ಮುರಳಿ ವಿಜಯ್ ಗಾಯಾಳು ಲಂಕಾ ಸರಣಿಗೆ ಶಿಖರ್ ಧವನ್
Team Udayavani, Jul 18, 2017, 9:03 AM IST
ಹೊಸದಿಲ್ಲಿ: ಸದ್ಯದಲ್ಲೇ ಶ್ರೀಲಂಕಾದಲ್ಲಿ ಟೆಸ್ಟ್ ಸರಣಿ ಆಡಲಿರುವ ಭಾರತ ತಂಡದಲ್ಲಿ ಒಂದು ಬದಲಾವಣೆ ಸಂಭವಿಸಿದೆ. ಆರಂಭಕಾರ ಮುರಳಿ ವಿಜಯ್ ಗಾಯದಿಂದ ಪೂರ್ತಿ ಚೇತರಿಸದ ಕಾರಣ ಈ ಪ್ರವಾಸದಿಂದ ಹೊರಗುಳಿಯಲಿದ್ದಾರೆ. ಇವರ ಬದಲು ಎಡಗೈ ಓಪನರ್ ಶಿಖರ್ ಧವನ್ ಅವರನ್ನು ಸೇರಿಸಿಕೊಳ್ಳಲಾಗಿದೆ. ಬಿಸಿಸಿಐ ಕಾರ್ಯದರ್ಶಿ ಅಮಿತಾಭ್ ಚೌಧರಿ ಸೋಮವಾರ ಈ ಬದಲಾವಣೆಯನ್ನು ಪ್ರಕಟಿಸಿದರು.
ಕಳೆದ ಆಸ್ಟ್ರೇಲಿಯ ಸರಣಿಯ ವೇಳೆ ಮುರಳಿ ವಿಜಯ್ ಬಲಗೈ ಮಣಿಗಂಟಿನ ನೋವಿಗೆ ಸಿಲುಕಿದ್ದರು. ಬಳಿಕ ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದರು. ಆದರೆ ಅಭ್ಯಾಸದ ವೇಳೆ ಅವರ ಮಣಿಗಂಟಿನ ನೋವು ಪೂರ್ತಿ ವಾಸಿಯಾಗದಿರುವುದನ್ನು ಬಿಸಿಸಿಐ ವೈದ್ಯಕೀಯ ತಂಡ ಗಮನಿಸಿದೆ. ವಿಜಯ್ ಅವರಿಗೆ ಇನ್ನಷ್ಟು ವಿಶ್ರಾಂತಿ ಅಗತ್ಯವಿರುವುದಾಗಿ ಸೂಚಿಸಿದೆ.
ಶಿಖರ್ ಧವನ್ 23 ಟೆಸ್ಟ್ಗಳನ್ನಾಡಿದ್ದು, 4 ಶತಕಗಳ ಸಹಿತ 1,464 ರನ್ ಬಾರಿಸಿದ್ದಾರೆ. ಧವನ್ ತಮ್ಮ ಕೊನೆಯ ಟೆಸ್ಟ್ ಪಂದ್ಯವನ್ನು ಕಳೆದ ವರ್ಷ ನ್ಯೂಜಿಲ್ಯಾಂಡ್ ವಿರುದ್ಧ ಆಡಿದ್ದರು. ತಂಡದಲ್ಲಿರುವ ಉಳಿದಿಬ್ಬರು ಆರಂಭಿಕರೆಂದರೆ ಕೆ.ಎಲ್. ರಾಹುಲ್ ಮತ್ತು ಅಭಿನವ್ ಮುಕುಂದ್. ಭಾರತ-ಶ್ರೀಲಂಕಾ 3 ಟೆಸ್ಟ್ ಪಂದ್ಯಗಳನ್ನು ಆಡಲಿದ್ದು, ಮೊದಲ ಟೆಸ್ಟ್ ಜು. 26ರಿಂದ ಗಾಲೆಯಲ್ಲಿ ಆರಂಭವಾಗಲಿದೆ.
ಭಾರತ ತಂಡ: ವಿರಾಟ್ ಕೊಹ್ಲಿ (ನಾಯಕ), ಕೆ.ಎಲ್. ರಾಹುಲ್, ಶಿಖರ್ ಧವನ್, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ, ರೋಹಿತ್ ಶರ್ಮ, ಆರ್. ಅಶ್ವಿನ್, ರವೀಂದ್ರ ಜಡೇಜ, ವೃದ್ಧಿಮಾನ್ ಸಾಹಾ, ಇಶಾಂತ್ ಶರ್ಮ, ಉಮೇಶ್ ಯಾದವ್, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಕುಲದೀಪ್ ಯಾದವ್, ಅಭಿನವ್ ಮುಕುಂದ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್