ಕೋವಿಡ್ 19 ವಿರುದ್ಧ ಒಂದಾಗಿ ಹೋರಾಡೋಣ: ಅಖ್ತರ್
Team Udayavani, Mar 24, 2020, 6:05 AM IST
ಲಾಹೊರ್: ಪಾಕಿಸ್ಥಾನದ ಮಾಜಿ ವೇಗಿ ಶೋಯಿಬ್ ಅಖ್ತರ್ ನಿವೃತ್ತಿ ಬಳಿಕ ತಮ್ಮದೇ ಆದ ಯೂಟ್ಯೂಬ್ ಚಾನೆಲ್ ಮೂಲಕ ಕ್ರಿಕೆಟ್ ಚಟುವಟಿಕೆಗಳ ಬಗ್ಗೆ ಅವಲೋಕನ ಹಾಗೂ ವಿಮರ್ಶೆ ಮಾಡಿಕೊಂಡು ಬರುತ್ತಿದ್ದಾರೆ. ಇದೀಗ ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಮನುಷ್ಯರಾಗಿ ಚಿಂತಿಸುವ ಸಮಯ ಬಂದಿದೆ ಎಂದಿ¨ªಾರೆ.
ಕೊರೊನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜನರು ಭಯಭೀತಗೊಂಡಿ¨ªಾರೆ. ಬಹುತೇಕ ಎಲ್ಲ ಚಟುವಟಿಕೆಗಳು ಸ್ಥಗಿತಗೊಂಡಿವೆ. ಹೀಗಿರುವಾಗ ಜಾತಿ, ಧರ್ಮ, ಆರ್ಥಿಕ ಸ್ಥಿತಿಯನ್ನು ಮರೆತು ಎಲ್ಲರೂ ಒಗ್ಗಟ್ಟಾಗಿ ಒಬ್ಬರಿಗೊಬ್ಬರು ನೆರವು ನೀಡಬೇಕು ಎಂದು ಅಖ್ತರ್ ಕರೆ ನೀಡಿ¨ªಾರೆ.
ಜಾಗತಿಕ ವಿಪತ್ತು
“ಕೊರೊನಾ ಎನ್ನುವುದು ಜಾಗತಿಕ ವಿಪತ್ತು ಆಗಿದೆ. ನಾವು ಧರ್ಮವನ್ನು ಮೀರಿ ನಿಂತು ಚಿಂತನೆ ಮಾಡಬೇಕಿದೆ. ಕೋವಿಡ್ 19 ಹರಡದಂತೆ ತಡೆಯಲು ಎಲ್ಲ ದೇಶಗಳು ಹರಸಾಹಸ ಪಡುತ್ತಿವೆ. ಇಂಥ ಸನ್ನಿವೇಶದಲ್ಲಿ ಯಾವುದೇ ಧರ್ಮ, ಜಾತಿ, ಶತ್ರು ರಾಷ್ಟ್ರಗಳ ಚಿಂತನೆಯನ್ನು ಬಿಟ್ಟು ಮಾನವ ಕುಲದ ಒಳಿತಿ ಗಾಗಿ ನಾವು ಒಂದಾಗಬೇಕು’ ಎಂದು ಅಖ್ತರ್ ಹೇಳಿದರು.
“ಶ್ರೀಮಂತರು ಅಗತ್ಯ ವಸ್ತುಗಳನ್ನು ಒಟ್ಟುಗೂಡಿಸಿರಹುದು, ಆದರೆ ದಿನಗೂಲಿ ಕಾರ್ಮಿಕರ ಸ್ಥಿತಿ ಏನಾಗಲಿದೆ ಎಂಬುದನ್ನು ಯೋಚಿಸಿ ನೋಡಿ… ಇಲ್ಲಿ ಹಿಂದೂ ಅಥವಾ ಮುಸ್ಲಿಂ ಎನ್ನುವುದು ಮುಖ್ಯವಲ್ಲ. ನಾವೆಲ್ಲ ಮನುಷ್ಯರಾಗಿ ಚಿಂತಿಸುವ ಸಮಯ ಬಂದಿದೆ. ಪ್ರಾಣಿಗಳ ಹಾಗೆ ಜೀವಿಸುವ ಬದಲು ಮನುಷ್ಯರಾಗಿ ಜೀವಿಸೋಣ. ಇನ್ನೊಬ್ಬರಿಗೆ ಸಹಾಯ ಮಾಡುವ ಮನಃಸ್ಥಿತಿಯನ್ನು ಎಲ್ಲರೂ ಬೆಳೆಸಿಕೊಳ್ಳೋಣ’ ಎಂದು ಅಖ್ತರ್ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