ಡೆಲ್‌ ಪೊಟ್ರೊ, ನಡಾಲ್‌, ಸೆರೆನಾ ಸೆಮಿ ಪ್ರವೇಶ


Team Udayavani, Sep 6, 2018, 6:00 AM IST

31.jpg

ನ್ಯೂಯಾರ್ಕ್‌: ಅತ್ಯಂತ ಕಳಪೆಯಾಗಿ ಕ್ವಾರ್ಟರ್‌ ಫೈನಲ್‌ ಆರಂಭಿಸಿದ ರಫೆಲ್‌ ನಡಾಲ್‌, 2009ರ ಚಾಂಪಿಯನ್‌ ಜುವಾನ್‌ ಮಾರ್ಟಿನ್‌ ಡೆಲ್‌ ಪೊಟ್ರೊ, 6 ಬಾರಿಯ ಚಾಂಪಿಯನ್‌ ಸೆರೆನಾ ವಿಲಿಯಮ್ಸ್‌ ಅವರೆಲ್ಲ ಯುಎಸ್‌ ಓಪನ್‌ ಸೆಮಿಫೈನಲ್‌ ಪ್ರವೇಶಿಸಿದ್ದಾರೆ. ಆದರೆ ಕಳೆದ ವರ್ಷದ ವನಿತಾ ಸಿಂಗಲ್ಸ್‌ ಚಾಂಪಿಯನ್‌, ಅಮೆರಿಕದವರೇ ಆದ ಸ್ಲೋನ್‌ ಸ್ಟೀಫ‌ನ್ಸ್‌ ಪರಾಭವಗೊಂಡು ಕೂಟದಿಂದ ನಿರ್ಗಮಿಸಿದ್ದಾರೆ.

ವಿಶ್ವದ ನಂ.9 ಆಟಗಾರ ಡೊಮಿನಿಕ್‌ ಥೀಮ್‌ ವಿರುದ್ಧ ಆಡಲಿಳಿದಿದ್ದ ಕಳೆದ ಬಾರಿಯ ಚಾಂಪಿಯನ್‌ ರಫೆಲ್‌ ನಡಾಲ್‌ ಒಂದೂ ಅಂಕ ಗಳಿಸದೆ ಮೊದಲ ಸೆಟ್‌ ಕಳೆದುಕೊಂಡದ್ದು ವಿಶೇಷವಾಗಿತ್ತು. ಟೆನಿಸ್‌ ಬಾಳ್ವೆಯ 282 ಗ್ರ್ಯಾನ್‌ಸ್ಲಾಮ್‌ ಪಂದ್ಯಗಳಲ್ಲಿ ನಡಾಲ್‌ 6-0 ಅಂತರದಿಂದ ಎಡವಿದ 4ನೇ ನಿದರ್ಶನ ಇದಾಗಿದೆ. ಆದರೆ ಹಿಂದಿನ ಮೂರೂ ಸಲ ನಡಾಲ್‌ ಸೋಲನುಭವಿಸಿದ್ದರು. ಆದರೆ ಈ ಬಾರಿ 4 ಗಂಟೆ, 49 ನಿಮಿಷಗಳ ಕಾಲ ಹೋರಾಟ ನಡೆಸಿ ಥೀಮ್‌ ವಿರುದ್ಧ 0-6, 6-4, 7-5, 6-7 (4), 7-6 (5) ಅಂತರದಿಂದ ಗೆದ್ದು ಬಂದರು. ಇದು ಅವರ ಸತತ 7ನೇ ಯುಎಸ್‌ ಓಪನ್‌ ಕ್ವಾರ್ಟರ್‌ ಫೈನಲ್‌ ಗೆಲುವು. ನಡಾಲ್‌ ಕೊನೆಯ ಸಲ ಇಲ್ಲಿ ಕ್ವಾರ್ಟರ್‌ ಫೈನಲ್‌ನಲ್ಲಿ ಎಡವಿದ್ದು 2006ರಲ್ಲಿ. 

