ತ್ರಿವರ್ಣದೊಂದಿಗೆ ಹೆಜ್ಜೆ ಹಾಕಿದ ಶರತ್‌ ಕಮಲ್‌, ನಿಖತ್‌ ಜರೀನ್‌

ಕಾಮನ್ವೆಲ್ತ್‌ ಗೇಮ್ಸ್‌ ಸಮಾರೋಪ ಸಮಾರಂಭ

Team Udayavani, Aug 8, 2022, 10:51 PM IST

ತ್ರಿವರ್ಣದೊಂದಿಗೆ ಹೆಜ್ಜೆ ಹಾಕಿದ ಶರತ್‌ ಕಮಲ್‌, ನಿಖತ್‌ ಜರೀನ್‌

ಬರ್ಮಿಂಗ್‌ಹ್ಯಾಮ್‌: 22ನೇ ಕಾಮನ್ವೆಲ್ತ್‌ ಗೇಮ್ಸ್‌ ಸೋಮವಾರ ತಡರಾತ್ರಿ ಬರ್ಮಿಂಗ್‌ಹ್ಯಾಮ್‌ನಲ್ಲಿ ಅತ್ಯಂತ ಯಶಸ್ವಿಯಾಗಿ ಮುಗಿಯಿತು. ಸಮಾರೋಪ ಸಮಾರಂಭದಲ್ಲಿ ಟಿಟಿಪಟು ಅಚಂತ ಶರತ್‌ ಕಮಲ್‌ ಮತ್ತು ಬಾಕ್ಸರ್‌ ನಿಖತ್‌ ಜರೀನ್‌ ಭಾರತದ ತ್ರಿವರ್ಣ ಧ್ವಜ ಹಿಡಿದು ಸಾಗಿದರು.

ಶರತ್‌ ಕಮಲ್‌ ಒಟ್ಟು 4 ಪದಕ ಗೆದ್ದು ಈ ಕೂಟದಲ್ಲಿ ಭಾರತದ ಹೀರೋ ಆಗಿ ಮೂಡಿಬಂದರು. ಇದರಲ್ಲಿ ಸಿಂಗಲ್ಸ್‌ ಚಿನ್ನವೂ ಒಳಗೊಂಡಿದೆ. ನಿಖತ್‌ ಜರೀನ್‌ 50 ಕೆಜಿ ಲೈಟ್‌ ಫ್ಲೈವೇಟ್‌ ಸ್ಪರ್ಧೆಯಲ್ಲಿ ಬಂಗಾರ ಪದಕದ ಸಾಧನೆಗೈದಿದ್ದರು.

ಉದ್ಘಾಟನ ಸಮಾರಂಭದಲ್ಲಿ ಪಿ.ವಿ. ಸಿಂಧು ಮತ್ತು ಹಾಕಿ ತಂಡದ ನಾಯಕ ಮನ್‌ಪ್ರೀತ್‌ ಸಿಂಗ್‌ ಭಾರತದ ಧ್ವಜಧಾರಿಗಳಾಗಿದ್ದರು. 2026ರ ಕಾಮನ್ವೆಲ್ತ್‌ ಗೇಮ್ಸ್‌ ಆಸ್ಟ್ರೇಲಿಯದ ವಿಕ್ಟೋರಿಯದಲ್ಲಿ ನಡೆಯಲಿದೆ.

ಅಭಿನಂದನೆಗಳು ಭಾರತ ತಂಡಕ್ಕೆ
ಬರ್ಮಿಂಗ್‌ಹ್ಯಾಮ್‌ ಕಾಮನ್ವೆಲ್ತ್‌ ಗೇಮ್ಸ್‌ ಸಂಪನ್ನಗೊಂಡಿದೆ. ಕೋವಿಡ್‌ ಕಾಲಘಟ್ಟದ ಬಳಿಕ ಅತ್ಯಂತ ಯಶಸ್ವಿಯಾಗಿ ನಡೆದ ಕೂಟವೆಂಬುದು ಇದರ ಹೆಗ್ಗಳಿಕೆ. ಭಾರತದ ಪಾಲಿಗೆ ಹಲವು ಕಾರಣಗಳಿಂದ ಈ ಗೇಮ್ಸ್‌ ಐತಿಹಾಸಿಕವೆನಿಸಿದೆ. 22 ಚಿನ್ನ, 16 ಬೆಳ್ಳಿ, 23 ಕಂಚು ಸೇರಿದಂತೆ ಒಟ್ಟು 61 ಪದಕಗಳನ್ನು ಗೆದ್ದ ಹೆಗ್ಗಳಿಕೆ ಭಾರತದ್ದು.

2018ರ ಗೋಲ್ಡ್‌ಕೋಸ್ಟ್‌ ಕೂಟದಲ್ಲಿ ತೃತೀಯ ಸ್ಥಾನಿಯಾಗಿದ್ದ ಭಾರತ ಈ ಬಾರಿ 4ನೇ ಸ್ಥಾನಕ್ಕೆ ಇಳಿದರೂ ಸಾಧನೆ ಮಾತ್ರ ಗಮನಾರ್ಹ. ಸಿಂಹಪಾಲು ಪದಕಗಳನ್ನು ತಂದುಕೊಡುತ್ತಿದ್ದ ಶೂಟಿಂಗ್‌ ಸ್ಪರ್ಧೆಯ ಗೈರಲ್ಲೂ ಭಾರತ 61 ಪದಕ ಜಯಿಸಿದೆ. ಅಂದರೆ, 2018ರ ಕೂಟಕ್ಕೆ ಹೋಲಿಸಿದರೆ ಕಡಿಮೆಯಾದದ್ದು 5 ಪದಕ ಮಾತ್ರ. ಕೆಲವು ಹೊಸ ಕ್ರೀಡೆಗಳಲ್ಲಿ ಭಾರತ ತನ್ನ ಸಾಮರ್ಥ್ಯವನ್ನು ಸಾಬೀತುಮಾಡಿದೆ. ಕೂಟದ ಕಡೆಯ ದಿನವಾದ ಸೋಮವಾರವೂ 4 ಚಿನ್ನ ಜಯಿಸಿದೆ. ಅಭಿನಂದನೆಗಳು ಭಾರತೀಯ ತಂಡಕ್ಕೆ.

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

1-saddas

Badminton; ಇಂದಿನಿಂದ ಸ್ವಿಸ್‌ ಓಪನ್‌ ಬ್ಯಾಡ್ಮಿಂಟನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.