ಸಿಂಧು, ಸೈನಾಗೆ ನಗದು ಬಹುಮಾನ
Team Udayavani, Aug 29, 2017, 1:17 PM IST
ಹೊಸದಿಲ್ಲಿ: ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನಲ್ಲಿ ಎರಡು ಪದಕ ಗೆದ್ದ ಭಾರತೀಯ ವನಿತಾ ಶಟ್ಲರ್ಗಳಾದ ಪಿವಿ ಸಿಂಧು ಮತ್ತು ಸೈನಾ ನೆಹ್ವಾಲ್ ಅವರಿಗೆ ಭಾರತೀಯ ಬ್ಯಾಡ್ಮಿಂಟನ್ ಫೆಡರೇಶನ್ (ಬಿಎಐ) ನಗದು ಬಹುಮಾನ ಘೋಷಿಸಿದೆ. ಸಿಂಧು ಅವರಿಗೆ 10 ಲಕ್ಷ ರೂ. ಮತ್ತು ಸೈನಾ ಅವರಿಗೆ 5 ಲಕ್ಷ ರೂ. ನೀಡಲಾಗುವುದು ಎಂದು ಬಿಎಐ ತಿಳಿಸಿದೆ.
ಸಿಂಧು ಅವರು ರವಿವಾರ ನಡೆದ ಫೈನಲ್ನಲ್ಲಿ ಪ್ರಬಲ ಹೋರಾಟ ನಡೆಸಿದರೂ ಜಪಾನಿನ ನಜೋಮಿ ಒಕುಹಾರಾ ಅವರಿಗೆ ಶರಣಾಗಿ ಬೆಳ್ಳಿಯ ಪದಕಕ್ಕೆ ತೃಪ್ತಿಪಟ್ಟುಕೊಂಡರು. ಸಿಂಧು ಈ ಹಿಂದೆ ವಿಶ್ವ ಬ್ಯಾಡ್ಮಿಂಟನ್ನಲ್ಲಿ ಎರಡು ಬಾರಿ ಕಂಚು ಜಯಿಸಿದ್ದರು ಈ ಮೊದಲು ನಡೆದ ಸೆಮಿಫೈನಲ್ನಲ್ಲಿ ಮೂರು ಗೇಮ್ಗಳ ಕಠಿನ ಹೋರಾಟ ನಡೆಸಿ ಒಕುಹಾರಾ ಅವರಿಗೆ ಶರಣಾಗಿದ್ದ ಸೈನಾ ಕಂಚಿನ ಪದಕ ಪಡೆದರು. ಸೈನಾ ಈ ಹಿಂದಿನ ವಿಶ್ವ ಬ್ಯಾಡ್ಮಿಂಟನ್ನಲ್ಲಿ ಬೆಳ್ಳಿಯ ಪದಕ ಜಯಿಸಿದ್ದರು.
ವಿಶ್ವ ಬ್ಯಾಡ್ಮಿಂಟನ್ನಲ್ಲಿ ಸಿಂಧು ಮತ್ತು ಸೈನಾ ನೀಡಿದ ಅದ್ಭುತ ನಿರ್ವಹಣೆಗೆ ಅಭಿನಂದನೆ ಸಲ್ಲಿಸುವೆ. ಅವರು ಮುಂದೆಯೂ ಶ್ರೇಷ್ಠ ನಿರ್ವಹಣೆ ನೀಡುವಂತಾಗಲಿ ಎಂದು ಬಿಎಐ ಅಧ್ಯಕ್ಷ ಹಿಮಾಂತ ಬಿಸ್ವ ಶರ್ಮ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ
CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?
MUST WATCH
ಹೊಸ ಸೇರ್ಪಡೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