ಶಿರಾಡಿ, ಸಂಪಾಜೆ ಘಾಟಿ 6 ತಿಂಗಳು ಬಂದ್‌ 


Team Udayavani, Aug 22, 2018, 6:00 AM IST

19.jpg

ವಾಹನ ದಟ್ಟಣೆ ತಪ್ಪಿಸಲು ಮಂಗಳೂರಿನಿಂದ ಹೊರಡುವ ವಾಹನಗಳು ಚಾರ್ಮಾಡಿ ಮತ್ತು ಆಗುಂಬೆ ಘಾಟಿ ಮೂಲಕ ಪ್ರಯಾಣಿಸುವುದು ಸೂಕ್ತ. ಕುಂದಾಪುರ ಮತ್ತು ಉಡುಪಿಯಿಂದ ಹೊರಡುವ ವಾಹನಗಳು ಕುದುರೆಮುಖ-ಮಾಲಘಾಟ್‌ ಮಾರ್ಗ ಅಥವಾ ಬಾಳೆಬರೆ ಘಾಟಿ ಮೂಲಕ ಬೆಂಗಳೂರು ಕಡೆ ಬರುವುದು ಸೂಕ್ತ.

ಬೆಂಗಳೂರು: ರಾಜಧಾನಿ ಸೇರಿದಂತೆ ಹಳೇ ಮೈಸೂರು ಭಾಗದಿಂದ ಕರಾವಳಿಗೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟಿ ಮತ್ತು ಸಂಪಾಜೆ ಘಾಟಿ ರಸ್ತೆಗಳಲ್ಲಿ ಇನ್ನೂ ಆರು ತಿಂಗಳು ವಾಹನಗಳ ಓಡಾಟ ಸಾಧ್ಯವಿಲ್ಲ. ಹೀಗಾಗಿ ಕರಾವಳಿ ಭಾಗಕ್ಕೆ ತೆರಳುವವರು ಪರ್ಯಾಯ ರಸ್ತೆಗಳನ್ನು ಅವಲಂಬಿಸುವುದು ಅನಿವಾರ್ಯವಾಗಿದೆ. ಸುದ್ದಿಗಾರರೊಂದಿಗೆ ಲೋಕೋಪಯೋಗಿ ಸಚಿವ ಎಚ್‌.ಡಿ. ರೇವಣ್ಣ ಮಾತನಾಡಿ, ಮಳೆ ಮತ್ತು ಗುಡ್ಡ ಕುಸಿತದಿಂದ ಶಿರಾಡಿಹಾಗೂ ಸಂಪಾಜೆ ಘಾಟಿ ಸಂಪೂರ್ಣ ಹಾಳಾಗಿದ್ದು, ದುರಸ್ತಿಗೆ ಕನಿಷ್ಠ ತಿಂಗಳು ಬೇಕು. ಸಂಪಾಜೆ ಘಾಟಿಯಲ್ಲಿ 32 ಕಿ.ಮೀ. ಉದ್ದದ ರಸ್ತೆ ಸಂಪೂರ್ಣ ನಾಶವಾಗಿದೆ. ರಸ್ತೆ ಸಂಚಾರಕ್ಕೆ ಯೋಗ್ಯ ಎಂದು ತಜ್ಞರು ವರದಿ ನೀಡುವವರೆಗೂ ವಾಹನ ಸಂಚಾರಕ್ಕೆ
ಅವಕಾಶ ನೀಡದಂತೆ ಸಂಬಂಧಿಸಿದ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

ಮಳೆ ನಿಂತ ನಂತರ ಸಂಪಾಜೆ ಘಾಟಿ ರಸ್ತೆಯನ್ನು ತಾತ್ಕಾಲಿಕವಾಗಿ ದುರಸ್ತಿಗೊಳಿಸಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಬಹುದು. ಬಸ್‌ ಸೇರಿದಂತೆ ಭಾರೀ ವಾಹನಗಳು ಓಡಾಡಲು ಸಾಧ್ಯವಿಲ್ಲ. ಆದರೆ, ಶಿರಾಡಿ ಘಾಟಿ ರಸ್ತೆ ಸಂಪೂರ್ಣವಾಗಿ ಕೊಚ್ಚಿ ಹೋಗಿದೆ. ಒಂದೆಡೆ ಗುಡ್ಡ ಕುಸಿದು ರಸ್ತೆ ಮೇಲೆ ಮಣ್ಣು ಬಿದ್ದರೆ, ಇನ್ನೊಂದೆಡೆ ರಸ್ತೆ ಕೆಳಗಿನ ಗುಡ್ಡ ಕುಸಿದು ರಸ್ತೆ ಆಳಕ್ಕೆ ಜರುಗುತ್ತಿದೆ. ಇದನ್ನು ಸರಿಪಡಿಸಬೇಕಾದರೆ ಮಂಗಳೂರು ಅಥವಾ
ಪಿರಿಯಾಪಟ್ಟಣದಿಂದ ಮಣ್ಣು ತಂದು ಹಾಕಬೇಕಾಗಿದೆ. ಹೀಗಾಗಿ ರಸ್ತೆ ದುರಸ್ತಿಗೆ ಹೆಚ್ಚು ಸಮಯ ಬೇಕಾಗುತ್ತದೆ. ಜತೆಗೆ ಸುಮಾರು 60 ಕೋಟಿ ರೂ. ವೆಚ್ಚವಾಗುತ್ತದೆ ಎಂದು ತಿಳಿಸಿದರು.

