Shimron Hetmyer; “ಮೂರು ಸೋಲಿಗೆ ಒಂದರಲ್ಲೇ ಸೇಡು’


Team Udayavani, Apr 18, 2023, 5:45 AM IST

Shimron Hetmyer; “ಮೂರು ಸೋಲಿಗೆ ಒಂದರಲ್ಲೇ ಸೇಡು’

ಅಹ್ಮದಾಬಾದ್‌: “ಕಳೆದ ವರ್ಷದ ಸತತ ಮೂರು ಸೋಲಿಗೆ ಈ ಒಂದು ಪಂದ್ಯದ ಮೂಲಕ ಸೇಡು ತೀರಿತು’ ಎಂಬುದಾಗಿ ಜೋಶ್‌ನಿಂದ ಪ್ರತಿಕ್ರಿಯಿಸಿದ್ದಾರೆ ರಾಜಸ್ಥಾನ್‌ ರಾಯಲ್ಸ್‌ ತಂಡದ ಗೆಲುವಿನ ಹೀರೋ, ವೆಸ್ಟ್‌ ಇಂಡೀಸ್‌ನ ಬಿಗ್‌ ಹಿಟ್ಟರ್‌ ಶಿಮ್ರನ್‌ ಹೆಟ್‌ಮೈರ್‌.

“ನನಗೆ ಪದಗಳೇ ಸಿಗುತ್ತಿಲ್ಲ. ಗುಜರಾತ್‌ ಹುಡುಗರ ವಿರುದ್ಧ ಗೆಲ್ಲುವುದು ಸುಲಭವಲ್ಲ. ಅವರು ಕಳೆದ ವರ್ಷ ನಮ್ಮನ್ನು ಮೂರೂ ಪಂದ್ಯಗಳಲ್ಲಿ ಸೋಲಿಸಿದ್ದರು. ಹೀಗಾಗಿ ನಮ್ಮ ಪಾಲಿಗೆ ಇದೊಂದು ಸೇಡಿನ ಪಂದ್ಯವಾಗಿತ್ತು. ಆ ಮೂರು ಪಂದ್ಯಗಳಿಗೆ ಒಟ್ಟಾಗಿ ಈ ಒಂದು ಪಂದ್ಯದ ಮೂಲಕ ಸೇಡು ತೀರಿತೆಂದು ಭಾವಿಸುವೆ’ ಎಂಬುದಾಗಿ ಹೆಟ್‌ಮೈರ್‌ ಹೇಳಿದರು.

ರವಿವಾರ ರಾತ್ರಿಯ ಐಪಿಎಲ್‌ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಗುಜರಾತ್‌ 7 ವಿಕೆಟಿಗೆ 177 ರನ್‌ ಮಾಡಿತ್ತು. ರಾಜಸ್ಥಾನ್‌ ಚೇಸಿಂಗ್‌ ತೀರಾ ನಿಧಾನ ಗತಿಯಿಂದ ಕೂಡಿದ್ದರಿಂದ ಗೆಲುವಿನ ಸಾಧ್ಯತೆ ದೂರವೇ ಇತ್ತು. 10 ಓವರ್‌ ವೇಳೆ 50 ರನ್‌ ಗಡಿ ತಲುಪಿತಷ್ಟೇ. ಕೊನೆಯ 5 ಓವರ್‌ ಆರಂಭವಾಗುವಾಗ 5ಕ್ಕೆ 114 ರನ್‌ ಆಗಿತ್ತು. 32 ಎಸೆತಗಳಿಂದ 60 ರನ್‌ ಸಿಡಿಸಿದ ನಾಯಕ ಸಂಜು ಸ್ಯಾಮ್ಸನ್‌ ಆಗಷ್ಟೇ ಆಟ ಮುಗಿಸಿ ನಡೆದಿದ್ದರು. 5 ಓವರ್‌ಗಳಲ್ಲಿ 64 ರನ್‌ ತೆಗೆಯುವ ಸವಾಲು ಮುಂದಿತ್ತು. ಹೆಟ್‌ಮೈರ್‌ 14 ಎಸೆತಗಳಿಂದ 20 ರನ್‌ ಮಾಡಿ ಆಡುತ್ತಿದ್ದರು.

ಆದರೆ ಕೊನೆಯ 5 ಓವರ್‌ಗಳಲ್ಲಿ ಸಂಭವಿಸಿದ್ದೇ ಬೇರೆ. ಎಂದಿನ ವಿಸ್ಫೋಟಕ ಆಟಕ್ಕೆ ಕುದುರಿಕೊಂಡ ಹೆಟ್‌ಮೈರ್‌, “ಹಿಟ್‌ಮೈರ್‌’ ಅವತಾರ ಎತ್ತಿದರು. ಗುಜರಾತ್‌ ಬೌಲಿಂಗ್‌ ಧೂಳೀಪಟಗೊಂಡಿತು. 4 ಎಸೆತ ಬಾಕಿ ಇರುವಾಗಲೇ ರಾಜಸ್ಥಾನ್‌ 7 ವಿಕೆಟಿಗೆ 179 ರನ್‌ ಬಾರಿಸಿ ಅಮೋಘ ಜಯಭೇರಿ ಮೊಳಗಿಸಿತು. ಆಗ ಹೆಟ್‌ಮೈರ್‌ 26 ಎಸೆತಗಳಿಂದ 56 ರನ್‌ ಬಾರಿಸಿ ಅಜೇಯರಾಗಿದ್ದರು (2 ಬೌಂಡರಿ, 5 ಸಿಕ್ಸರ್‌).
“ಕೊನೆಯ ಓವರ್‌ ಎಸೆಯಲು ಸ್ಪಿನ್ನರ್‌ ಬಂದುದರಿಂದ ನನಗೆ ಖುಷಿ ಆಯಿತು. ನೂರ್‌ ಅಹ್ಮದ್‌ ಚೆನ್ನಾಗಿಯೇ ಬೌಲಿಂಗ್‌ ಮಾಡಿದ್ದರು. ಎರಡನೇ ಎಸೆತದಲ್ಲಿ ಸಿಕ್ಸರ್‌ ಬಾರಿಸಿ ಪಂದ್ಯವನ್ನು ಮುಗಿಸಿದೆ. ಗುಜರಾತ್‌ ತಂಡವನ್ನು ಸೋಲಿಸಲೇಬೇಕೆಂಬುದು ನಮ್ಮ ಹಠವಾಗಿತ್ತು. ಈ ಕೆಲಸ ಮಾಡಿ ಮುಗಿಸಿದ್ದೇವೆ’ ಎಂದು ಪಂದ್ಯಶ್ರೇಷ್ಠ ಗೌರವಕ್ಕೆ ಭಾಜನರಾದ ಹೆಟ್‌ಮೈರ್‌ ಖುಷಿಯಿಂದ ಹೇಳಿದರು.

ಟಾಪ್ ನ್ಯೂಸ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.