದು ಅವರು ಪಡುಬಿದ್ರೆಯ ಸಮೀಪದ ದೇವಸ್ಥಾನವೊಂದರಲ್ಲಿ ಕುಟುಂಬದ ಶುಭಕಾರ್ಯಕ್ಕೆ ಶುಕ್ರವಾರ ಬಂದಿದ್ದಾಗ ಹೇಳಿದರು. ಇಲ್ಲಿ ಕುಟುಂಬಿಕರನ್ನೆಲ್ಲ ಭೇಟಿಯಾಗಿರುವುದು ತನ್ನ ಪಾಲಿಗೆ ಸಂತಸಕರ ಅನುಭವ ಎಂದು ಇನ್ನು 20ರ ಹರೆಯಕ್ಕೆ ಕಾಲಿಡುವ ರಾಜಕೋಟ್‌ನಲ್ಲಿ ನೆಲೆಸಿರುವ ತಾನ್ಯ ಹೇಳಿದರು.

ಮುಂಬಯಿಯಲ್ಲಿ ಜನಿಸಿ ಬಳಿಕ ಸೌರಾಷ್ಟ್ರದ ಶಿಕ್ಷಣ ಸಂಸ್ಥೆಗಳಲ್ಲಿ ಓದಿರುವ ಅವರು ಈಗ ಎಂಜಿನಿಯರಿಂಗ್‌ ವಿದ್ಯಾರ್ಥಿನಿ. ಆರಂಭಿಕ ವರ್ಷಗಳಲ್ಲಿ ಭರತನಾಟ್ಯವನ್ನು 6 ವರ್ಷಗಳ ಕಾಲ ಅಭ್ಯಾಸ ಮಾಡಿದ ಅವರು ಕ್ರಿಕೆಟ್‌ ಆಯ್ದುಕೊಂಡದ್ದು ಅನಿರೀಕ್ಷಿತ. ಶಾಲಾ ಕ್ರಿಕೆಟ್‌ ತಂಡಕ್ಕೆ ಆಸಕ್ತಿಯಿರುವವರು ಸೇರಿಕೊಳ್ಳಬಹುದು ಎಂದು ಶಿಕ್ಷಕರು ಹೇಳಿದ ಒಂದೇ ಅವಕಾಶವನ್ನು ತಾನ್ಯ ಬಳಸಿಕೊಂಡರು.

ಬಲಗೈ ಆಟಗಾರ್ತಿಯಾಗಿ ಮತ್ತು ಬಲಗೈ ಮಧ್ಯಮ ವೇಗದ ಬೌಲರ್‌ ಆಗಿ ಗಮನ ಸೆಳೆದರು. ವಿವಿಧ ವಯೋಮಾ ನಗಳ ತಂಡದಲ್ಲಿ ಅವಕಾಶಗಳನ್ನು ಪಡೆಯುತ್ತಾ ಯಶಸ್ಸು ಸಾಧಿಸಿದರು. ಸೀನಿಯರ್‌ ಮಹಿಳಾ ತಂಡದಲ್ಲಿ ಪಂದ್ಯಗಳನ್ನು ಆಡುತ್ತಿದ್ದು ಬ್ಯಾಟಿಂಗಗೂ ಹೆಚ್ಚು ಗಮನ ನೀಡುತ್ತಿದ್ದಾರೆ.

ಮನೋಹರ ಪ್ರಸಾದ್‌

ಟಾಪ್ ನ್ಯೂಸ್

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.