ರಾಜ್ಯ ಹಾಕಿ ಸಂಸ್ಥೆಯಿಂದಲೇ ಕಿರಿಯರಿಗೆ ಕತ್ತರಿ?


Team Udayavani, Dec 6, 2017, 11:24 AM IST

06-20.jpg

ಬೆಂಗಳೂರು: ಕರ್ನಾಟಕದಲ್ಲಿ ಹಾಕಿ ಕುಸಿತಕ್ಕೆ ಕಾರಣಗಳೇನು? ಉತ್ತರ ಹುಡುಕುತ್ತ ಹೋದರೆ ಹಲವಾರು ಕಾರಣ ತೆರೆದುಕೊಳ್ಳುತ್ತದೆ. ತುಸು ಆತಂಕಕ್ಕೂ ಎಡೆ ಮಾಡಿಕೊಡುತ್ತದೆ.

ಸ್ವತಃ ರಾಜ್ಯ ಹಾಕಿ ಸಂಸ್ಥೆ ಬೇಜವಾಬ್ದಾರಿ ತನ, ಕೋಚ್‌ಗಳ ನಿರ್ಲಕ್ಷ್ಯದಿಂದ ರಾಜ್ಯ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕುಗ್ಗಿದೆ. ಹೀಗೊಂದು ಸ್ಫೋಟಕ ಸುದ್ದಿಯನ್ನು ಹಾಕಿ  ಕರ್ನಾಟಕದ ಹೆಸರು ಹೇಳಲಿಚ್ಛಿಸದ ವ್ಯಕ್ತಿಯೊಬ್ಬರು ಉದಯವಾಣಿಗೆ ತಿಳಿಸಿದ್ದಾರೆ. ಆದರೆ ಹಾಕಿ ಕರ್ನಾಟಕ ಪ್ರಧಾನ ಕಾರ್ಯದರ್ಶಿ ಎ.ಬಿ. ಸುಬ್ಬಯ್ಯ ಈ ಆರೋಪವನ್ನು ತಳ್ಳಿ ಹಾಕಿದ್ದಾರೆ.

ಹಾಕಿ ಕರ್ನಾಟಕ ನಿರ್ಲಕ್ಷ್ಯವೇ?
ಕಳೆದ 5-6 ವರ್ಷದಲ್ಲಿ ಹಾಕಿ ಕರ್ನಾಟಕ ಕಿರಿಯರಿಗಾಗಿ ಕೂಟವನ್ನು ಸರಿಯಾಗಿ ಆಯೋ ಜಿಸುತ್ತಿಲ್ಲ. ಇದರಿಂದ ಹಾಕಿ ಕರ್ನಾಟಕದ ಹುಡುಗರು ದೊಡ್ಡ ಮಟ್ಟದಲ್ಲಿ ಅವಕಾಶ ಕಳೆದುಕೊಳ್ಳುತ್ತಿದ್ದಾರೆ. ಸದ್ಯ ರಾಜ್ಯದಲ್ಲಿ ವರ್ಷಕ್ಕೆ 2 ಪ್ರಮುಖ ಕೂಟ ಆಯೋಜಿಸಿದರೆ ಅದೇ ದೊಡ್ಡದು. ಹೆಚ್ಚು ಕೂಟವನ್ನು ಆಡಿ, ಸಾಮರ್ಥ್ಯ, ಕೌಶಲ ಹೆಚ್ಚಿಸಿಕೊಳ್ಳಬೇಕಾಗಿದ್ದು ಅಗತ್ಯ. ಆದರೆ ಕಿರಿಯ ಆಟಗಾರರನ್ನು ಸಂಪೂರ್ಣ ನಿರ್ಲಕ್ಷಿಸಲಾಗಿದೆ. ಇದರಿಂದ ರಾಷ್ಟ್ರೀಯ ಕಿರಿಯರ ತಂಡದಲ್ಲಿ ರಾಜ್ಯ ಆಟಗಾರರಿಗೆ ಸ್ಥಾನ ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಹಾಕಿ ಕರ್ನಾಟಕದ ಅಧಿಕಾರಿಯೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.

