ಸರಣಿ ಕ್ಲೀನ್‌ ಸ್ವೀಪ್‌: ಭಾರತದ ಗುರಿ: ಭಾರತ-ಶ್ರೀಲಂಕಾ ಇಂದು ಮೂರನೇ ಏಕದಿನ


Team Udayavani, Jan 15, 2023, 8:00 AM IST

ಸರಣಿ ಕ್ಲೀನ್‌ ಸ್ವೀಪ್‌: ಭಾರತದ ಗುರಿ: ಭಾರತ-ಶ್ರೀಲಂಕಾ ಇಂದು ಮೂರನೇ ಏಕದಿನ

ತಿರುವನಂತಪುರ: ಸರಣಿ ಕ್ಲೀನ್‌ ಸ್ವೀಪ್‌ ಗೈಯುವ ಗುರಿಯೊಂದಿಗೆ ಭಾರತವು ರವಿವಾರ ನಡೆಯುವ ಏಕದಿನ ಸರಣಿಯ ಮೂರನೇ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ನಾಯಕ ರೋಹಿತ್‌ ಶರ್ಮ ಅವರು ಬ್ಯಾಟಿಂಗ್‌ ಕ್ರಮಾಂಕದ ಬದಲು ಬೌಲಿಂಗ್‌ ಆಯ್ಕೆಗಳ ಬಗ್ಗೆ ಹೆಚ್ಚಿನ ಗಮನ ಹರಿಸುವ ಸಾಧ್ಯತೆಯಿದೆ.

ಗುವಾಹಾಟಿ ಮತ್ತು ಕೋಲ್ಕತಾದಲ್ಲಿ ನಡೆದ ಪಂದ್ಯದಲ್ಲಿ ಅಮೋಘ ಗೆಲುವು ದಾಖಲಿಸಿ ಈಗಾಗಲೇ ಸರಣಿ ಗೆದ್ದಿರುವ ಭಾರತವು ಮೂರನೇ ಪಂದ್ಯದಲ್ಲೂ ಗೆಲ್ಲುವ ಮನಸ್ಸಿನಿಂದಲೇ ಹೋರಾಡಲಿದೆ. ಇದೇ ವೇಳೆ ಸರಣಿಯಲ್ಲಿ ಆಡದಿರುವ ಬ್ಯಾಟ್ಸ್‌ಮನ್‌ ಮತ್ತು ಬೌಲರ್‌ಗಳಿಗೆ ಅವಕಾಶ ಕಲ್ಪಿಸಲು ರೋಹಿತ್‌ ಚಿಂತನೆ ನಡೆಸುತ್ತಿದ್ದಾರೆ.

ಭಾರತವು ಮುಂದಿನ ವಾರದಿಂದ ನ್ಯೂಜಿಲ್ಯಾಂಡ್‌ ವಿರುದ್ಧ ಟಿ20 ಮತ್ತು ಏಕದಿನ ಸರಣಿಯಲ್ಲಿ ಆಡಲಿದೆ. ತಂಡ ಆತ್ಮವಿಶ್ವಾಸದಿಂದ ನ್ಯೂಜಿಲ್ಯಾಂಡ್‌ ತಂಡವನ್ನು ಎದುರಿಸಲು ಇಲ್ಲಿ ಸರಣಿ ಕ್ಲೀನ್‌ ಸ್ವೀಪ್‌ ಗೆಲುವು ಪಡೆಯುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಭಾರತ ಗೆಲ್ಲಲು ಶಕ್ತಿಮೀರಿ ಪ್ರಯತ್ನಿಸಲಿದೆ.

ತಂಡದ ಅಗ್ರ ಐವರು ಆಟಗಾರರು ಉತ್ತಮ ಫಾರ್ಮ್ ನಲ್ಲಿದ್ದಾರೆ. ರೋಹಿತ್‌, ಕೊಹ್ಲಿ, ಸೂರ್ಯಕುಮಾರ್‌ ಮೊದಲೆರಡು ಪಂದ್ಯಗಳಲ್ಲಿ ಅಮೋಘ ಬ್ಯಾಟಿಂಗ್‌ ಪ್ರದರ್ಶಿಸಿದ್ದಾರೆ. ಆದರೆ ಇಲ್ಲಿನ ಪಿಚ್‌ ಬೌಲರ್‌ಗಳಿಗೆ ನೆರವಾಗುವ ಹಿನ್ನೆಲೆಯಲ್ಲಿ ಬೌಲಿಂಗ್‌ ಪಡೆಯಲ್ಲಿ ಕೆಲವು ಬದಲಾವಣೆ ಮಾಡುವ ಸಾಧ್ಯತೆಯಿದೆ.

