ಶಕಿಬ್‌, ಬಾಂಗ್ಲಾ ಸರ್ವಾಧಿಕ ಮೊತ್ತ


Team Udayavani, Jan 14, 2017, 3:45 AM IST

Shakib.jpg

ವೆಲ್ಲಿಂಗ್ಟನ್‌: ನ್ಯೂಜಿಲ್ಯಾಂಡ್‌ ಎದುರಿನ ವೆಲ್ಲಿಂಗ್ಟನ್‌ ಟೆಸ್ಟ್‌ ಪಂದ್ಯದ 2ನೇ ದಿನ ಬಾಂಗ್ಲಾದೇಶ ಪ್ರಚಂಡ ಬ್ಯಾಟಿಂಗ್‌ ಪ್ರದರ್ಶನ ನೀಡಿದೆ. ಆಲ್‌ರೌಂಡರ್‌ ಶಕಿಬ್‌ ಅಲ್‌ ಹಸನ್‌ ಅವರ ಅಮೋಘ 217 ರನ್‌ ಹಾಗೂ ಕೀಪರ್‌ ಮುಶ್ಫಿಕರ್‌ ರಹೀಂ ಅವರ 159 ರನ್‌ ಸಾಹಸದಿಂದ 7 ವಿಕೆಟಿಗೆ 542 ರನ್‌ ಪೇರಿಸಿದೆ.

ಕಿವೀಸ್‌ ಎದುರು ಬಾಂಗ್ಲಾ ಐನೂರರ ಗಡಿ ದಾಟಿದ್ದು ಇದೇ ಮೊದಲು. ಸದ್ಯ ಇದು ಬಾಂಗ್ಲಾ ಟೆಸ್ಟ್‌ ಕ್ರಿಕೆಟಿನ 4ನೇ ಅತ್ಯಧಿಕ ಸ್ಕೋರ್‌ ಆಗಿದೆ. ಇನ್ನೂ 3 ವಿಕೆಟ್‌ ಕೈಲಿರುವುದರಿಂದ ಬಾಂಗ್ಲಾಕ್ಕೆ 2ನೇ ಅಥವಾ 3ನೇ ಅತ್ಯಧಿಕ ಮೊತ್ತವನ್ನು ಗಳಿಸುವ ಅವಕಾಶವಿದೆ. ಶ್ರೀಲಂಕಾ ಎದುರಿನ 2013ರ ಗಾಲೆ ಪಂದ್ಯದಲ್ಲಿ 638 ರನ್‌ ಪೇರಿಸಿದ್ದು ಬಾಂಗ್ಲಾದ ದಾಖಲೆ.

ಇದು ಎಡಗೈ ಆಟಗಾರ ಶಕಿಬ್‌ ಬಾರಿಸಿದ 4ನೇ ಶತಕ ಹಾಗೂ ಪ್ರಥಮ ದ್ವಿಶತಕವೆಂಬುದು ವಿಶೇಷ. ಅಷ್ಟೇ ಅಲ್ಲ, ಇದು ಬಾಂಗ್ಲಾದೇಶ ಟೆಸ್ಟ್‌ ಇತಿಹಾಸದಲ್ಲಿ ದಾಖಲಾದ ಸರ್ವಾಧಿಕ ವೈಯಕ್ತಿಕ ಗಳಿಕೆಯೂ ಹೌದು. ಪಾಕಿಸ್ಥಾನ ವಿರುದ್ಧದ 2015ರ ಖುಲಾ ಟೆಸ್ಟ್‌ನಲ್ಲಿ ತಮಿಮ್‌ ಇಕ್ಬಾಲ್‌ 206 ರನ್‌ ಹೊಡೆದದ್ದು ಈವರೆಗಿನ ಬಾಂಗ್ಲಾ ದಾಖಲೆ ಆಗಿತ್ತು. 276 ಎಸೆತ ನಿಭಾಯಿಸಿದ ಶಕಿಬ್‌ 31 ಬೌಂಡರಿ ಬಾರಿಸಿ ಮೆರೆದರು. ಮುಶ್ಫಿಕರ್‌ ರಹೀಂ 159 ರನ್ನಿಗೆ 276 ಎಸೆತ ಎದುರಿಸಿದರು. ಬಾರಿಸಿದ್ದು 23 ಬೌಂಡರಿ ಹಾಗೂ ಒಂದು ಸಿಕ್ಸರ್‌. ಇದು ರಹೀಂ ಅವರ 4ನೇ ಶತಕ.

ಶಕಿಬ್‌-ರಹೀಂ ಸೇರಿಕೊಂಡು 5ನೇ ವಿಕೆಟಿಗೆ 359 ರನ್‌ ಸೂರೆಗೈದರು. ಇದು ಟೆಸ್ಟ್‌ ಇತಿಹಾಸದಲ್ಲಿ 5ನೇ ವಿಕೆಟಿಗೆ ದಾಖಲಾದ 4ನೇ ಅತಿ ದೊಡ್ಡ ಜತೆಯಾಟ. ಹಾಗೆಯೇ ಎಲ್ಲ ವಿಕೆಟ್‌ಗಳಿಗೆ ಅನ್ವಯಿಸುವಂತೆ ಬಾಂಗ್ಲಾ ಟೆಸ್ಟ್‌ ಚರಿತ್ರೆಯ ಅತಿ ದೊಡ್ಡ ಜತೆಯಾಟವೂ ಹೌದು.

ಬಾಂಗ್ಲಾದೇಶ 3ಕ್ಕೆ 154 ರನ್‌ ಗಳಿಸಿದಲ್ಲಿಂದ ದಿನದಾಟ ಮುಂದುವರಿಸಿತ್ತು. ಶುಕ್ರವಾರದ ಆಟಕ್ಕೆ ಮಳೆ ಎದುರಾಗಲಿಲ್ಲ.

ಸಂಕ್ಷಿಪ್ತ ಸ್ಕೋರ್‌: ಬಾಂಗ್ಲಾದೇಶ-7 ವಿಕೆಟಿಗೆ 542 (ಶಕಿಬ್‌ 217, ರಹೀಂ 159, ಮೊಮಿನುಲ್‌ 64, ತಮಿಮ್‌ 56, ವ್ಯಾಗ್ನರ್‌ 124ಕ್ಕೆ 3, ಬೌಲ್ಟ್ 121ಕ್ಕೆ 2, ಸೌಥಿ 144ಕ್ಕೆ 2).

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.