![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
10 ಮೀ. ಏರ್ ರೈಫಲ್ ಶೂಟಿಂಗ್: ನಂ. 1: ಅಪೂರ್ವಿ ಅಪೂರ್ವ ಸಾಧನೆ
Team Udayavani, May 2, 2019, 10:40 AM IST
![APURVI-CHANDELA](https://www.udayavani.com/wp-content/uploads/2019/05/APURVI-CHANDELA-620x445.png)
ಹೊಸದಿಲ್ಲಿ: ಭಾರತದ ಪ್ರತಿಭಾನ್ವಿತ ಶೂಟರ್, ಜೈಪುರದ ಅಪೂರ್ವಿ ಚಂದೇಲ ಹೊಸ ಎತ್ತರ ವೊಂದನ್ನು ತಲುಪಿದ್ದಾರೆ. ಬುಧವಾರ ಪ್ರಕಟಗೊಂಡ ವಿಶ್ವ ಶೂಟಿಂಗ್ ರ್ಯಾಂಕಿಂಗ್ನ 10 ಮೀ. ಏರ್ ರೈಫಲ್ ವಿಭಾಗದಲ್ಲಿ ಅಗ್ರಸ್ಥಾನಿಯಾಗಿ ಮೂಡಿ ಬಂದಿದ್ದಾರೆ.
ಅಪೂರ್ವಿ ವಿಶ್ವದ ನಂ.1 ಶೂಟರ್ ಎನಿಸಿದ್ದು ಇದೇ ಮೊದಲು. ಇದೇ ವಿಭಾಗದಲ್ಲಿ ಭಾರತದ ಮತ್ತೋರ್ವ ಶೂಟರ್ ಅಂಜುಮ್ ಮೌದ್ಗಿಲ್ ರ್ಯಾಂಕಿಂಗ್ ಯಾದಿಯಲ್ಲಿ 2ನೇ ಸ್ಥಾನಕ್ಕೇರಿದ್ದಾರೆ.
ವಿಶ್ವದಾಖಲೆಯ ಬಂಗಾರ
ಕಳೆದ ಫೆಬ್ರವರಿಯಲ್ಲಿ ನಡೆದ ಐಎಸ್ಎಸ್ಎಫ್ ವರ್ಲ್ಡ್ ಕಪ್ ಶೂಟಿಂಗ್ನಲ್ಲಿ ಅಪೂರ್ವಿ ಚಂದೇಲ 152.9 ಅಂಕಗಳೊಂದಿಗೆ ನೂತನ ವಿಶ್ವದಾಖಲೆ ನಿರ್ಮಿಸಿ ಬಂಗಾರದ ಪದಕ ಜಯಿಸಿ ದ್ದರು. 2018ರ ಏಶ್ಯಾಡ್ನಲ್ಲಿ 10 ಮೀ. ಮಿಕ್ಸೆಡ್ ರೈಫಲ್ ಸ್ಪರ್ಧೆಯಲ್ಲಿ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದರು. ಮುಂದಿನ ವರ್ಷದ ಟೋಕಿಯೊ ಒಲಿಂಪಿಕ್ಸ್ಗೆ ಅರ್ಹತೆ ಪಡೆದ ಭಾರತದ 6 ಮಂದಿ ಶೂಟರ್ಗಳಲ್ಲಿ ಅಪೂರ್ವಿ ಕೂಡ ಒಬ್ಬರು. “ನಾನಿಂದು ಶೂಟಿಂಗ್ ಬಾಳ್ವೆಯಲ್ಲಿ ಹೊಸ ಎತ್ತರ ತಲುಪಿದೆ. ಬಹಳ ಖುಷಿಯಾಗುತ್ತಿದೆ’ ಎಂದು ಅಪೂರ್ವಿ ಚಂದೇಲ ಟ್ವೀಟ್ ಮೂಲಕ ತಮ್ಮ ಹರ್ಷ ವ್ಯಕ್ತಪಡಿಸಿದ್ದಾರೆ.
ಮತ್ತೋರ್ವ ಸಾಧಕಿ ಅಂಜುಮ್ ಮೌದ್ಗಿಲ್ ಇತ್ತೀಚೆಗೆ ಬೀಜಿಂಗ್ನಲ್ಲಿ ನಡೆದ ಐಎಸ್ಎಸ್ಎಫ್ ವಿಶ್ವಕಪ್ನ 10 ಮೀ. ಏರ್ ರೈಫಲ್ ಮಿಕ್ಸೆಡ್ ಟೀಮ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಜಯಿಸಿದ್ದರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.