ಅಭಿನವ್ ಮುಕುಂದ್ ಅಚ್ಚರಿಯ ಆಯ್ಕೆ
Team Udayavani, Jan 31, 2017, 10:32 PM IST
ಹೊಸದಿಲ್ಲಿ: ಪ್ರವಾಸಿ ಬಾಂಗ್ಲಾದೇಶ ವಿರುದ್ಧ ನಡೆಯಲಿರುವ ಏಕೈಕ ಟೆಸ್ಟ್ ಪಂದ್ಯಕ್ಕೆಂದು ಆರಿಸಲಾದ ಭಾರತ ತಂಡದಲ್ಲಿ ತಮಿಳುನಾಡಿನ ಆರಂಭಕಾರ ಅಭಿನವ್ ಮುಕುಂದ್ 6 ವರ್ಷಗಳ ಬಳಿಕ ಅಚ್ಚರಿಯ ಕರೆ ಪಡೆದಿದ್ದಾರೆ. ಹಾಗೆಯೇ ಇಂಗ್ಲೆಂಡ್ ವಿರುದ್ಧ ಮಿಂಚಿದ ಪಾರ್ಥಿವ್ ಪಟೇಲ್ ಅವರನ್ನು ಹೊರಗಿರಿಸಿ ಮತ್ತೆ ವೃದ್ಧಿಮಾನ್ ಸಾಹಾ ಅವರನ್ನೇ ಪ್ರಧಾನ ಹಾಗೂ ಏಕೈಕ ವಿಕೆಟ್ ಕೀಪರ್ ಆಗಿ ಆಯ್ಕೆ ಮಾಡಲಾಗಿದೆ.
ಮುಕುಂದ್ 2011ರಲ್ಲಿ ವೆಸ್ಟ್ ಇಂಡೀಸ್ ಹಾಗೂ ಇಂಗ್ಲೆಂಡ್ ಪ್ರವಾಸದ ವೇಳೆ 5 ಟೆಸ್ಟ್ಗಳನ್ನಾಡಿದ್ದರು. ಒಂದು ಅರ್ಧ ಶತಕ ಸಹಿತ 10 ಇನ್ನಿಂಗ್ಸ್ಗಳಲ್ಲಿ ಗಳಿಸಿದ್ದು 211 ರನ್ ಮಾತ್ರ. ಪ್ರಸಕ್ತ ರಣಜಿ ಋತುವಿನಲ್ಲಿ 849 ರನ್ ಮಾಡಿದ ಕಾರಣಕ್ಕಾಗಿ ಮುಕುಂದ್ ಅವರ ಆಯ್ಕೆ ನಡೆದಿದೆ ಎನ್ನಲಾಗಿದೆ.
ಗಾಯಾಳಾಗಿ ಹೊರಗುಳಿದಿದ್ದ ಅಜಿಂಕ್ಯ ರಹಾನೆ, ಜಯಂತ್ ಯಾದವ್, ಹಾರ್ದಿಕ್ ಪಾಂಡ್ಯ ಅವರೆಲ್ಲ ಟೆಸ್ಟ್ ತಂಡಕ್ಕೆ ಮರಳಿದ್ದಾರೆ.
ಈ ಏಕೈಕ ಟೆಸ್ಟ್ ಪಂದ್ಯ ಫೆ. 9ರಿಂದ ಹೈದರಾಬಾದ್ನಲ್ಲಿ ಆರಂಭವಾಗಲಿದೆ.
ಭಾರತ ತಂಡ: ವಿರಾಟ್ ಕೊಹ್ಲಿ (ನಾಯಕ), ಕೆ.ಎಲ್ ರಾಹುಲ್, ಮುರಳಿ ವಿಜಯ್, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ, ಕರುಣ್ ನಾಯರ್, ಹಾರ್ದಿಕ್ ಪಾಂಡ್ಯ, ವೃದ್ಧಿಮಾನ್ ಸಾಹಾ, ಆರ್. ಅಶ್ವಿನ್, ರವೀಂದ್ರ ಜಡೇಜ, ಅಮಿತ್ ಮಿಶ್ರಾ, ಇಶಾಂತ್ ಶರ್ಮ, ಭುವನೇಶ್ವರ್ ಕುಮಾರ್, ಉಮೇಶ್ ಯಾದವ್, ಅಭಿನವ್ ಮುಕುಂದ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ
CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು
MUST WATCH
ಹೊಸ ಸೇರ್ಪಡೆ
T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