4ನೇ ಯುಎಸ್‌ ಓಪನ್‌ ಪ್ರಶಸ್ತಿ ಮೇಲೆ ಕಣ್ಣಿಟ್ಟಿರುವ ರಫೆಲ್‌ ನಡಾಲ್‌ ಇನ್ನು ಆರ್ಜೆಂಟೀನಾದ ಜುವಾನ್‌ ಮಾರ್ಟಿನ್‌ ಡೆಲ್‌ ಪೊಟ್ರೊ ವಿರುದ್ಧ ಸೆಣಸಲಿದ್ದಾರೆ. ಇನ್ನೊಂದು ಕ್ವಾರ್ಟರ್‌ ಫೈನಲ್‌ನಲ್ಲಿ ಅವರು ಆಮೆರಿಕದ ಬಿಗ್‌ ಸರ್ವರ್‌ ಖ್ಯಾತಿಯ ಜಾನ್‌ ಇಸ್ನರ್‌ ವಿರುದ್ಧ 6-7 (5), 6-3, 7-6 (4), 6-2 ಅಂತರದ ಜಯ ಸಾಧಿಸಿದರು. ಇದರೊಂದಿಗೆ ಪುರುಷರ ಸಿಂಗಲ್ಸ್‌ನಲ್ಲಿ ಆತಿಥೇಯ ಅಮೆರಿಕನ್ನರ ಹೋರಾಟ ಕೊನೆಗೊಂಡಿದೆ. ಉಳಿದೆರಡು ಕ್ವಾರ್ಟರ್‌ ಫೈನಲ್‌ ಪಂದ್ಯಗಳಲ್ಲಿ ಮರಿನ್‌ ಸಿಲಿಕ್‌-ಕೀ ನಿಶಿಕೊರಿ ಹಾಗೂ ನೊವಾಕ್‌ ಜೊಕೋವಿಕ್‌-ಜಾನ್‌ ವಿಲ್‌ಮಾನ್‌ ಸೆಣಸಲಿದ್ದಾರೆ.

ಸೆರೆನಾಗೆ ಸುಲಭ ಜಯ
7ನೇ ಸಲ ತವರಿನ ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿ ಮೇಲೆ ಕಣ್ಣಿಟ್ಟಿರುವ ಸೆರೆನಾ ವಿಲಿಯಮ್ಸ್‌ 8ನೇ ಶ್ರೇಯಾಂಕದ ಕ್ಯಾರೋಲಿನಾ ಪ್ಲಿಸ್ಕೋವಾ ಅವರನ್ನು 6-4, 6-3ರಿಂದ ಪರಾಭವಗೊಳಿಸಿದರು. ಇವರ ಮುಂದಿನ ಎದುರಾಳಿ ಲಾತ್ವಿಯಾದ ಅನಾಸ್ತಾಸಿಜಾ ಸೆವಸ್ತೋವಾ. ದಿನದ ಇನ್ನೊಂದು ಕ್ವಾರ್ಟರ್‌ ಫೈನಲ್‌ನಲ್ಲಿ ಅವರು ಅಮೆರಿಕದ ಮತ್ತೋರ್ವ ಆಟಗಾರ್ತಿ, ಹಾಲಿ ಚಾಂಪಿಯನ್‌ ಸ್ಲೋನ್‌ ಸ್ಟೀಫ‌ನ್ಸ್‌ಗೆ 6-2, 6-3 ಅಂತರದಿಂದ ಆಘಾತವಿಕ್ಕಿದರು.

ಸೆರೆನಾ ವಿಲಿಯಮ್ಸ್‌ ಇಲ್ಲಿ ಚಾಂಪಿಯನ್‌ ಆಗಿ ಮೂಡಿಬಂದರೆ ಮಾರ್ಗರೇಟ್‌ ಕೋರ್ಟ್‌ ಅವರ ಸಾರ್ವಕಾಲಿಕ ಗ್ರ್ಯಾನ್‌ಸ್ಲಾಮ್‌ ಗೆಲುವಿನ ದಾಖಲೆಯನ್ನು ಸರಿದೂಗಿಸಲಿದ್ದಾರೆ (24). ಜತೆಗೆ ಅತೀ ಹೆಚ್ಚು ಯುಎಸ್‌ ಓಪನ್‌ ಪ್ರಶಸ್ತಿ ಗೆದ್ದ ಕ್ರಿಸ್‌ ಎವರ್ಟ್‌ ಸಾಲಿನಲ್ಲೂ ಕಾಣಿಸಿಕೊಳ್ಳಲಿದ್ದಾರೆ (7). ವನಿತೆಯರ ಉಳಿದೆರಡು ಕ್ವಾರ್ಟರ್‌ ಫೈನಲ್‌ ಪಂದ್ಯಗಳಲ್ಲಿ ನವೊಮಿ ಒಸಾಕಾ-ಲೆಸಿಯಾ ಸುರೆಂಕೊ ಹಾಗೂ ಕಾರ್ಲಾ ಸೂರೆಜ್‌ ನವಾರೊ-ಮ್ಯಾಡಿಸನ್‌ ಕೀಸ್‌ ಮುಖಾಮುಖಿಯಾಗಲಿದ್ದಾರೆ. ಇಲ್ಲಿ ಗೆದ್ದವರು ಇನ್ನೊಂದು ಸೆಮಿಫೈನಲ್‌ನಲ್ಲಿ ಎದುರಾಗಲಿದ್ದಾರೆ.

ಟಾಪ್ ನ್ಯೂಸ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.