ಅಫ್ಘಾನಿಸ್ಥಾನ ಟೆಸ್ಟ್‌: ಇಂದು ಭಾರತ ತಂಡದ ಆಯ್ಕೆ


Team Udayavani, May 8, 2018, 6:00 AM IST

7.jpg

ಬೆಂಗಳೂರು: ಜೂನ್‌ 14ರಿಂದ ಬೆಂಗಳೂರಿನಲ್ಲಿ ಅಫ್ಘಾನಿಸ್ಥಾನ ವಿರುದ್ಧ ನಡೆಯುವ ಏಕೈಕ ಟೆಸ್ಟ್‌ ಪಂದ್ಯಕ್ಕೆ ಭಾರತ ಕ್ರಿಕೆಟ್‌ ತಂಡದ ಆಯ್ಕೆ ಮಂಗಳ ವಾರ ನಡೆಯಲಿದೆ. ಇದು ಅಫ್ಘಾನಿಸ್ಥಾನದ ಪಾದಾ ರ್ಪಣೆ ಪಂದ್ಯವಾಗಿರುವುದರಿಂದ ಐತಿಹಾಸಿಕ ಮಹತ್ವ ಪಡೆದಿದೆ. ಆದರೆ ಟೀಮ್‌ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಇಂಗ್ಲೆಂಡ್‌ ಕೌಂಟಿ ಕ್ರಿಕೆಟ್‌ನಲ್ಲಿ ಆಡುತ್ತಿರುವುದರಿಂದ ಅವರ ಜಾಗದಲ್ಲಿ ಅಜಿಂಕ್ಯ ರಹಾನೆ ತಂಡವನ್ನು ಮುನ್ನಡೆಸುವುದು ಬಹುತೇಕ ಖಚಿತ. ಕೊಹ್ಲಿ ಸ್ಥಾನಕ್ಕೆ ಶ್ರೇಯಸ್‌ ಅಯ್ಯರ್‌ ಆಯ್ಕೆಯಾಗುವ ಸಾಧ್ಯತೆಯಿದೆ.

ಕೊಹ್ಲಿ ಸರ್ರೆ ಕೌಂಟಿಯಲ್ಲಿ
ಅನಂತರ ಭಾರತ ತಂಡ ಇಂಗ್ಲೆಂಡ್‌ ಪ್ರವಾಸಕ್ಕೆ ತೆರಳುವುದರಿಂದ ಕೊಹ್ಲಿ ಅಲ್ಲಿ ಕೌಂಟಿ ಆಡಿ ಅನುಭವ ಗಳಿಸಲು ತೀರ್ಮಾನಿಸಿದ್ದಾರೆ. ಆದ್ದರಿಂದ ಜೂನ್‌ ತಿಂಗಳಿಡೀ ಅವರು ಇಂಗ್ಲೆಂಡ್‌ನ‌ಲ್ಲಿ ಸರ್ರೆ ಪರ ಆಡುತ್ತಾರೆ. ಅವರು ಡಬ್ಲಿನ್‌ನಲ್ಲಿ ಅಯರ್‌ಲ್ಯಾಂಡ್‌ ವಿರುದ್ಧ ಜೂನ್‌ ಅಂತ್ಯಕ್ಕೆ ನಡೆಯುವ ಎರಡು ಟಿ20 ಪಂದ್ಯಕ್ಕೂ ಲಭಿಸುವ ಸಾಧ್ಯತೆ ಇಲ್ಲ. ಆಗ ಟಿ20 ತಂಡದ ನಾಯಕತ್ವ ರೋಹಿತ್‌ ಶರ್ಮ ಪಾಲಾಗುವ ಸಂಭವವಿದೆ.

ಕೊಹ್ಲಿ ಜಾಗಕ್ಕೆ ಸದ್ಯ ಡೆಲ್ಲಿ ಡೆವಿಲ್ಸ್‌ ಐಪಿಎಲ್‌ ತಂಡವನ್ನು ಮುನ್ನಡೆಸುತ್ತಿರುವ ಶ್ರೇಯಸ್‌ ಅಯ್ಯರ್‌ ಆಯ್ಕೆಯಾದರೂ ಅವರು ಆಡುವ ಬಳಗದಲ್ಲಿ ಸ್ಥಾನ ಪಡೆಯುತ್ತಾರೆ ಎನ್ನುವ ಖಾತ್ರಿಯಿಲ್ಲ. ಕಾರಣ ತಂಡದ ಆರಂಭಿಕರಾಗಿ ಕೆ.ಎಲ್‌. ರಾಹುಲ್‌, ಶಿಖರ್‌ ಧವನ್‌, ಮಧ್ಯಮ ಕ್ರಮಾಂಕದಲ್ಲಿ ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ರೋಹಿತ್‌ ಶರ್ಮ, ವಿಕೆಟ್‌ ಕೀಪರ್‌ ಆಗಿ ವೃದ್ಧಿಮಾನ್‌ ಸಾಹಾ ಆಡುತ್ತಾರೆ. ಇವರ ನಡುವೆ ಶ್ರೇಯಸ್‌ಗೆ ಜಾಗ ಎಲ್ಲಿದೆ ಎನ್ನುವುದು ಪ್ರಶ್ನೆ.