ರಾಜ್ಯ ಆಟಗಾರರಿಗೆ ಭಾರತ ತಂಡದಲ್ಲಿ ಸ್ಥಾನ ಸಿಗದಿರಲು ಹಾಕಿ ಕರ್ನಾಟಕವೇ ಕಾರಣ ಅನ್ನುವ ಆರೋಪವನ್ನು ಹಾಕಿ ಕರ್ನಾಟಕ ಪ್ರಧಾನ ಕಾರ್ಯದರ್ಶಿ ಎ.ಬಿ. ಸುಬ್ಬಯ್ಯ ತಳ್ಳಿ ಹಾಕಿದ್ದಾರೆ. ಕಿರಿಯರ ಹಾಗೂ ಹಿರಿಯರ ಕೂಟ ಹೆಚ್ಚು ಆಯೋಜಿಸಲು ಆಗುವುದಿಲ್ಲ. ಹಾಗಂತ ಆಯೋಜಿಸಿಯೇ ಇಲ್ಲ ಎಂದು ಆರೋಪಿ ಸುತ್ತಿರುವುದು ಸತ್ಯಕ್ಕೆ ದೂರವಾದ ಮಾತು. ಅಖೀಲ ಭಾರತ ಮಟ್ಟದ ಒಂದು ಕೂಟವನ್ನು ಆಯೋಜಿಸಲು 60 ಲಕ್ಷ ರೂ. ಬೇಕು. ಅಷ್ಟೊಂದು ಹಣವನ್ನು ಖರ್ಚು ಮಾಡುವುದು ಭಾರೀ ಕಷ್ಟದ ವಿಚಾರ. ನಮ್ಮಲ್ಲೂ ಕೆಲವೊಂದು ಸಮಸ್ಯೆಗಳಿವೆ ಅನ್ನು ವುದನ್ನು ಯಾರೂ ಮರೆಯಬಾರದು ಎಂದರು.

ತರಬೇತುದಾರರ ಬೇಜವಾಬ್ದಾರಿ?
ಭಾರತೀಯ ಕ್ರೀಡಾ ಪ್ರಾಧಿಕಾರ (ಸಾಯ್‌)ದಲ್ಲಿ ರಾಜ್ಯದ 70ಕ್ಕೂ ಹೆಚ್ಚು ಹಾಕಿಪಟುಗಳು ತರಬೇತಿ ಪಡೆಯುತ್ತಿದ್ದಾರೆ. ಇವರೆಲ್ಲರೂ ಹಾಕಿ ಕರ್ನಾಟಕದಿಂದ ಮಾನ್ಯತೆ ಹೊಂದಿದವರು. ಆದರೆ ಅವರಿಗೆ ಕೋಚ್‌ಗಳಿಂದ ಪರಿಣಾಮ ಕಾರಿಯಾಗಿ ತರಬೇತಿ ಸಿಗುತ್ತಿಲ್ಲ ಎಂದು ಹಾಕಿ ಕೂರ್ಗ್‌ ಅಧ್ಯಕ್ಷ ಪಿ.ಇ. ಕಾಳಯ್ಯ ಅವರು ತಿಳಿಸಿದ್ದಾರೆ. 4 ವರ್ಷದ ಹಿಂದೆ ಬೆಂಗಳೂರಿನ ಸಾಯ್‌ನಿಂದ ನಿಕಿನ್‌ ತಿಮ್ಮಯ್ಯ ಮಾತ್ರ ಭಾರತೀಯ ತಂಡಕ್ಕೆ ಆಯ್ಕೆಯಾಗಿದ್ದರು. ಅವರ ಬಳಿಕ ಸಾಯ್‌ನಿಂದ ಒಬ್ಬ ಆಟಗಾರನೂ ಭಾರತ ತಂಡಕ್ಕೆ ಆಯ್ಕೆಯಾಗಿಲ್ಲ. ಇದು ತೀವ್ರ ಬೇಸರದ ಸಂಗತಿ ಎಂದು ಕಾಳಯ್ಯ ವಿವರಿಸಿದರು.

