ಶಾಂತಾ ರಂಗಸ್ವಾಮಿ ರಾಜೀನಾಮೆ
Team Udayavani, Sep 30, 2019, 5:04 AM IST
ಹೊಸದಿಲ್ಲಿ: ಸ್ವಹಿತಾಸಕ್ತಿ ಸಂಘರ್ಷದ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ವನಿತಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಶಾಂತಾ ರಂಗಸ್ವಾಮಿ ಕ್ರಿಕೆಟ್ ಸಲಹಾ ಸಮಿತಿಯ (ಸಿಎಸಿ) ಸದಸ್ಯತ್ವಕ್ಕೆ ಮತ್ತು ಇಂಡಿಯನ್ ಕ್ರಿಕೆಟರ್ ಅಸೋಸಿಯೇಶನ್ನ (ಐಸಿಎ) ನಿರ್ದೇಶಕಿ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ. ಬಿಸಿಸಿಐಯ ನೈತಿಕತೆ ವಿಭಾಗದ ಅಧಿಕಾರಿ ಡಿ.ಕೆ.ಜೈನ್ ಇತ್ತೀಚೆಗೆ ಶಾಂತಾ ರಂಗಸ್ವಾಮಿಗೆ ನೋಟಿಸ್ ಜಾರಿ ಮಾಡಿದ್ದರು.
ನಾನು ಇತರ ಯೋಜನೆಗಳನ್ನು ಹಾಕಿಕೊಂಡಿದ್ದೇನೆ. ಹೀಗಾಗಿ ರಾಜೀನಾಮೆ ನೀಡಿದ್ದೇನೆ. ಸಿಎಸಿ ಸಭೆ ನಡೆಯುವುದು ವರ್ಷಕ್ಕೊಮ್ಮೆ ಅಥವಾ ಎರಡು ವರ್ಷಕ್ಕೊಮ್ಮೆ. ಹೀಗಿರುವಾಗ ಹಿತಾಸಕ್ತಿಗಳ ಸಂಘರ್ಷ ಹೇಗೆ ಉಂಟಾಗುತ್ತದೆ ಎನ್ನುವುದು ಅರ್ಥವಾಗುತ್ತಿಲ್ಲ ಎಂದು ಶಾಂತಾ ರಂಗಸ್ವಾಮಿ ಈ ಬೆಳವಣಿಗೆಗೆ ಪ್ರತಿಕ್ರಿಯಿಸಿದ್ದಾರೆ.
ಬಿಸಿಸಿಐ ನಿಯಮದ ಪ್ರಕಾರ ಒಬ್ಬರು ಒಂದಕ್ಕಿಂತ ಹೆಚ್ಚು ಹುದ್ದೆಯನ್ನು ಹೊಂದುವಂತಿಲ್ಲ. ಶಾಂತಾ ರಂಗಸ್ವಾಮಿ ಸಿಎಸಿ ಮತ್ತು ಐಸಿಎ ಹುದ್ದೆಗಳನ್ನು ಹೊಂದಿರುವ ಮೂಲಕ ಸ್ವಹಿತಾಸಕ್ತಿಯ ಸಂಘರ್ಷದ ಆರೋಪಕ್ಕೊಳಗಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್