ನ್ಯೂಜಿಲ್ಯಾಂಡ್‌ ವಿರುದ್ಧ ಟಿ20 ಮತ್ತು ಏಕದಿನ ಸರಣಿ ಇರುವ ಕಾರಣ ಕೆಲವು ಬೌಲರ್‌ಗಳಿಗೆ ಈ ಪಂದ್ಯದಲ್ಲಿ ವಿಶ್ರಾಂತಿ ನೀಡುವ ನಿರೀಕ್ಷೆಯಿದೆ.

ಶ್ರೀಲಂಕಾ ತಂಡ ಅಂತಿಮ ಪಂದ್ಯದಲ್ಲಿ ಗೆಲ್ಲುವ ನಿಟ್ಟಿನಲ್ಲಿ ಪ್ರಯತ್ನಿಸುವ ಸಾಧ್ಯತೆಯಿದೆ. ಏಕದಿನಕ್ಕೆ ಪಾದಾರ್ಪಣೆಗೈದ ಪಂದ್ಯದಲ್ಲಿಯೇ ಅರ್ಧಶತಕ ದಾಖಲಿಸಿದ ನುವನಿದು ಫೆರ್ನಾಂಡೊ ಅವರ ಮೇಲೆ ತಂಡ ಹೆಚ್ಚಿನ ನಂಬಿಕೆ ಇರಿಸಿಕೊಂಡಿದೆ. ಅವರಲ್ಲದೇ ನಾಯಕ ದಸುನ್‌ ಶಣಕ, ಕುಸಲ್‌ ಮೆಂಡಿಸ್‌, ಪಥುನ್‌ ನಿಸ್ಸಂಕ ಉತ್ತಮ ನಿರ್ವಹಣೆ ನೀಡುವ ಸಾಧ್ಯತೆಯಿದೆ.

ಉಭಯ ತಂಡಗಳು
ಭಾರತ: ರೋಹಿತ್‌ ಶರ್ಮ (ನಾಯಕ), ಹಾರ್ದಿಕ್‌ ಪಾಂಡ್ಯ, ಶುಭ್‌ಮನ್‌ ಗಿಲ್‌, ವಿರಾಟ್‌ ಕೊಹ್ಲಿ, ಸೂರ್ಯಕುಮಾರ್‌ ಯಾದವ್‌, ಶ್ರೇಯಸ್‌ ಅಯ್ಯರ್‌, ಕೆಎಲ್‌ ರಾಹುಲ್‌, ಇಶಾನ್‌ ಕಿಶನ್‌, ವಾಷಿಂಗ್ಟನ್‌ ಸುಂದರ್‌, ಯಜುವೇಂದ್ರ ಚಹಲ್‌, ಕುಲದೀಪ್‌ ಯಾದವ್‌, ಅಕ್ಷರ್‌ ಪಟೇಲ್‌, ಜಸ್‌ಪ್ರೀತ್‌ ಬುಮ್ರಾ, ಮೊಹಮ್ಮದ್‌ ಶಮಿ, ಮೊಹಮ್ಮದ್‌ ಸಿರಾಜ್‌, ಉಮ್ರಾನ್‌ ಮಲಿಕ್‌, ಅರ್ಷದೀಪ್‌ ಸಿಂಗ್‌.

ಶ್ರೀಲಂಕಾ:
ದಸುನ್‌ ಶಣಕ (ನಾಯಕ), ಕುಸಲ್‌ ಮೆಂಡಿಸ್‌, ಪಥುನ್‌ ನಿಸ್ಸಂಕ, ಅವಿಷ್ಕಾ ಫೆರ್ನಾಂಡೊ, ಸದೀರ ಸಮರವಿಕ್ರಮ, ಚರಿತ ಅಸಲಂಕ, ಧನಂಜಯ ಡಿ’ಸಿಲ್ವ, ವನಿಂದು ಹಸರಂಗ, ಅಶೆನ್‌ ಬಂಡಾರ, ಮಹೀಶ್‌ ತೀಕ್ಷಣ, ಚಮಿಕ ಕರುಣರತ್ನ, ದಿಲ್ಶನ್‌ ಮದುಶಂಕ, ಕಸುನ್‌ ರಜಿತ, ನುವನಿದು ಫೆರ್ನಾಂಡೊ, ದುನಿತ್‌ ವೆಲ್ಲಲಗೆ, ಪ್ರಮೋದ್‌ ಮದುಶನ್‌, ಲಹಿರು ಕುಮಾರ.

ಟಾಪ್ ನ್ಯೂಸ್

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.