ಭಾರತದ ಕಿವೀಸ್‌ ಪ್ರವಾಸ: ಧವನ್‌, ಇಶಾಂತ್‌ ಹೊರಕ್ಕೆ


Team Udayavani, Jan 22, 2020, 12:26 AM IST

Dawan—ISANTH

ಹೊಸದಿಲ್ಲಿ: ಮುಂಬರುವ ನ್ಯೂಜಿಲ್ಯಾಂಡ್‌ ಪ್ರವಾಸಕ್ಕಿಂತ ಮೊದಲು ಕೆಲವು ಆಟಗಾರರು ಗಾಯದ ಸಮಸ್ಯೆಗೆ ಸಿಲುಕಿದ್ದರಿಂದ ಭಾರತೀಯ ಕ್ರಿಕೆಟ್‌ ತಂಡ ಕಳವಳಕ್ಕೆ ಒಳಗಾಗಿದೆ. ಆರಂಭಿಕ ಆಟಗಾರ ಶಿಖರ್‌ ಧವನ್‌ ನ್ಯೂಜಿಲ್ಯಾಂಡ್‌ ವಿರುದ್ಧದ ಟಿ20 ಸರಣಿಯಿಂದ ಹೊರಬಿದ್ದಿದ್ದರೆ ವೇಗಿ ಇಶಾಂತ್‌ ಶರ್ಮ ಟೆಸ್ಟ್‌ ಸರಣಿ ಕಳೆದುಕೊಳ್ಳಲಿದ್ದಾರೆ.

ಭುಜದ ನೋವಿನಿಂದ ಬಳಲುತ್ತಿರುವ ಶಿಖರ್‌ ಧವನ್‌ ಅವರು ಶುಕ್ರವಾರದಿಂದ ಆರಂಭವಾಗುವ ಐದು ಪಂದ್ಯಗಳ ಟ್ವೆಂಟಿ20 ಸರಣಿಯಿಂದ ಹೊರಬಿದ್ದಿದ್ದಾರೆ. ಬೆಂಗಳೂರಿನಲ್ಲಿ ಆಸ್ಟ್ರೇಲಿಯ ವಿರುದ್ಧ ನಡೆದ 3ನೇ ಏಕದಿನದಲ್ಲಿ ಫೀಲ್ಡಿಂಗ್‌ ಮಾಡುವ ವೇಳೆ ಧವನ್‌ ಭುಜಕ್ಕೆ ಗಾಯ ಮಾಡಿಕೊಂಡಿದ್ದರು.

“ಹೌದು, ಧವನ್‌ ಟಿ20 ಸರಣಿಯಿಂದ ಹೊರಬಿದ್ದಿದ್ದಾರೆ. ಅವರ ಸ್ಥಾನಕ್ಕೆ ಬದಲಿ ಆಟಗಾರ ಯಾರೆಂದು ಶೀಘ್ರ ಪ್ರಕಟಿಸ ಲಾಗುವುದು’ ಎಂದು ಬಿಸಿಸಿಐ ತಿಳಿಸಿದೆ.

ಇಶಾಂತ್‌ ಕೂಡ ಹೊರಕ್ಕೆ
ರಣಜಿ ಟ್ರೋಫಿ ಪಂದ್ಯದ ವೇಳೆ ಪಾದದ ಸೆಳೆತಕ್ಕೆ ಒಳಗಾದ ಇಶಾಂತ್‌ ಶರ್ಮ ಅವರು ಫೆ. 21ರಿಂದ ಆರಂಭವಾಗುವ ಟೆಸ್ಟ್‌ ಸರಣಿಯಿಂದ ಹೊರಬಿದ್ದಿದ್ದಾರೆ. ಇಶಾಂತ್‌ ಅವರ ಗಾಯದ ಎಂಆರ್‌ಐ ಸ್ಕ್ಯಾನ್‌ ನಡೆಸಲಾಗಿದ್ದು ಗಾಯದ ಪ್ರಮಾಣ ಗ್ರೇಡ್‌ ತ್ರೀ ಇದೆ. ಇದೊಂದು ಗಂಭೀರ ಗಾಯದ ಸಮಸ್ಯೆಯಾಗಿದ್ದು ಆರು ವಾರಗಳ ವಿಶ್ರಾಂತಿಯ ಅಗತ್ಯವಿದೆ. ಇದರಿಂದ ತಂಡಕ್ಕೆ ಹೊಡೆತ ಬೀಳಲಿದೆ ಎಂದು ಡೆಲ್ಲಿ ಆ್ಯಂಡ್‌ ಡಿಸ್ಟ್ರಿಕ್ಟ್ ಕ್ರಿಕೆಟ್‌ ಅಸೋಸಿಯೇಶನ್‌ನ ಪ್ರಧಾನ ಕಾರ್ಯದರ್ಶಿ ವಿನೋದ್‌ ತಿಹಾರ ಹೇಳಿದ್ದಾರೆ.

ನ್ಯೂಜಿಲ್ಯಾಂಡ್‌ ಪ್ರವಾಸ
ನ್ಯೂಜಿಲ್ಯಾಂಡ್‌ ಪ್ರವಾಸದ ವೇಳೆ ಭಾರತೀಯ ತಂಡವು ಐದು ಟ್ವೆಂಟಿ20, ಮೂರು ಏಕದಿನ ಮತ್ತು ಎರಡು ಟೆಸ್ಟ್‌ ಪಂದ್ಯಗಳನ್ನಾಡಲಿದೆ. ಟ್ವೆಂಟಿ20 ಸರಣಿಯು ಜ. 24ರಿಂದ ಆರಂಭವಾಗಲಿದೆ.

ಆಸ್ಟ್ರೇಲಿಯ ವಿರುದ್ಧದ 3ನೇ ಏಕದಿನ ಪಂದ್ಯದ ವೇಳೆ ಫಿಂಚ್‌ ಹೊಡೆತವೊಂದನ್ನು ತಡೆಯಲು ಶಿಖರ್‌ ಧವನ್‌ ಡೈವ್‌ ಹೊಡೆದಾಗ ಅವರ ಭುಜಕ್ಕೆ ಏಟು ಬಿತ್ತು. ಇದರಿಂದ ಅವರು ಕ್ಷೇತ್ರರಕ್ಷಣೆ ಮತ್ತು ಬ್ಯಾಟಿಂಗ್‌ ಕೂಡ ನಡೆಸಿರಲಿಲ್ಲ. ಧವನ್‌ ಅವರನ್ನು ಎಕ್ಸ್‌ರೇಗೆ ಒಳಪಡಿಸಿದಾಗ ಗಾಯದ ತೀವ್ರತೆ ಹೆಚ್ಚಿರುವ ಕಾರಣ ಅವರಿಗೆ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದರಿಂದ ಅವರನ್ನು ಸರಣಿಯಿಂದ ಹೊರಗಿಡಲು ನಿರ್ಧರಿಸಲಾಗಿದೆ ಎಂದು ಬಿಸಿಸಿಐ ಹೇಳಿದೆ.

ಟಾಪ್ ನ್ಯೂಸ್

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.