ಚಿಕ್ಕಮಗಳೂರಲ್ಲಿ ಭೂಕುಸಿತ 
ಮಂಗಳವಾರ ಕೊಪ್ಪ ತಾಲೂಕಿನ ಭೂತನಕಾಡು ಸಮೀಪದ ಮೈಸೂರು ಪ್ಲಾಂಟೇಷನ್‌ನಲ್ಲಿ ಅರ್ಧ ಎಕರೆಯಷ್ಟು ಪ್ರದೇಶದಲ್ಲಿ ಸುಮಾರು 30 ಅಡಿ ಆಳಕ್ಕೆ ಮಣ್ಣು ಕುಸಿದಿದೆ. ತಾಲೂಕಿನ ಜಾಗರ ಸಮೀಪದ ಸುಗುಡವಾನಿ ಗ್ರಾಮದಲ್ಲೂ ಗುಡ್ಡ ಕುಸಿದಿದ್ದು, ಕಾಫಿ ಗಿಡಗಳು ಹಾಗೂ ಅಡಕೆ ಮರಗಳು ನೆಲಕ್ಕುರುಳಿವೆ. ಲಕ್ಷಾಂತರ ರೂ. ಮೌಲ್ಯದ ಬೆಳೆ ನಾಶವಾಗಿದೆ. ಅಲ್ಲದೆ, ಮೂಡಿಗೆರೆ, ಶೃಂಗೇರಿ, ಕೊಪ್ಪ, ನರಸಿಂಹರಾಜಪುರ ತಾಲೂಕುಗಳಲ್ಲೂ ಭೂಕುಸಿತವಾಗಿರುವ ವರದಿಯಾಗಿದೆ. 

ಭಾರೀ ವಾಹನ ಸಂಚಾರ ನಿಷೇಧ: ನಿರಂತರ ಮಳೆ ಹಾಗೂ ಭೂ ಕುಸಿತ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯ
ಹುಲಿಕಲ್‌ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧಿಸಲಾಗಿದೆ. 

ಪರ್ಯಾಯ ಮಾರ್ಗ
ಬೆಂಗಳೂರು-ಹಾಸನ- ಬೇಲೂರು-ಮೂಡಿಗೆರೆ- ಚಾರ್ಮಾಡಿ-ಉಜಿರೆ-ಮಂಗಳೂರು (ಎಲ್ಲಾ ರೀತಿಯ ವಾಹನಗಳು)

ಬೆಂಗಳೂರು-ಶಿವಮೊಗ್ಗ- ತೀರ್ಥಹಳ್ಳಿ-ಆಗುಂಬೆ- ಉಡುಪಿ-ಮಂಗಳೂರು (ಮಿನಿ ಬಸ್‌ ಮತ್ತು ಅದಕ್ಕಿಂತ ಸಣ್ಣ ವಾಹನಗಳು)

ಬೆಂಗಳೂರು-ಹಾಸನ- ಬೇಲೂರು-ಮೂಡಿಗೆರೆ- ಕೊಟ್ಟಿಗೆಹಾರ-ಕಳಸ-ಕುದುರೆಮುಖ- ಮಾಲಘಾಟ್‌-ಕಾರ್ಕಳ-ಮಂಗಳೂರು ( ಎಲ್ಲಾ ರೀತಿಯ ವಾಹನಗಳು) 

ಬೆಂಗಳೂರು-ಶಿವಮೊಗ್ಗ-ಆಯ ನೂರು-ಮಾಸ್ತಿಕಟ್ಟೆ-ಬಾಳೆಬರೆ ಘಾಟ್‌-ಹೊಸಂಗಡಿ-ಸಿದ್ದಾಪುರ- ಕುಂದಾಪುರ-ಉಡುಪಿ-ಮಂಗಳೂರು

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.