ಕೊಹ್ಲಿ ಔಟಾದರೂ ಮೂರು ರನ್ .. : ಅಂಪೈರ್ ನಿರ್ಧಾರಕ್ಕೆ ಸೈಮನ್ ಟಫೆಲ್ ಹೇಳುವುದೇನು?


Team Udayavani, Oct 25, 2022, 11:26 AM IST

ಕೊಹ್ಲಿ ಔಟಾದರೂ ಮೂರು ರನ್ .. : ಅಂಪೈರ್ ನಿರ್ಧಾರಕ್ಕೆ ಸೈಮನ್ ಟಫೆಲ್ ಹೇಳುವುದೇನು?

ಮೆಲ್ಬರ್ನ್: ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡವು ಐಸಿಸಿ ಟಿ20 ವಿಶ್ವಕಪ್ ನ ಸೂಪರ್ 12 ಹಂತದ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧರೋಚಕ ಜಯ ಸಾಧಿಸಿದೆ. ಅಂತಿಮ ಎಸೆತದವರೆಗೆ ರೋಚಕವಾಗಿ ಸಾಗಿದ ಪಂದ್ಯದಲ್ಲಿ ಭಾರತ ತಂಡ ನಾಲ್ಕು ವಿಕೆಟ್ ಅಂತರದ ಗೆಲುವು ಕಂಡಿದೆ.

ಮಾಜಿ ನಾಯಕ ವಿರಾಟ್ ಕೊಹ್ಲಿ ಅವರ ಅಮೋಘ 82 ರನ್ ಆಟದಿಂದ ಭಾರತಕ್ಕೆ ನೆರವು ನೀಡಿತು. ಅಂತಿಮ ಓವರ್ ನಲ್ಲಿ ಹಲವು ನಾಟಕೀಯ ಬೆಳವಣಿಗೆಗಳು ನಡೆದರೂ ಭಾರತ ಅಂತಿಮ ಎಸೆತದಲ್ಲಿ ಗೆಲುವಿನ ಗುರಿ ತಲುಪಿತು.

ಅಂತಿಮ ಓವರ್ ನ ಮೊದಲ ಎಸೆತದಲ್ಲಿ ಹಾರ್ದಿಕ್ ಔಟಾದರೆ, ಎರಡನೇ ಎಸೆತದಲ್ಲಿ ಕಾರ್ತಿಕ್ ಒಂಟಿ ರನ್ ಕಸಿದರು. ಮೂರನೇ ಎಸೆತದಲ್ಲಿ ವಿರಾಟ್ ಎರಡು ರನ್ ತೆಗೆದರು. ನಾಲ್ಕನೇ ಎಸೆತ ನೋ ಬಾಲ್, ಇದಕ್ಕೆ ವಿರಾಟ್ ಸಿಕ್ಸರ್ ಬಾರಿಸಿದರು. ನಂತರ ಫ್ರೀ ಹಿಟ್ ಎಸೆತಕ್ಕೆ ವಿರಾಟ್ ಬೌಲ್ಡ್ ಆದರೂ, ಚೆಂಡು ಥರ್ಡ್ ಮ್ಯಾನ್ ಕಡೆ ಸಾಗಿತು. ಈ ನಡುವೆ ವಿರಾಟ್ ಮತ್ತು ಕಾರ್ತಿಕ್ ಮೂರು ರನ್ ಓಡಿದರು.

ಆದರೆ ವಿರಾಟ್ ಬೌಲ್ಡ್ ಆದರೂ ರನ್ ನೀಡಿದ್ದಕ್ಕೆ ಪಾಕ್ ಆಟಗಾರರು ಅಂಪೈರ್ ಗೆ ಪ್ರಶ್ನಿಸಿದರು. ಅದು ಡೆಡ್ ಬಾಲ್ ಎಂದು ಪರಿಗಣಿಸಬೇಕು ಎಂದು ಮನವಿ ಮಾಡಿದರು. ಆದರೆ ಅಂಪೈರ್ ರನ್ ನೀಡಿದರು. ಪಂದ್ಯದ ಬಳಿಕವೂ ಇದರ ಬಗ್ಗೆ ಹಲವು ಚರ್ಚೆಗಳು ನಡೆದಿದೆ.

ಇದನ್ನೂ ಓದಿ:ಬಾಂಗ್ಲಾದೇಶದಲ್ಲಿ ಸಿತ್ರಂಗ್ ಚಂಡಮಾರುತದ ಹಾವಳಿ: 9 ಮಂದಿ ಬಲಿ; ಭಾರತದ ಹಲವೆಡೆ ಭಾರೀ ಮಳೆ

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮಾಜಿ ಅಂಪೈರ್ ಸೈಮನ್ ಟಫೆಲ್, ಪಂದ್ಯದಲ್ಲಿ ಅಂಪೈರ್ ಗಳು ಸರಿಯಾದ ನಿರ್ಧಾರವನ್ನು ಮಾಡಿದ್ದಾರೆ ಎಂದು ಸಮರ್ಥನೆ ಮಾಡಿದ್ದಾರೆ.

“ಸ್ಟಂಪ್‌ ಗೆ ಬಡಿದ ಚೆಂಡು ಥರ್ಡ್ ಮ್ಯಾನ್ ಕಡೆದ ಹೋದಾಗ ಬ್ಯಾಟರ್‌ ಗಳು ಮೂರು ರನ್ ಗಳಿಸಿದರು. ಇದಕ್ಕೆ ಅಂಪೈರ್ ಬೈ ಸಿಗ್ನಲ್ ಮಾಡಿ ಸರಿಯಾದ ನಿರ್ಧಾರವನ್ನು ಮಾಡಿದರು. ಫ್ರೀ ಹಿಟ್‌ ನಲ್ಲಿ ಸ್ಟ್ರೈಕರ್‌ ನನ್ನು ಬೌಲ್ಡ್ ಆದರೂ ಔಟ್ ನೀಡುವಂತಿಲ್ಲ. ಆದ್ದರಿಂದ ಅದು ಡೆಡ್ ಬಾಲ್ ಆಗವುದಿಲ್ಲ. ಐಸಿಸಿ ಕಾನೂನುಗಳ ಅಡಿಯಲ್ಲಿ ಎಲ್ಲಾ ಷರತ್ತುಗಳನ್ನು ಪೂರೈಸಲಾಗಿದೆ.” ಎಂದು ಅನುಭವಿ ಟಫೆಲ್ ಅವರು ಬರೆದುಕೊಂಡಿದ್ದಾರೆ.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.