ಪುತ್ತೂರಿನ ತರಬೇತುದಾರನನ್ನು ಸತ್ಕರಿಸಿದ ಸಿಂಧು ಕುಟುಂಬ


Team Udayavani, Oct 17, 2019, 12:58 PM IST

f

ಪುತ್ತೂರು: ಆ ಕುಟುಂಬವೀಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದಿದೆ. ಲಕ್ಷಾಂತರ ಅಭಿಮಾನಿಗಳ ದಂಡೇ ಇದೆ. ಆದರೂ 35 ವರ್ಷಗಳ ಹಿಂದೆ ತರಬೇತಿ ನೀಡಿದ ಪುತ್ತೂರಿಗನನ್ನು ಮರೆಯದೆ ಸತ್ಕರಿಸಿ ಕ್ರೀಡಾಪ್ರೀತಿ ಮೆರೆದಿದೆ!

ಇಂತಹ ಅಪರೂಪದ ಆತಿಥ್ಯಕ್ಕೆ ಸಾಕ್ಷಿಯಾದದ್ದು ಕೇರಳದ ತಿರುವನಂತ‌ಪುರ. ಇಲ್ಲಿ ಒಲಿಪಿಂಕ್ಸ್‌ ಪದಕ ವಿಜೇತ ಬ್ಯಾಡ್ಮಿಂಟನ್‌ ತಾರೆ ಪಿ.ವಿ. ಸಿಂಧು, ಅವರ ತಾಯಿ ವಿಜಯಾ ರಮಣ ಹಾಗೂ ದ.ಕ. ಜಿಲ್ಲೆಯ ಪುತ್ತೂರಿನ ಸಂಪ್ಯ ನಿವಾಸಿ, ಎನ್‌ಐಎಸ್‌ ಮಾಜಿ ತರಬೇತುದಾರ ಪಿ.ವಿ. ನಾರಾಯಣ್‌ 35 ವರ್ಷಗಳ ಬಳಿಕ ಪರಸ್ಪರ ಭೇಟಿಯಾದರು. ವಿಜಯಾ ವಾಲಿಬಾಲ್‌ ಪಟುವಾಗಿದ್ದು, 35 ವರ್ಷಗಳ ಹಿಂದೆ ನಾರಾಯಣ್‌ ಅವರು ವಾಲಿಬಾಲ್‌ ತರಬೇತಿ ನೀಡಿರುವುದೇ ಈ ಬೆಸುಗೆಗೆ ಕಾರಣ!

ಕೇರಳದಲ್ಲಿ ನಡೆದ ಭೇಟಿ
ಕೇರಳ ರಾಜ್ಯ ಒಲಿಂಪಿಕ್‌ ಅಸೋಸಿಯೇಶನ್‌ ಸಂಸ್ಥೆ ಬ್ಯಾಡ್ಮಿಂಟನ್‌ ಸಾಧನೆಗಾಗಿ ಸಿಂಧು ಅವರನ್ನು ಇತ್ತೀಚೆಗೆ ತಿರುವನಂತ‌ಪುರದಲ್ಲಿ ಗೌರವಿಸಿತ್ತು. ಇದನ್ನು ನಾರಾಯಣ್‌ ಅವರಿಗೆ ತಾಯಿ ವಿಜಯಾ ರಮಣ ತಿಳಿಸಿದ್ದರು.

ತರಬೇತಿ ನೀಡಿ ಊರಿಗೆ ಮರಳಿದ 35 ವರ್ಷದ ಬಳಿಕ ಪಿ.ವಿ. ನಾರಾಯಣ್‌ ಹಾಗೂ ಪಿ.ವಿ.ಸಿಂಧು ಕುಟುಂಬ ಭೇಟಿಯಾಗಿದೆ. “ಕೇರಳಕ್ಕೆ ಬರುವ ವಿಚಾರವನ್ನು ವಿಜಯಾ ರಮಣ ತಿಳಿಸಿದ್ದರು. ಅಲ್ಲಿ 35 ವರ್ಷಗಳ ಹಿಂದಿನ ದಿನಗಳ ನೆನಪುಗಳನ್ನು ಹಂಚಿಕೊಂಡೆವು. ಒಂದು ದಿನ ಉಳಿದುಕೊಂಡಿದ್ದ ಸಿಂಧು ಕುಟುಂಬದವ ರೊಂದಿಗೆ ರಾತ್ರಿ ಸಿಹಿ ಭೋಜನ ಸವಿದೆ’ ಎಂದು ನಾರಾಯಣ್‌ ಆತಿಥ್ಯವನ್ನು ಸ್ಮರಿಸಿಕೊಂಡರು.

