“ನೀನು ಚೆನ್ನೈ ತಂಡದ ಹೃದಯ ಬಡಿತ ಇದ್ದಂತೆ..“ ಗೆಳೆಯನಿಗೆ ಭಾವುಕ ಸಂದೇಶ ನೀಡಿದ ವ್ಯಾಟ್ಸನ್
Team Udayavani, Aug 30, 2020, 2:26 PM IST
ದುಬೈ: ಕೋವಿಡ್-19 ಸೋಂಕಿನ ನಡುವೆ ಯುಎಇನಲ್ಲಿ ಐಪಿಎಲ್ ಆರಂಭಕ್ಕೆ ಸಿದ್ದತೆ ನಡೆಯುತ್ತಿದೆ. 13ನೇ ಆವೃತ್ತಿಯ ಐಪಿಎಲ್ ಗಾಗಿ ಎಲ್ಲಾ ಎಂಟು ತಂಡಗಳು ಕಠಿಣ ಅಭ್ಯಾಸದಲ್ಲಿ ತೊಡಗಿದೆ. ಈ ಮಧ್ಯೆ ವೈಯಕ್ತಿಕ ಕಾರಣಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸುರೇಶ್ ರೈನಾ, ಐಪಿಎಲ್ ಬಿಟ್ಟು ಭಾರತಕ್ಕೆ ಮರಳಿದ್ದಾರೆ.
ಕೋವಿಡ್ ಪಾಸಿಟಿವ್ ಆಘಾತದಿಂದ ಇದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಸುರೇಶ್ ರೈನಾ ಭಾರತಕ್ಕೆ ವಾಪಾಸ್ ಆಗಮಿಸಿದ್ದು ಮತ್ತಷ್ಟು ಆಘಾತ ನೀಡಿದೆ. ಆದರೆ ರೈನಾ ಗೆ ಚೆನ್ನೈ ತಂಡ ಸಂಪೂರ್ಣ ಬೆಂಬಲ ನೀಡಿದೆ.
ಇದೀಗ ಸಿಎಸ್ ಕೆ ತಂಡದ ಪ್ರಮುಖ ಆಟಗಾರ ಶೇನ್ ವ್ಯಾಟ್ಸನ್ ಸುರೇಶ್ ರೈನಾ ಅವರಿಗಾಗಿ ಸಂದೇಶ ಕಳುಹಿಸಿದ್ದಾರೆ. ಇನ್ಸ್ಟಾಗ್ರಾಂ ನಲ್ಲಿ ವಿಡಿಯೋ ಮಾಡಿರುವ ಅವರು, ಈ ಬಾರಿಯ ಐಪಿಎಲ್ ನಿಂದ ನೀವು ತಪ್ಪಿಸಿಕೊಳ್ಳಲಿದ್ದೀರಿ. ಆರಂಭದಿಂದಲೂ ನೀವು ಸಿಎಸ್ ಕೆ ಪರವಾಗಿಯೇ ಇದ್ದಿರಿ. ನೀವು ಸಿಎಸ್ ಕ ತಂಡದ ಹೃದಯ ಬಡಿತ ಇದ್ದಂತೆ ಎಂದು ವ್ಯಾಟ್ಸನ್ ಹೇಳಿದ್ದಾರೆ.
ಐಪಿಎಲ್ ಆರಂಭಕ್ಕೆ ಕೆಲವೇ ದಿನ ಬಾಕಿಯುಳಿದಿದ್ದು, ಚೆನ್ನೈ ತಂಡದ 10 ಮಂದಿಗೆ ಕೋವಿಡ್ ಸೋಂಕು ದೃಢವಾಗಿದೆ. ವೇಗಿ ದೀಪಕ್ ಚಾಹರ್ ಮತ್ತು ಬ್ಯಾಟ್ಸಮನ್ ರಿತುರಾಜ್ ಗಾಯಕ್ವಾಡ್ ಮತ್ತು ಎಂಟು ಮಂದಿ ಸಿಬ್ಬಂದಿಗಳಿಗೆ ಸೋಂಕು ದೃಢವಾಗಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