ಸಿಮೋನಾ ಹಾಲೆಪ್‌ ಈಗ ನಂ.1 ಆಟಗಾರ್ತಿ


Team Udayavani, Oct 8, 2017, 6:25 AM IST

AP10_7_2017_000071B.jpg

ಬೀಜಿಂಗ್‌: ರೊಮೇನಿಯಾದ ಸಿಮೋನಾ ಹಾಲೆಪ್‌ ಮೊದಲ ಬಾರಿಗೆ ವಿಶ್ವದ ನಂ.1 ಟೆನಿಸ್‌ ಆಟಗಾರ್ತಿಯಾಗಿ ಮೂಡಿಬಂದಿದ್ದಾರೆ. 

ಚೀನ ಓಪನ್‌ ವನಿತಾ ಸಿಂಗಲ್ಸ್‌ ಫೈನಲ್‌ ಪ್ರವೇಶಿಸಿದ ಸಾಧನೆಯಿಂದಾಗಿ ಹಾಲೆಪ್‌ ಈ ಎತ್ತರ ತಲುಪಿದರು. ಸೆ#àನಿನಾ ಗಾರ್ಬಿನ್‌ ಮುಗುರುಜಾ ಅಗ್ರಸ್ಥಾನದಿಂದ ಕೆಳಗಿಳಿದರು. ನೂತನ ಅಧಿಕೃತ ರ್‍ಯಾಂಕಿಂಗ್‌ ಯಾದಿ ಸೋಮವಾರ ಪ್ರಕಟಗೊಳ್ಳಲಿದೆ.

ಚೀನ ಓಪನ್‌ ಸೆಮಿಫೈನಲ್‌ನಲ್ಲಿ ಸಿಮೋನಾ ಹಾಲೆಪ್‌ 6-2, 6-4 ಅಂತರದಿಂದ ಲಾತ್ವಿಯಾದ ಜೆಲೆನಾ ಒಸ್ಟಾಪೆಂಕೊ ಅವರಿಗೆ ಸೋಲುಣಿಸಿದರು. ಇದರಿಂದ ಫ್ರೆಂಚ್‌ ಓಪನ್‌ ಫೈನಲ್‌ನಲ್ಲಿ ಅನುಭವಿಸಿದ ಸೋಲಿಗೆ ಹಾಲೆಪ್‌ ಸೇಡು ತೀರಿಸಿಕೊಂಡಂತಾಯಿತು. 

26ರ ಹರೆಯದ ಹಾಲೆಪ್‌ ನಂ.2 ಸ್ಥಾನದೊಂದಿಗೆ ಚೀನ ಓಪನ್‌ ಆಡಲಿಳಿದಿದ್ದರು. ರವಿವಾರದ ಫೈನಲ್‌ನಲ್ಲಿ ಅವರು ಫ್ರಾನ್ಸ್‌ನ ಕ್ಯಾರೋಲಿನ್‌ ಗಾರ್ಸಿಯಾ ಸವಾಲನ್ನು ಎದುರಿಸಲಿದ್ದಾರೆ. ಇನ್ನೊಂದು ಸೆಮಿಫೈನಲ್‌ನಲ್ಲಿ ಗಾರ್ಸಿಯಾ ಜೆಕ್‌ ಗಣರಾಜ್ಯದ ಪೆಟ್ರಾ ಕ್ವಿಟೋವಾ ಅವರನ್ನು 6-3, 7-5 ಅಂತರದಿಂದ ಮಣಿಸಿದರು. ಹಾಲೆಪ್‌ ಈವರೆಗೆ ಯಾವುದೇ ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿ ಗೆಲ್ಲದೆ ವಿಶ್ವದ ಅಗ್ರಸ್ಥಾನಿಯಾಗಿ ಮೂಡಿಬರುತ್ತಿರುವುದೊಂದು ವಿಶೇಷ.

ಪ್ರಶಸ್ತಿ ಸುತ್ತಿಗೆ ನಡಾಲ್‌: ಪುರುಷರ ಸಿಂಗಲ್ಸ್‌ನಲ್ಲಿ ಸ್ಪೇನಿನ ರಫೆಲ್‌ ನಡಾಲ್‌ ಪ್ರಶಸ್ತಿ ಸುತ್ತಿಗೆ ನೆಗೆದಿದ್ದಾರೆ. ಸೆಮಿಫೈನಲ್‌ನಲ್ಲಿ ಅವರು ಬಲ್ಗೇರಿಯಾದ ಗ್ರಿಗರ್‌ ಡಿಮಿಟ್ರೋವ್‌ ವಿರುದ್ಧ 6-3, 4-6, 6-1 ಅಂತರದಿಂದ ಗೆದ್ದು ಬಂದರು. ಜರ್ಮನಿಯ ಅಲೆಕ್ಸಾಂಡರ್‌ ಜ್ವೆರೇವ್‌ ಅಥವಾ ಆಸ್ಟ್ರೇಲಿಯದ ನಿಕ್‌ ಕಿರ್ಗಿಯೋಸ್‌ ವಿರುದ್ಧ ನಡಾಲ್‌ ಫೈನಲ್‌ ಸ್ಪರ್ಧೆ ನಡೆಯಲಿದೆ.

ಟಾಪ್ ನ್ಯೂಸ್

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.