ಉತ್ತರ ಭಾರತ ಲಾಬಿ
ಕಿರಿಯರ ರಾಷ್ಟ್ರೀಯ ಕೂಟಕ್ಕೆ ರಾಜ್ಯದ ಆಟಗಾರರು ಏಕೆ ಆಯ್ಕೆಯಾಗುತ್ತಿಲ್ಲ. ಇದಕ್ಕೆ ಉತ್ತರ ಭಾರತದಲ್ಲಿ ನಡೆಯುವ ಲಾಭಿ ಕೂಡ ಒಂದು ಕಾರಣವಂತೆ. ಹೌದು. ಸ್ವತಃ ಸಾಯ್‌ ಕೋಚ್‌ ಒಬ್ಬರು ಇದನ್ನು “ಉದಯವಾಣಿ’ಗೆ ಖಚಿತಪಡಿಸಿದ್ದಾರೆ.

ಹೇಗೆ ನಡೆಯುತ್ತೆ ಲಾಬಿ?
ಉತ್ತರ ಭಾರತದಲ್ಲಿ ಮೊದಲು ಕ್ರೀಡೆ ಬಳಿಕ ಶಿಕ್ಷಣ. ಆದರೆ ದಕ್ಷಿಣ ಭಾರತದಲ್ಲಿ ಶಿಕ್ಷಣಕ್ಕೇ ಮೊದಲ ಆಧ್ಯತೆ. ಉದಾಹರಣೆಗೆ ಹಾಕಿ ಹುಡುಗನೊಬ್ಬ ಹಂತಹಂತವಾಗಿ ಬಂದು 10ನೇ ತರಗತಿಗೆ ತಲುಪುತ್ತಾನೆ. ಆಗ ಅವನಿಗೆ  16 ವರ್ಷ ಆಗಿರುತ್ತದೆ ಎಂದಿಟ್ಟುಕೊಳ್ಳೋಣ. ಆದರೆ ಉತ್ತರ ಭಾರತದಲ್ಲಿ ಹಾಕಿ ಪಟುಗಳು ಶಾಲೆಗೆ ಹೋಗುವುದಿಲ್ಲ. 20 ವರ್ಷದವನು ಕೂಡ ನಕಲಿ ಪ್ರಮಾಣ ಪತ್ರದೊಂದಿಗೆ ನೇರವಾಗಿ 10ನೇ ತರಗತಿ ಪರೀಕ್ಷೆ ಬರೆಯುತ್ತಾನೆ. ನಮ್ಮ ಹುಡುಗನಿಗಿಂತ 4 ವರ್ಷ ದೊಡ್ಡವನು ಮುಂದೆ ಜೂನಿಯರ್‌ ಹಾಕಿ ಆಯ್ಕೆಗೆ ಬರುತ್ತಾನೆ. ಅವನಿಗೆ ಅವಕಾಶ ಸಿಗುತ್ತದೆ. ನಮ್ಮವನಿಗೆ ನಿರಾಶೆಯಾಗುತ್ತದೆ. ಇದು ದೊಡ್ಡ ಮಟ್ಟದಲ್ಲಿ ನಡೆಯುವ ಲಾಭಿ. ಕಳೆದ ವಿಶ್ವಕಪ್‌ ವಿಜೇತ ಕಿರಿಯರ ತಂಡದಲ್ಲೂ ಅನೇಕ ಆಟಗಾರರಿಗೆ ಈ ರೀತಿಯಲ್ಲಿ ನಿರಾಶೆಯಾಗಿದೆ ಎಂದು ಕೋಚ್‌ ಅಸಮಾಧಾನ ವ್ಯಕ್ತಪಡಿಸಿದರು.

ಹೇಮಂತ್‌ ಸಂಪಾಜೆ

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.