ಸಿಂಗಾಪುರ ಬ್ಯಾಡ್ಮಿಂಟನ್‌: ಸಿಂಧುಗೆ ಮರಿನ್‌ ಶಾಕ್‌


Team Udayavani, Apr 15, 2017, 11:52 AM IST

pv-15.jpg

ನವದೆಹಲಿ: ಇಂಡಿಯನ್‌ ಓಪನ್‌ ಬ್ಯಾಡ್ಮಿಂಟನ್‌ ಕೂಟದ ಫೈನಲ್‌ನಲ್ಲಿ ಸಿಂಧು ವಿರುದ್ಧ ಎದುರಾದ ಸೋಲಿಗೆ ಸ್ಪೇನ್‌ನ ಖ್ಯಾತ ಆಟಗಾರ್ತಿ, ರಿಯೋ ಒಲಿಂಪಿಕ್ಸ್‌ ಚಿನ್ನದ ಪದಕ ವಿಜೇತೆ ಕ್ಯಾರೋಲಿನಾ ಮರಿನ್‌ ಸೇಡು ತೀರಿಸಿಕೊಂಡಿದ್ದಾರೆ. 

ಸಿಂಗಾಪುರ ಬ್ಯಾಡ್ಮಿಂಟನ್‌ನ ಮಹಿಳಾ ಸಿಂಗಲ್ಸ್‌ ಕ್ವಾರ್ಟರ್‌ಫೈನಲ್‌ ನಲ್ಲಿ ಭಾರತದ ಆಟಗಾರ್ತಿ 21-11, 21-15 ನೇರ ಸೆಟ್‌ಗಳ ಅಂತರದಿಂದ ಮರಿನ್‌ಗೆ ಶರಣಾಗಿದ್ದಾರೆ. ಒಲಿಂಪಿಕ್ಸ್‌ ಕಂಚಿನ ಪದಕ ವಿಜೇತೆ ಇತ್ತೀಚೆಗೆ ಮರಿನ್‌ರನ್ನು ಸೋಲಿಸಿ ಇಂಡಿಯನ್‌ ಬ್ಯಾಡ್ಮಿಂಟನ್‌ ಕೂಟ ಗೆದ್ದಿದ್ದರು. ಹೀಗಾಗಿ ಈ ಕೂಟದಲ್ಲಿ ಮರಿನ್‌ರನ್ನು ಸೋಲಿಸಿ ಸೆಮಿಫೈನಲ್‌ಗೆ ಏರಬಹುದು ಎನ್ನುವುದು ನಿರೀಕ್ಷೆ ಆಗಿತ್ತು. ಈ ಎಲ್ಲ ನಿರೀಕ್ಷೆಯನ್ನು ಸ್ಪೇನ್‌ ಆಟಗಾರ್ತಿ ಹುಸಿಗೊಳಿಸಿದರು ಎನ್ನುವುದು ವಿಶೇಷ.

ಪಂದ್ಯದ ಆರಂಭದಿಂದಲೂ ಮರಿನ್‌ ಬಿರುಸಿನ ಆಟಕ್ಕೆ ಮುಂದಾದರು. ಸಿಂಧುವಿಗೆ ಎಲ್ಲಿಯೂ ಚೇತರಿಸಿಕೊಳ್ಳಲು ಅವಕಾಶವನ್ನೇ ನೀಡಲಿಲ್ಲ.ಮೊದಲ ಗೇಮ್‌ನಲ್ಲಿ 11-21 ಅಂತರದಿಂದ ಸುಲಭವಾಗಿ ಮರಿನ್‌ ಗೇಮ್‌ ತನ್ನದಾಗಿಸಿಕೊಂಡರು. 2ನೇ ಗೇಮ್‌ನಲ್ಲೂ ಮರಿನ್‌ಗೆ ಸಿಂಧು ಸರಿಸಾಟಿಯಾಗಲಿಲ್ಲ. 19-13ರಿಂದ ಮುಂದಿದ್ದ ಸ್ಪೇನ್‌ ಆಟಗಾರ್ತಿ ಅಂತಿಮವಾಗಿ 21-15ರಿಂದ ಗೇಮ್‌ ತನ್ನದಾಗಿಸಿಕೊಂಡರು. 2-0ಯಿಂದ ಪಂದ್ಯ ಕೈವಶ ಮಾಡಿಕೊಂಡರು.

