ಶೋಭಾ ಆಪಾದನೆ ಮಾಡೋದಕ್ಕೇ ಹುಟ್ಟಿದ್ದಾರೆ:ಆಂಜನೇಯ
Team Udayavani, Feb 26, 2018, 6:35 AM IST
ಚಿತ್ರದುರ್ಗ: ಸಂಸದೆ ಶೋಭಾ ಕರಂದ್ಲಾಜೆ ಆಪಾದನೆ ಮಾಡುವುದಕ್ಕಾಗಿಯೇ ಹುಟ್ಟಿರಬಹುದು ಎನ್ನಿಸುತ್ತದೆ ಎಂದು ಸಮಾಜಕಲ್ಯಾಣ ಇಲಾಖೆ ಸಚಿವ ಎಚ್. ಆಂಜನೇಯ ಟೀಕಿಸಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೋಭಾ ಕರಂದ್ಲಾಜೆ ಇಂಧನ ಸಚಿವೆಯಾಗಿದ್ದಾಗ ಸಾವಿರಾರು ಕೋಟಿ ರೂ. ಅವ್ಯವಹಾರ ಹಾಗೂ ಭೂಮಿ ಖರೀದಿ ಆರೋಪ ಅವರ ಮೇಲಿದೆ. ಜವಾಬ್ದಾರಿ ಸ್ಥಾನದಲ್ಲಿರುವವರು ದಾಖಲೆಗಳಿಲ್ಲದೆ ಆರೋಪ ಮಾಡಬಾರದು. ವಿದ್ಯುತ್ ಕಂಬ ಹಾಕದೆ, ಪರಿವರ್ತಕ ಅಳವಡಿಸದೆ, ವಿದ್ಯುತ್ ಖರೀದಿಸದೆ ಬಿಲ್ ಪಾವತಿ ಮಾಡಿದರೇ ಎಂದು ತಿರುಗೇಟು ನೀಡಿದರು.
ಶೋಭಾ ಕರಂದ್ಲಾಜೆ ವಿರುದ್ಧದ ಅವ್ಯವಹಾರ ಬಯಲಿಗೆಳೆಯುತ್ತೀರಾ, ಅವರೊಂದಿಗೆ ಸಾರ್ವಜನಿಕ ಚರ್ಚೆಗೆ ಬರುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಆಂಜನೇಯ, ಸಾರ್ವಜನಿಕ ಚರ್ಚೆಗೆ ಶೋಭಮ್ಮನವರಿಗೆ ಆಹ್ವಾನ ನೀಡುವಷ್ಟು ದೊಡ್ಡವರು ನಾವಲ್ಲ. ಅಲ್ಲದೆ ಅವರ ಹಗರಣಗಳನ್ನು ಹೊರ ತೆಗೆಯುವಷ್ಟು ಸಮಯವೂ ನಮಗಿಲ್ಲ. ನಾವು ಚುನಾವಣಾ ವರ್ಷದಲ್ಲಿದ್ದೇವೆ. ನಮ್ಮ ಅಭಿವೃದ್ಧಿ ಕೆಲಸಗಳನ್ನು ಜನರ ಮುಂದಿಡಲೇ ನಮಗೆ ಸಮಯ ಸಾಲುತ್ತಿಲ್ಲ ಎಂದರು.
ಕೇಂದ್ರ ಸರ್ಕಾರವೇ ಅವರದು. ಅವರ ಹಿಡಿತದಲ್ಲೇ ಇರುವ ಸಿಬಿಐ, ಸಿಐಡಿ ಸೇರಿ ಯಾವುದೇ ತನಿಖಾ ಸಂಸ್ಥೆಯಿಂದಾದರೂ ಗಂಗಾಕಲ್ಯಾಣ ಯೋಜನೆಯಡಿಯ ಕಾರ್ಯಗಳನ್ನು ತನಿಖೆಗೆ ಒಳಪಡಿಸಲಿ ಎಂದು ಸವಾಲೆಸೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
IPL: ಆಟ ಮೆರೆದಾಟ; ಬ್ಯಾಟಿಂಗ್ ಅಷ್ಟೇ ಕ್ರಿಕೆಟ್ಟಾ?
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