
ಪರಿಸ್ಥಿತಿಯನ್ನು ಉತ್ತಮವಾಗಿ ನಿಭಾಯಿಸಬೇಕಿತ್ತು.: ನಾಯಕತ್ವ ಬದಲಾವಣೆ ಕುರಿತು ಶಾಸ್ತ್ರಿ ಮಾತು
Team Udayavani, Dec 24, 2021, 11:54 AM IST

ಮುಂಬೈ: ಟೀಂ ಇಂಡಿಯಾದ ಮಾಜಿ ಮುಖ್ಯ ಕೋಚ್ ರವಿ ಶಾಸ್ತ್ರಿ ಅವರು ಕೊನೆಗೂ ತಂಡದ ನಾಯಕತ್ವ ಬದಲಾವಣೆಯ ಕುರಿತಂತೆ ಮಾತನಾಡಿದ್ದಾರೆ. ವಿರಾಟ್ ಕೊಹ್ಲಿ ಅವರನ್ನು ಏಕದಿನ ತಂಡದ ನಾಯಕನ ಸ್ಥಾನದಿಂದ ಕೆಳಕ್ಕಿಳಿಸುವಾಗ ಪರಿಸ್ಥಿತಿಯನ್ನು ಇನ್ನಷ್ಟು ಚೆನ್ನಾಗಿ ನಿಭಾಯಿಸಬೇಕಾಗಿತ್ತು ಎಂದು ಶಾಸ್ತ್ರಿ ಹೇಳಿದ್ದಾರೆ.
ಮೂರು ಮಾದರಿ ತಂಡಕ್ಕೆ ನಾಯಕನಾಗಿದ್ದ ವಿರಾಟ್ ಕೊಹ್ಲಿ ಟಿ20 ವಿಶ್ವಕಪ್ ಗೂ ಮೊದಲು ಚುಟುಕು ಮಾದರಿ ತಂಡದ ನಾಯಕತ್ವಕ್ಕೆ ವಿದಾಯ ಘೋಷಣೆ ಮಾಡಿದ್ದರು. ಇತ್ತೀಚೆಗೆ ಏಕದಿನ ತಂಡದ ನಾಯಕತ್ವವನ್ನೂ ವಿರಾಟ್ ಬದಲಿಗೆ ರೋಹಿತ್ ಗೆ ನೀಡಲಾಗಿದೆ.
ಈ ಬೆಳವಣಿಗೆಯ ಬಗ್ಗೆ ಮಾತನಾಡಿದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಟಿ20 ತಂಡದ ನಾಯಕತ್ವ ತ್ಯಜಿಸದಂತೆ ನಾನು ವಿರಾಟ್ ಗೆ ಮನವಿ ಮಾಡಿದ್ದೆ. ಆದರೆ ಆತ ಕೇಳಲಿಲ್ಲ” ಎಂದಿದ್ದರು. ಆದರೆ ದಕ್ಷಿಣ ಆಫ್ರಿಕಾ ಪ್ರವಾಸಕ್ಕೂ ಮೊದಲು ನಡೆದ ಸುದ್ದಿಗೋಷ್ಠಿಯಲ್ಲಿ ವಿರಾಟ್ ಕೊಹ್ಲಿ” ನನ್ನಲ್ಲಿ ನಾಯಕತ್ವ ತ್ಯಜಿಸದಂತೆ ಯಾರು ಕೇಳಿಕೊಂಡಿರಲಿಲ್ಲ” ಎಂದಿದ್ದರು. ಇದು ವಿವಾದಕ್ಕೆ ಕಾರಣವಾಗಿತ್ತು.
ಇದನ್ನೂ ಓದಿ:ಕುಲದೀಪ್ ವಿಚಾರದಲ್ಲಿ ರವಿ ಶಾಸ್ತ್ರಿ- ರವಿಚಂದ್ರನ್ ಅಶ್ವಿನ್ ನಡುವಿನ ಮಾತಿನ ಸಮರ
ಈ ಬಗ್ಗೆ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ರವಿ ಶಾಸ್ತ್ರಿ, “ ಕಥೆಯ ತನ್ನ ಭಾಗವನ್ನು ವಿರಾಟ್ ಕೊಹ್ಲಿ ಹೇಳಿದ್ದಾರೆ, ಇನ್ನು ಬಿಸಿಸಿಐ ಅಧ್ಯಕ್ಷರು ಅವರ ಭಾಗವನ್ನು ಹೇಳಬೇಕಿದೆ. ಈ ಪರಿಸ್ಥಿತಿಯನ್ನು ಉತ್ತಮ ಮಾತುಕತೆಯಿಂದ ಇನ್ನಷ್ಟು ಉತ್ತಮವಾಗಿ ನಿಭಾಯಿಸಬಹುದಿತ್ತು” ಎಂದಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsAUS; ಇಂಧೋರ್ ನಲ್ಲಿ ಟಾಸ್ ಗೆದ್ದ ಆಸೀಸ್; ಭಾರತ ತಂಡದಲ್ಲಿ ಪ್ರಸಿದ್ಧ್ ಕೃಷ್ಣಗೆ ಅವಕಾಶ

Asian Games 2023; ಮೊದಲ ದಿನವೇ ಪದಕ ಬೇಟೆ ಆರಂಭಿಸಿದ ಭಾರತ; 5 ಮೆಡಲ್ ಭಾರತದ ಪಾಲಿಗೆ

Asian Games: ಬಾಂಗ್ಲಾ ವಿರುದ್ಧ ಸುಲಭ ಜಯ: ಸ್ವರ್ಣ ಬೇಟೆಯ ಸಮೀಪ ತಲುಪಿದ ಭಾರತದ ವನಿತಾ ತಂಡ

World Cup Cricket ; ಮತ್ತೆ ಇಂಗ್ಲೆಂಡ್ ಆತಿಥ್ಯ, ಮತ್ತೆ ವಿಂಡೀಸ್ ಚಾಂಪಿಯನ್

IND vs AUS : ಇಂದು ಇಂದೋರ್ ಹೋರಾಟ; ಪಂದ್ಯಕ್ಕೆ ಮಳೆ ಭೀತಿ
MUST WATCH
ಹೊಸ ಸೇರ್ಪಡೆ

INDvsAUS; ಇಂಧೋರ್ ನಲ್ಲಿ ಟಾಸ್ ಗೆದ್ದ ಆಸೀಸ್; ಭಾರತ ತಂಡದಲ್ಲಿ ಪ್ರಸಿದ್ಧ್ ಕೃಷ್ಣಗೆ ಅವಕಾಶ

Love Story: ಪತ್ನಿಯನ್ನೇ ಪ್ರಿಯಕರನ ಜೊತೆ ಮದುವೆ ಮಾಡಿಸಿಕೊಟ್ಟ ಪತಿ ಮಹಾಶಯ.!

Theerthahalli: ಮಾಜಿ ವಿಧಾನ ಪರಿಷತ್ ಸದಸ್ಯ ಬಿ.ಎಸ್. ವಿಶ್ವನಾಥ್ ನಿಧನ

Shimoga; ವಿದ್ಯುತ್ ಪ್ರವಹಿಸಿ ಕಂಬದಲ್ಲೇ ಕೊನೆಯುಸಿರೆಳೆದ ಲೈನ್ ಮ್ಯಾನ್

Kannada Cinema; ‘ಯಾವೋ ಇವೆಲ್ಲಾ’- ಇದು ಹೊಸಬರ ಕನಸು