ಶೂಟರ್‌ ರವಿ ಕುಮಾರ್‌ ಸಹಿತ ನಾಲ್ವರಿಗೆ ನಿಷೇಧ

ಉದ್ದೀಪನ ವಿವಿಧ ಪ್ರಕರಣಗಳಲ್ಲಿ 2ರಿಂದ 4 ವರ್ಷ ಕಠಿನ ಶಿಕ್ಷೆ

Team Udayavani, Dec 13, 2019, 11:09 PM IST

Shooter-Ravi-Kumar,

ಹೊಸದಿಲ್ಲಿ: ವಿಶ್ವಕಪ್‌ ಪದಕ ವಿಜೇತ ಶೂಟರ್‌ ರವಿ ಕುಮಾರ್‌ ಸಹಿತ ಒಟ್ಟು ನಾಲ್ವರು ಉದ್ದೀಪನ ಪ್ರಕರಣದಲ್ಲಿ ನಾಡಾ (ರಾಷ್ಟ್ರೀಯ ನಿಗ್ರಹ ಉದ್ದೀಪನ ತನಿಖಾ ಸಂಸ್ಥೆ)ಯಿಂದ ಕಠಿನ ಶಿಕ್ಷೆಗೆ ಗುರಿಯಾಗಿದ್ದಾರೆ.

ವಿಶ್ವಕಪ್‌ ಕಂಚಿನ ಪದಕ ವಿಜೇತ ರವಿಕುಮಾರ್‌ ಭಾರತದ ಶ್ರೇಷ್ಠ ರೈಫ‌ಲ್‌ ಶೂಟರ್‌ಗಳಲ್ಲಿ ಒಬ್ಬರು. ರಾಷ್ಟ್ರೀಯ ಕೂಟವೊಂದರಲ್ಲಿ ರವಿ ಕುಮಾರ್‌ ಉದ್ದೀಪನ ಸೇವಿಸಿರುವ ಪ್ರಕರಣ ದಾಖಲಾಗಿತ್ತು. ತನಿಖೆಯಿಂದ ಇವರು ಉದ್ದೀಪನ ಸೇವನೆ ಮಾಡಿರುವುದು ಸಾಬೀತಾಗಿತ್ತು.

ಇದೀಗ ರವಿಕುಮಾರ್‌ ತಾನು ಉದ್ದಿಪನ ಮದ್ದು ಸೇವನೆ ಮಾಡಿಲ್ಲ. ತಲೆ ನೋವಿಗೆ ಮದ್ದು ತೆಗೆದು ಕೊಂಡಿದ್ದೆ. ಉದ್ದೇಶಪೂರ್ವಕವಾಗಿ ಮಾಡಿಲ್ಲ ಎಂದು ರಾಷ್ಟ್ರೀಯ ಉದ್ದೀಪನ ತನಿಖಾ ಸಂಸ್ಥೆ ಎದುರು ಮನವಿ ಮಾಡಿಕೊಂಡಿದ್ದರು. ಆದರೆ ನಾಡಾ ರವಿ ಕುಮಾರ್‌ ಮನವಿಯನ್ನು ಪುರಸ್ಕರಿಸಲಿಲ್ಲ. ಮದ್ದು ಸೇವನೆ ಮುಂಚಿತವಾಗಿ ಸಂಬಂಧಪಟ್ಟವರ ಗಮನಕ್ಕೆ ತಂದಿದ್ದೀರಾ? ಎಂದು ಪ್ರಶ್ನೆ ಹಾಕಿತು. ಆದರೆ ಇದಕ್ಕೆ ರವಿ ಕುಮಾರ್‌ ಇಲ್ಲ ಎಂದರು. ಹಾಗಾಗಿ ಶಿಕ್ಷೆ ಅನುಭವಿಸಲೇಬೇಕು ಎಂದು ನಾಡಾ ಆದೇಶ ನೀಡಿದೆ. ರವಿ ಕುಮಾರ್‌ಗೆ ಡಿ. 5ರಿಂದ ನಿಷೇಧ ಶಿಕ್ಷೆ ಅನ್ವಯಗೊಂಡಿದೆ. ಅವರ ನಿಷೇಧ ಶಿಕ್ಷೆ ಡಿ.4, 2021ಕ್ಕೆ ಅಂತ್ಯವಾಗಲಿದೆ ಎಂದು ನಾಡಾ ತಿಳಿಸಿದೆ.