ಸಾಯಿ, ಶ್ರೀಕಾಂತ್‌ ಭರವಸೆ: ಪುರುಷರ ಸಿಂಗಲ್ಸ್‌ ಆಟಗಾರ ಸಾಯಿ ಪ್ರಣೀತ್‌ ಕೂಟದ ಸೆಮಿಫೈನಲ್‌ ಪ್ರವೇಶಿಸಿದ್ದಾರೆ. ಕಪ್‌ ಗೆಲ್ಲುವ ಭರವಸೆ ಮೂಡಿಸಿದ್ದಾರೆ. ಇವರು ಕ್ವಾರ್ಟರ್‌ಫೈನಲ್‌ ಪಂದ್ಯದಲ್ಲಿ ಥಾಯ್ಲೆಂಡ್‌ನ‌ ಥಾಂಗಕ್‌ರನ್ನು 15-21,21-14, 21-19 ಗೇಮ್‌ಗಳ ಅಂತರದಿಂದ ಸೋಲಿಸಿದರು. ಮತ್ತೂಂದು ಕ್ವಾರ್ಟರ್‌ಫೈನಲ್‌ನಲ್ಲಿ ಶ್ರೀಕಾಂತ್‌ 21-14-21-16 ರಿಂದ ಚೀನಾದ ಶಿ ಯೂಕಿ ಅವರನ್ನು ಮಣಿಸಿದರು. ಇವರೂ ಕೂಡ ಭಾರತಕ್ಕೆ ಪ್ರಶಸ್ತಿ ತರುವ ಭರವಸೆ ಮೂಡಿಸಿದ್ದಾರೆ.

ಮೊದಲ ಗೇಮ್‌ ಕಳೆದುಕೊಂಡು ಪ್ರಣೀತ್‌ ಪಂದ್ಯ ಕಳೆದುಕೊಳ್ಳುವ ಭೀತಿಗೆ ಸಿಲುಕಿದ್ದರು. ಆದರೆ 2 ಮತ್ತು 3ನೇ ಗೇಮ್‌ನಲ್ಲಿ ಅದ್ಭುತ ಆಟ ಪ್ರದರ್ಶಿಸಿದ ಸಾಯಿ ಪ್ರಣೀತ್‌ ಗೆಲುವು ಸಾರಿದರು. ಶ್ರೀಕಾಂತ್‌ ಕೂಡ ಅಚ್ಚರಿಯ ಆಟ ಪ್ರದರ್ಶಿಸಿ ಪಂದ್ಯ ಗೆದ್ದರು.

ಮಿಶ್ರಡಬಲ್ಸ್‌: ಅಶ್ವಿ‌ನಿ ಜೋಡಿ ಔಟ್‌: ಮಿಶ್ರ ಡಬಲ್ಸ್‌ನಲ್ಲಿ ಅಶ್ವಿ‌ನಿ ಪೊನ್ನಪ್ಪ – ಬಿ.ಸುಮಿತ್‌ ರೆಡ್ಡಿ ಕ್ವಾರ್ಟರ್‌ಫೈನಲ್‌ನಲ್ಲಿ ಸೋಲು ಕಂಡಿದ್ದಾರೆ. ಇವರು ಚೀನಾದ ಲ್ಯು ಕಾಯ್‌ ಮತ್ತು ಹ್ಯುವಾಂಗ್‌ ವಿರುದ್ಧ ಪರಾಭವಗೊಂಡರು.

ಟಾಪ್ ನ್ಯೂಸ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.