“ಅ. 8ರ ರಾತ್ರಿ ತಿರುವನಂತ‌ಪುರ ಹೊಟೇಲ್‌ ನಲ್ಲಿ ಅವರ ಕೋರಿಕೆಯಂತೆ ವಿಶೇಷ ಭೋಜನದ ಆತಿಥ್ಯ ಸ್ವೀಕರಿಸಿದೆ. ಜತೆಗೆ ಸಿಂಧು ಅವರ ಭವಿಷ್ಯದ ಬಗ್ಗೆಯೂ ಮಾತಾಡಿದರು. ಮರುದಿನ ತಿರುವನಂತ‌ಪುರ ಪದ್ಮನಾಭಸ್ವಾಮಿ ಹಾಗೂ ಅಟ್ಟುಕಲ್‌ ದೇವಾಲಯಕ್ಕೆ ಭೇಟಿ ನೀಡಿದೆವು. ಅನಂತರ ಸಿಂಧು ತಿರುವನಂತ‌ಪುರ ಸಮಾರಂಭದಲ್ಲಿ ಪಾಲ್ಗೊಂಡು, ಸಂಜೆ 7 ಗಂಟೆಗೆ ಚೆನ್ನೈಗೆ ತೆರಳಿದರು. ಮುಂದಿನ ಒಲಿಂಪಿಕ್ಸ್‌ ಬಳಿಕ ಕುಟುಂಬ ಸಮೇತ ಪುತ್ತೂರಿಗೆ ಬರುವುದಾಗಿ ವಿಜಯಾ ರಮಣ ಹೇಳಿದ್ದಾರೆ’ ಎಂದು ಪಿ.ವಿ. ನಾರಾಯಣ್‌ ಈ ಭೇಟಿಯನ್ನು ವಿವರಿಸಿದರು.

ಸಿಂಧು ಕುಟುಂಬದ ಜತೆ ನಂಟು
ಮೂಲತಃ ಕೇರಳದವರಾದ ಪಿ.ವಿ. ನಾರಾಯಣ್‌ 1981ರಲ್ಲಿ ತಮಿಳುನಾಡಿನ ವಾಲಿಬಾಲ್‌ ತರಬೇತುದಾರರಾಗಿದ್ದರು. 1981-84ರಲ್ಲಿ ಚೆನ್ನೈನ ಕ್ರೊಂಪೆಟ್‌ ವೈಷ್ಣವ ಕಾಲೇಜಿನಲ್ಲಿ ಸಿಂಧು ಅವರ ತಾಯಿ ವಿಜಯಾ ರಮಣ ವ್ಯಾಸಂಗ ಮಾಡುತ್ತಿದ್ದರು. ಆಗ ರಾಜ್ಯ ಮಟ್ಟದ ವಾಲಿಬಾಲ್‌ ಕ್ಯಾಂಪ್‌ಗೆ ಆಯ್ಕೆಗೊಂಡಿದ್ದರು. ಆಗ ನಾರಾಯಣ್‌ ಈ ತಂಡಕ್ಕೆ ತರಬೇತಿ ನೀಡಿದ್ದರು. ಇವರ ತರಬೇತಿಯಡಿ ವಿಜಯಾ ಅವರು ಯೂತ್‌, ಸೀನಿಯರ್‌, ವಿ.ವಿ. ಮಟ್ಟದಲ್ಲಿ ತಮಿಳುನಾಡು ತಂಡವನ್ನು ಪ್ರತಿನಿಧಿಸಿದ್ದರು. ಅನಂತರ ತರಬೇತಿ ಕೆಲಸ ಬಿಟ್ಟುಬಂದ ನಾರಾಯಣ್‌ ಅವರು ವಿಜಯಾ ರಮಣ ಕುಟುಂಬದ ಜತೆ ನಿರಂತರ ದೂರವಾಣಿ ಸಂಪರ್ಕದಲ್ಲಿದ್ದರು. ನಾರಾಯಣ್‌ ವಾಲಿಬಾಲ್‌ ಫೆಡರೇಶನ್‌ ಆಫ್‌ ಇಂಡಿಯಾ ಮತ್ತು ಬೀಚ್‌ ವಾಲಿಬಾಲ್‌ ತಾಂತ್ರಿಕ ಸಂಸ್ಥೆಯ ಸದಸ್ಯರಾಗಿದ್ದರು. ಪ್ರತಿ ವರ್ಷ ಪುತ್ತೂರಿನಲ್ಲಿ ಮಿತ್ರವೃಂದ ವಾಲಿಬಾಲ್‌ ಅಕಾಡೆಮಿ ಮೂಲಕ ವಿದ್ಯಾರ್ಥಿಗಳಿಗೆ ಉಚಿತ ವಾಲಿಬಾಲ್‌ ತರಬೇತಿ ನೀಡುತ್ತಿದ್ದಾರೆ.

– ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್‌ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ

ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್‌ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.