ಪೂಜಾರ, ಇಶಾಂತ್‌ ಆಡುತ್ತಾರೆ
ಇದೇ ವೇಳೆ ಕೌಂಟಿ ಆಡುತ್ತಿರುವ ಇಶಾಂತ್‌ ಶರ್ಮ, ಚೇತೇಶ್ವರ ಪೂಜಾರ ಅಫ್ಘಾನಿಸ್ಥಾನ ವಿರುದ್ಧದ ಟೆಸ್ಟ್‌ ಆಡುವುದಿಲ್ಲ ಎಂದು ಹೇಳಲಾಗಿತ್ತು. ಮಾಧ್ಯಮಗಳಲ್ಲಿ ಹಬ್ಬಿರುವ ಈ ಸುದ್ದಿ ಸುಳ್ಳು, ಅವರು ಭಾರತಕ್ಕೆ ಬಂದು ಟೆಸ್ಟ್‌ನಲ್ಲಿ ಆಡಲ್ದಿದಾರೆಂದು ಆಯ್ಕೆ ಸಮಿತಿ ಮುಖ್ಯಸ್ಥ ಎಂ.ಎಸ್‌.ಕೆ. ಪ್ರಸಾದ್‌ ಖಚಿತಪಡಿಸಿದ್ದಾರೆ.

“ಎ’ ತಂಡವೂ ಪ್ರಕಟ 
ಇದೇ ವೇಳೆ ಇಂಗ್ಲೆಂಡ್‌ ಪ್ರವಾಸಕ್ಕೆ ತೆರಳಲಿರುವ ಭಾರತ “ಎ’ ತಂಡವೂ ಪ್ರಕಟಗೊಳ್ಳಲಿದೆ. ಪೃಥ್ವಿ ಶಾ, ಶುಭಮನ್‌ ಗಿಲ್‌, ಶಿವಂ ಮೊದಲಾದ ಯುವ ಕ್ರಿಕೆಟಿಗರು ಈ ತಂಡಕ್ಕೆ ಆಯ್ಕೆಯಾಗುವುದು ಖಚಿತವಾಗಿದೆ.  ಭಾರತ ತಂಡ ಅಲ್ಲಿ ವೆಸ್ಟ್‌ ಇಂಡೀಸ್‌ “ಎ’ ತಂಡವ ನ್ನೊಳಗೊಂಡ ಏಕದಿನ ತ್ರಿಕೋನ ಸರಣಿಯಲ್ಲಿ ಪಾಲ್ಗೊಳ್ಳಲಿದೆ. ಈ ಸರಣಿ ಜೂನ್‌ 22ರಿಂದ ಆರಂಭವಾಗಲಿದೆ.

ಅಶ್ವಿ‌ನ್‌ ಟೆಸ್ಟ್‌ ಭವಿಷ್ಯಕ್ಕೆ ಧಕ್ಕೆ?
ಸದ್ಯ ಭಾರತೀಯ ತಂಡದ ಕೆಲ ಕ್ರಿಕೆಟಿಗರ ಭವಿಷ್ಯದ ಬಗ್ಗೆ ಊಹಾಪೋಹಗಳು ಹಬ್ಬಿವೆ. ಆ ಪ್ರಕಾರ ಆರ್‌.ಅಶ್ವಿ‌ನ್‌ ಮತ್ತು ರವೀಂದ್ರ ಜಡೇಜ ಅವರ ಟೆಸ್ಟ್‌ ಭವಿಷ್ಯ ಸಂಕಷ್ಟದಲ್ಲಿದೆ. 2 ವರ್ಷದ ಹಿಂದೆ ಸೀಮಿತ ಓವರ್‌ಗಳ ತಂಡದಿಂದ ಹೊರಬಿದ್ದಿದ್ದ ಅವರು ಈಗ ಟೆಸ್ಟ್‌ನಿಂದಲೂ ಹೊರಬೀಳುವ ಆತಂಕದಲ್ಲಿದ್ದಾರೆ. ಅಫ್ಘಾನಿಸ್ಥಾನದ ವಿರುದ್ಧ ಟೆಸ್ಟ್‌ಗೆ ಅಶ್ವಿ‌ನ್‌ ಅವರನ್ನು ಆಡಿಸದಿರುವ ಸಾಧ್ಯತೆಯಿದೆ. ಅನಂತರ ಇಂಗ್ಲೆಂಡ್‌ನ‌ಲ್ಲಿ ನಡೆಯುವ ಪ್ರವಾಸಕ್ಕೆ ಆಯ್ಕೆಯಾದರೂ ಅಲ್ಲಿ ವಿಫ‌ಲವಾದರೆ ಶಾಶ್ವತವಾಗಿ ಅವರು ತಂಡದಿಂದ ಹೊರಬೀಳುವ ಪರಿಸ್ಥಿತಿಯಿದೆ. ಅವರ ಬದಲು ಕುಲದೀಪ್‌ ಯಾದವ್‌, ಯಜುವೇಂದ್ರ ಚಾಹಲ್‌ ಜಾಗ ಪಡೆಯಲಿದ್ದಾರೆಂದು ಊಹಿಸಲಾಗಿದೆ.

ಟಾಪ್ ನ್ಯೂಸ್

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.