![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಏಶ್ಯನ್ ಗೇಮ್ಸ್ ಸವಾಲಿಗೆ ಕಠಿನ ಪ್ರಯತ್ನ: ಜೋತ್ಸ್ನಾ ಚಿನ್ನಪ್ಪ
Team Udayavani, Apr 18, 2018, 6:15 AM IST
![PTI4_17_2018_000042B.jpg](https://www.udayavani.com/wp-content/uploads/2018/04/18/PTI4_17_2018_000042B.jpg)
ಚೆನ್ನೈ: ಕಾಮನ್ವೆಲ್ತ್ ಗೇಮ್ಸ್ನಲ್ಲಿ ಬೆಳ್ಳಿಯ ಪದಕ ಗೆದ್ದಿರುವ ಭಾರತದ ಯಶಸ್ವಿ ಸ್ಕ್ವಾಷ್ ಆಟಗಾರ್ತಿಯರಾದ ಜೋತ್ಸ್ನಾ ಚಿನ್ನಪ್ಪ ಮತ್ತು ದೀಪಿಕಾ ಪಳ್ಳಿಕಲ್ ಅವರು ಚೆನ್ನೈಗೆ ಆಗಮಿಸಿದಾಗ ಹಾರ್ದಿಕವಾಗಿ ಸ್ವಾಗತಿಸಲಾಯಿತು.
ವನಿತೆಯರ ಡಬಲ್ಸ್ ಸ್ಪರ್ಧೆಯಲ್ಲಿ ಜೋತ್ಸ್ನಾ ಮತ್ತು ದೀಪಿಕಾ ಬೆಳ್ಳಿಯ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದರು. ದೀಪಿಕಾ ಈ ಮೊದಲು ಮಿಕ್ಸೆಡ್ ಡಬಲ್ಸ್ನಲ್ಲಿ ಸೌರವ್ ಘೋಷಲ್ ಜತೆಗೂಡಿ ಬೆಳ್ಳಿಯ ಪದಕ ಜಯಿಸಿದ್ದರು.
ನಾಲ್ಕು ವರ್ಷಗಳ ಹಿಂದಿನ ಸಾಧನೆಯ ಆಲೋಚನೆ ಪಂದ್ಯದ ವೇಳೆ ಮನಸ್ಸಿಗೆ ಬಂದಿಲ್ಲ. ಕಳೆದ ನಾಲ್ಕು ವರ್ಷಗಳಲ್ಲಿ ಸ್ಕ್ವಾಷ್ ಆಟದಲ್ಲಿ ಗಮನಾರ್ಹ ಬದಲಾವಣೆಯಾಗಿವೆ. ಗ್ಲಾಸೊYàದಲ್ಲಿ ನಾವು ಚಿನ್ನ ಜಯಿಸಿದ್ದೆವು. ಅದನ್ನು ಈ ಬಾರಿ ಉಳಿಸಿಕೊಳ್ಳಲು ನಾವು ಪ್ರಯತ್ನಿಸಿದ್ದೆವು. ಆದರೆ ಯಶಸ್ಸು ಸಾಧಿಸಲು ಆಗಲಿಲ್ಲ ಎಂದು ಜೋತ್ಸ್ನಾ ತಿಳಿಸಿದರು.
ಆಗಸ್ಟ್ನಲ್ಲಿ ನಡೆಯುವ ಏಶ್ಯನ್ ಗೇಮ್ಸ್ನಲ್ಲಿ ಪದಕ ಗೆಲ್ಲಲು ಕಠಿನ ಪ್ರಯತ್ನ ನಡೆಸಲಿದ್ದೇವೆ. ಕಾಮನ್ವೆಲ್ತ್ ಗೇಮ್ಸ್ನ ಪದಕ ಗೆಲುವು ಇದಕ್ಕೆ ಸ್ಫೂರ್ತಿ ನೀಡಲಿದೆ ಎಂದವರು ಹೇಳಿದರು. ಬರಿಗೈಯಲ್ಲಿ ಬಾರದಿರುವುದು ನಮಗೆ ಸಮಾಧಾನವನ್ನುಂಟು ಮಾಡಿದೆ ಎಂದು ದೀಪಿಕಾ ಹೇಳಿದರು.
ಪದಕ ವಿಜೇತ ತಮಿಳುನಾಡಿನ ಆಟಗಾರರಿಗೆ ಮುಖ್ಯಮಂತ್ರಿ ಕೆ. ಪಲನಿಸ್ವಾಮಿ ನಗದು ಬಹುಮಾನ ಪ್ರಕಟಿಸಿದ್ದಾರೆ. ಜೋತ್ಸ್ನಾ ಚಿನ್ನಪ್ಪ (30 ಲಕ್ಷ ರೂ.), ದೀಪಿಕಾ ಪಳ್ಳಿಕಲ್ (60 ಲಕ್ಷ ರೂ.) ಮತ್ತು ಸೌರವ್ ಘೋಷಲ್ ಅವರಿಗೆ 30 ಲಕ್ಷ ರೂ. ನೀಡಲಾಗುತ್ತದೆ. ಟೇಬಲ್ ಟೆನಿಸ್ ಆಟಗಾರರಾದ ಶರತ್ ಕಮಲ್, ಜಿ. ಸತಿಯನ್ ಅವರಿಗೆ ನಗದು ಬಹುಮಾನ ನೀಡಲಾಗುತ್ತದೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.