ಐಸಿಸಿ ಟಿ20 ವಿಶ್ವಕಪ್: ಜಸ್ಪ್ರೀತ್ ಬುಮ್ರಾಗೆ ಬದಲಿ ಬೌಲರ್ ನೇಮಿಸಿದ ಬಿಸಿಸಿಐ
Team Udayavani, Oct 14, 2022, 5:30 PM IST
ಮುಂಬೈ: ಅಕ್ಟೋಬರ್ 16 ರಂದು ಪ್ರಾರಂಭವಾಗಲಿರುವ ಟಿ20 ವಿಶ್ವಕಪ್ ಗೆ ಭಾರತದ ತಂಡದಲ್ಲಿ ಗಾಯಗೊಂಡಿರುವ ಜಸ್ಪ್ರೀತ್ ಬುಮ್ರಾ ಬದಲಿಗೆ ಅನುಭವಿ ವೇಗಿ ಮೊಹಮ್ಮದ್ ಶಮಿ ಅವರನ್ನು ಆಯ್ಕೆ ಮಾಡಲಾಗಿದೆ. ಶುಕ್ರವಾರ ಬಿಸಿಸಿಐ ಈ ಬಗ್ಗೆ ಅಧಿಕೃತ ಪ್ರಕಟಣೆ ನೀಡಿದೆ.
ಮೊಹಮ್ಮದ್ ಶಮಿ ಆರಂಭದಲ್ಲಿ ಮೂವರು ಮೀಸಲು ಆಟಗಾರರ ಪಟ್ಟಿಯಲ್ಲಿ ನೇಮಿಸಲಾಗಿತ್ತು. ಆದರೆ ಈಗ ಮುಖ್ಯ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.
ಗಾಯದ ಕಾರಣ ದೀಪಕ್ ಚಹಾರ್ ಹೊರಗುಳಿದ ಕಾರಣದಿಂದ ಮೊಹಮ್ಮದ್ ಸಿರಾಜ್ ಮತ್ತು ಶಾರ್ದೂಲ್ ಠಾಕೂರ್ ಅವರನ್ನು ಮೀಸಲು ಆಟಗಾರರನ್ನಾಗಿ ಆಯ್ಕೆ ಮಾಡಲಾಗಿದೆ. ಶ್ರೇಯಸ್ ಅಯ್ಯರ್ ಮತ್ತು ರವಿ ಬಿಷ್ಣೋಯ್ ಜೊತೆಗೆ ಇವರು ಮೀಸಲು ಆಟಗಾರರಾಗಿಲಿದ್ದಾರೆ. ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ಮತ್ತು ಶಾರ್ದೂಲ್ ಠಾಕೂರ್ ಈಗಾಗಲೇ ಆಸ್ಟ್ರೇಲಿಯಾಗೆ ತೆರಳಿದ್ದಾರೆ.
ಇದನ್ನೂ ಓದಿ:ರಿಷಬ್, ನಿಮ್ಮ ಬಗ್ಗೆ ನೀವು ತುಂಬಾ ಹೆಮ್ಮೆಪಡಬೇಕು..: ಕಾಂತಾರ ಮೆಚ್ಚಿದ ನಟ ಧನುಷ್
“ಭಾರತದ ಟಿ20 ವಿಶ್ವಕಪ್ ತಂಡದಲ್ಲಿ ಜಸ್ಪ್ರೀತ್ ಬುಮ್ರಾ ಬದಲಿಗೆ ಮೊಹಮ್ಮದ್ ಶಮಿ ಅವರನ್ನು ಅಖಿಲ ಭಾರತ ಹಿರಿಯ ಆಯ್ಕೆ ಸಮಿತಿ ಹೆಸರಿಸಿದೆ. ಶಮಿ ಆಸ್ಟ್ರೇಲಿಯಾ ತಲುಪಿದ್ದಾರೆ ಮತ್ತು ಅಭ್ಯಾಸ ಪಂದ್ಯಗಳಿಗೆ ಮುಂಚಿತವಾಗಿ ಬ್ರಿಸ್ಬೇನ್ ನಲ್ಲಿರುವ ತಂಡದೊಂದಿಗೆ ಸೇರಲಿದ್ದಾರೆ” ಎಂದು ಬಿಸಿಸಿಐ ಹೇಳಿಕೆಯಲ್ಲಿ ತಿಳಿಸಿದೆ.
ಬೆನ್ನು ನೋವಿನಿಂದಾಗಿ ಜಸ್ಪ್ರೀತ್ ಬುಮ್ರಾ ಅವರು ಟಿ20 ವಿಶ್ವಕಪ್ ಕೂಟದಿಂದ ಹೊರಬಿದ್ದಿದ್ದಾರೆ. ಬುಮ್ರಾ ಏಷ್ಯಾ ಕಪ್ ನಲ್ಲೂ ತಂಡದ ಭಾಗವಾಗಿರಲಿಲ್ಲ.
ಭಾರತ ತಂಡ: ರೋಹಿತ್ ಶರ್ಮಾ (ನಾ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ಆರ್ ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ.
ಸ್ಟ್ಯಾಂಡ್ಬೈ ಆಟಗಾರರು: ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ಶಾರ್ದೂಲ್ ಠಾಕೂರ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್