ಧೋನಿ ಖರೀದಿಸಲು ಪೈಜಾಮ ಮಾರಲು ರೆಡಿ: ಶಾರೂಖ್‌


Team Udayavani, Apr 27, 2017, 8:38 PM IST

Sharukh-Khan-27-2.jpg

ಬೆಂಗಳೂರು: ಎಂಎಸ್‌ ಧೋನಿ ಅವರು ಐಪಿಎಲ್‌ನ ಅತ್ಯಂತ ಯಶಸ್ವಿ ಆಟಗಾರರಲ್ಲಿ ಒಬ್ಬರಾಗಿದ್ದಾರೆ. ವಿಕೆಟ್‌ಕೀಪರ್‌-ಬ್ಯಾಟ್ಸ್‌ಮನ್‌ ಆಗಿರುವ ಧೋನಿ ಚೆನ್ನೈ ಸೂಪರ್‌ ಕಿಂಗ್ಸ್‌ನ ನಾಯಕತ್ವ ವಹಿಸಿದ ವೇಳೆ ಎರಡು ಬಾರಿ ಐಪಿಎಲ್‌ ಮತ್ತು ಚಾಂಪಿಯನ್ಸ್‌ ಲೀಗ್‌ ಟ್ವೆಂಟಿ20 ಕೂಟದ ಪ್ರಶಸ್ತಿಯನ್ನು ಜಯಿಸಿದ್ದರು. ಧೋನಿ ಅವರ ತಂಡವನ್ನು ಮುನ್ನಡೆಸುವ ಸಾಮರ್ಥ್ಯ ಮತ್ತು ನಿಖರ ಪಂದ್ಯಗಳಲ್ಲಿ ಪಂದ್ಯವನ್ನು ಗೆಲ್ಲಿಸಿಕೊಡುವಲ್ಲಿ ಸಮರ್ಥರಾಗಿರುವ ಅವರು ಚೆನ್ನೈ ತಂಡವನ್ನು ಐಪಿಎಲ್‌ನ ಪ್ರಭಾವಿ ತಂಡವಾಗಿ ರೂಪಿಸಲು ನೆರವಾಗಿದ್ದರು. ಚೆನ್ನೈಗೆ ಎರಡು ವರ್ಷಗಳ ನಿಷೇಧ ಹೇರಿದ ಬಳಿಕ ಧೋನಿ ಅವರ ಸೇವೆಯನ್ನು ರೈಸಿಂಗ್‌ ಪುಣೆ ಸೂಪರ್‌ಜೈಂಟ್‌ ಪಡೆದುಕೊಂಡಿತು. ಆದರೆ ಪುಣೆ ನಾಯಕರಾಗಿ ಮೊದಲ ಋತುವಿನಲ್ಲಿ ಮಹೀ ಅಮೋಘ ಆಟ ಪ್ರದರ್ಶಿಸಲು ವಿಫ‌ಲರಾಗಿದ್ದರು. ಈ ಕಾರಣಕ್ಕಾಗಿ ಈ ಬಾರಿಯ ಐಪಿಎಲ್‌ ಆರಂಭಕ್ಕೆ ಮೊದಲೇ ನಾಯಕತ್ವವನ್ನು ಸ್ಟೀವನ್‌ ಸ್ಮಿತ್‌ಗೆ ವಹಿಸಿಕೊಡಲಾಗಿತ್ತು.

ಸದ್ಯದ ಸ್ಥಿತಿಯಲ್ಲಿ ಪುಣೆ ಮತ್ತು ಗುಜರಾತ್‌ ಲಯನ್ಸ್‌ನ ಭವಿಷ್ಯ ಏನೆಂಬುದು ಯಾರಿಗೂ ತಿಳಿದಿಲ್ಲ. ಈ ಎರಡು ತಂಡಗಳು ಚೆನ್ನೈ ಮತ್ತು ರಾಜಸ್ಥಾನ್‌ ರಾಯಲ್ಸ್‌ ಬದಲಿಗೆ ಐಪಿಎಲ್‌ ಕೂಟಕ್ಕೆ ಸೇರಿಸಲ್ಪಟ್ಟಿತ್ತು. ಚೆನ್ನೈ ಮತ್ತು ರಾಜಸ್ಥಾನ ಮುಂದಿನ ಐಪಿಎಲ್‌ಗೆ ಮರಳುವ ಕಾರಣ ಈ ಎರಡು ತಂಡಗಳಿಗೆ ಆಟಗಾರರನ್ನು ಆಯ್ಕೆ  ಮಾಡಲು ಬಿಸಿಸಿಐ ಯಾವ ವಿಧಾನ ಅನುಸರಿಸುತ್ತದೆ ಎಂಬುದನ್ನು ನೋಡಬೇಕಾಗಿದೆ. ಹರಾಜಿನ ಮೂಲಕ ಧೋನಿ ಅವರು ಚೆನ್ನೈಗೆ ಸೇರುತ್ತಾರಾ ಎಂಬ ಪ್ರಶ್ನೆಯನ್ನು ಕ್ರಿಕೆಟ್‌ ಪ್ರೇಮಿಗಳು ಇದೀಗ ಕೇಳುತ್ತಿದ್ದಾರೆ.

ಬಾಳ್ವೆಯ ಈ ಹಂತದಲ್ಲಿಯೂ ಧೋನಿ ಜತೆ ಒಪ್ಪಂದ ಮಾಡಿಕೊಳ್ಳಲು ಪ್ರತಿಯೊಂದು ಫ್ರಾಂಚೈಸಿ ಮಾಲಕರು ಮುಂದಾಗಲಿರುವುದರಲ್ಲಿ ಯಾವುದೇ ಸಂಶಯವಿಲ್ಲ. ಕೋಲ್ಕತಾ ನೈಟ್‌ರೈಡರ್ ಸಹ ಮಾಲಕ ಶಾರೂಖ್‌ ಖಾನ್‌ ಇದಕ್ಕೆ ಹೊರತಾಗಿಲ್ಲ. ಧೋನಿ ಅವರನ್ನು ಖರೀದಿಸಲು ಕೆಕೆಆರ್‌ಗೆ ಆಸಕ್ತಿ ಇದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಶಾರೂಖ್‌ ಅವರು ಧೋನಿ ಅವರನ್ನು ಖರೀದಿಸಲು ನನ್ನ ಪೈಜಾಮವನ್ನು ಮಾರಾಟ ಮಾಡಲು ಸಿದ್ಧನಿದ್ದೇನೆ. ಆದರೆ ಅವರು ಹರಾಜಿನಲ್ಲಿ ಲಭ್ಯವಿದ್ದರೆ ಇದೆಲ್ಲ ಸಾಧ್ಯ ಎಂದರು. ಈ ಬಾರಿಯ ಐಪಿಎಲ್‌ನಲ್ಲಿ ಧೋನಿ ಪ್ರಚಂಡ ಬ್ಯಾಟಿಂಗ್‌ ಪ್ರದರ್ಶಿಸಿಲ್ಲ. ಹೈದರಾಬಾದ್‌ ವಿರುದ್ಧದ ಪಂದ್ಯದಲ್ಲಿ ಅಜೇಯ 61 ರನ್‌ ಸಿಡಿಸಿದ್ದರಿಂದ ಪುಣೆ ರೋಚಕ ಸೆಣಸಾಟದಲ್ಲಿ ಜಯ ಸಾಧಿಸಲು ಅವರು ನೆರವಾಗಿದ್ದರು. ಉಳಿದಂತೆ ಅವರ ಬ್ಯಾಟಿಂಗ್‌ ನೀರಸವಾಗಿತ್ತು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.