ಈ ಅವಧಿಯಲ್ಲಿ ಭಾರತೀಯ ವಾಯುಸೇನೆಯ ಉದ್ಯೋಗಿಯಾಗಿರುವ ರವಿ ಕುಮಾರ್‌ ಯಾವುದೇ ಅಂತಾರಾಷ್ಟ್ರೀಯ, ರಾಷ್ಟ್ರೀಯ ಕೂಟಗಳಲ್ಲಿ ಭಾಗವಹಿಸುವಂತಿಲ್ಲ ಎಂದು ಎನ್‌ಆರ್‌ಎಐ (ರಾಷ್ಟ್ರೀಯ ರೈಫ‌ಲ್‌ ಸಂಸ್ಥೆ) ತಿಳಿಸಿದೆ.

ಸೀಮಾ, ಪೂರ್ಣಿಮಾಗೆ ನಿಷೇಧ
2017ರ ಕಾಮನ್‌ವೆಲ್ತ್‌ ಬೆಳ್ಳಿ ಪದಕ ವಿಜೇತೆ ಮಹಿಳಾ ವೇಟ್‌ಲಿಫ್ಟರ್‌ ಸೀಮಾ ಉದ್ದೀಪನ ಪರೀಕ್ಷೆಯಲ್ಲಿ ಸಿಕ್ಕಿಬಿದ್ದು ನಾಲ್ಕು ವರ್ಷ ನಿಷೇಧ ಶಿಕ್ಷೆಗೆ ಗುರಿಯಾಗಿದ್ದಾರೆ. ಸೀಮಾ ಗೋಲ್ಡ್‌ ಕೋಸ್ಟ್‌ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ 75 ಕೆ.ಜಿ. ವಿಭಾಗದಲ್ಲಿ 6ನೇ ಸ್ಥಾನ ಪಡೆದಿದ್ದರು. ಪನ್ನಾಂಗ್‌ ಕಿರಿಯರ ಕಾಮನ್‌ವೆಲ್ತ್‌ ಕೂಟದಲ್ಲಿ ಚಿನ್ನದ ಪದಕ ಗೆದ್ದಿದ್ದ ಪೂರ್ಣಿಮಾ ಪಾಂಡೆಯ ಶಿಕ್ಷೆಯನ್ನು 4 ವರ್ಷದಿಂದ 2 ವರ್ಷಕ್ಕೆ ತಗ್ಗಿಸಲಾಗಿದೆ. ಉಳಿದಂತೆ ವೇಟ್‌ಲಿಫ್ಟರ್‌ ಮುಕುಲ್‌ ಶರ್ಮಗೆ ನಾಲ್ಕು ವರ್ಷ ಹಾಗೂ ಬಾಕ್ಸರ್‌ ದೀಪಕ್‌ ಶರ್ಮಗೆ (91 ಕೆ.ಜಿ.) 2 ವರ್ಷ ನಿಷೇಧ ಶಿಕ್ಷೆ ವಿಧಿಸಲಾಗಿದೆ.

ಬಾಕ್ಸರ್‌ ಸುಮಿತ್‌ ಸಂಗವಾನ್‌ ಅಮಾನತು
ಒಲಿಂಪಿಯನ್‌ ಬಾಕ್ಸರ್‌ ಮಾಜಿ ಏಶ್ಯನ್‌ ಬೆಳ್ಳಿ ಪದಕ ವಿಜೇತ ಸುಮಿತ್‌ ಸಂಗವಾನ್‌ ಉದ್ದೀಪನ ಪರೀಕ್ಷೆಯಲ್ಲಿ ಅನುತ್ತೀರ್ಣ ಗೊಂಡಿದ್ದಾರೆ. ಬಿ ಸ್ಯಾಂಪಲ್‌ ಪರೀಕ್ಷೆ ನಡೆಯುತ್ತಿದ್ದು ಸದ್ಯ ಸುಮಿತ್‌ ಅಮಾನತುಗೊಂಡಿದ್ದಾರೆ. ಕರ್ನಾಟಕದ ಬಳ್ಳಾರಿಯಲ್ಲಿ ಒಲಿಂಪಿಕ್ಸ್‌ಗೆ ಅರ್ಹತಾ ಪಂದ್ಯ ನಡೆಯಲಿದ್ದು ಅವಕಾಶ ಕಳೆದು ಕೊಳ್ಳುವ ಭೀತಿ ಸುಮಿತ್‌ಗೆ ಎದುರಾಗಿದೆ. ಡಿ. 25ರಂದು ನಾಡಾ ಪರೀಕ್ಷಾ ಫ‌ಲಿತಾಂಶ ಪ್ರಕಟಗೊಂಡು ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ.

ಟಾಪ್ ನ್ಯೂಸ್

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.