ಸ್ಮಿತ್‌ ಮಿಂಚಿನಾಟ: ಆಸೀಸ್‌ ಜಯಭೇರಿ


Team Udayavani, Nov 5, 2019, 11:30 PM IST

smith-minchinata

ಕ್ಯಾನ್‌ಬೆರಾ: ಸ್ಟೀವನ್‌ ಸ್ಮಿತ್‌ ಅವರ ಸ್ಫೋಟಕ ಆಟದಿಂದಾಗಿ ಆಸ್ಟ್ರೇಲಿಯ ತಂಡವು ಪ್ರವಾಸಿ ಪಾಕಿಸ್ಥಾನ ವಿರುದ್ಧದ ದ್ವಿತೀಯ ಟಿ20 ಪಂದ್ಯದಲ್ಲಿ 7 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿದೆ.

ಮೊದಲು ಬ್ಯಾಟಿಂಗ್‌ ನಡೆಸಿದ ಪಾಕಿಸ್ಥಾನವು ಬಾಬರ್‌ ಅಜಂ ಮತ್ತು ಇಫ್ತಿಕಾರ್‌ ಅಹ್ಮದ್‌ ಅವರ ಅರ್ಧಶತಕಗಳ ನೆರವಿನಿಂದ 6 ವಿಕೆಟಿಗೆ 150 ರನ್‌ ಪೇರಿಸಿತ್ತು. ಇದಕ್ಕುತ್ತರವಾಗಿ ಸ್ಮಿತ್‌ ಅವರ ಸ್ಫೋಟಕ ಆಟದಿಂದಾಗಿ ಆಸ್ಟ್ರೇಲಿಯ 18.3 ಓವರ್‌ಗಳಲ್ಲಿ ಕೇವಲ ಮೂರು ವಿಕೆಟಿಗೆ 151 ರನ್‌ ಪೇರಿಸಿ ಜಯಭೇರಿ ಬಾರಿಸಿದೆ.

ಈ ಗೆಲುವಿನಿಂದ ಆಸ್ಟ್ರೇಲಿಯ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಸರಣಿ ನಿರ್ಣಾಯಕ ಪಂದ್ಯ ಪರ್ತ್‌ನಲ್ಲಿ ನ. 8ರಂದು ನಡೆಯಲಿದೆ. ಭಾರೀ ಮಳೆಯಿಂದಾಗಿ ಸರಣಿಯ ಮೊದಲ ಪಂದ್ಯದಲ್ಲಿ ಫ‌ಲಿತಾಂಶ ಬಂದಿರಲಿಲ್ಲ.

ಸ್ಮಿತ್‌ ಅಜೇಯ
ಗೆಲ್ಲಲು 151 ರನ್‌ಗಳ‌ ಗುರಿ ಪಡೆದ ಆಸ್ಟ್ರೇಲಿಯ ತಂಡಕ್ಕೆ ಸ್ಟೀವನ್‌ ಸ್ಮಿತ್‌ ಆಸರೆಯಾದರು. ಅವರ ಏಕಾಂಗಿ ಅಜೇಯ ಹೋರಾಟದಿಂದ ಆತಿಥೇಯ ತಂಡ ಯಾವುದೇ ಒತ್ತಡಕ್ಕೆ ಒಳಗಾಗದೇ ಸುಲಭವಾಗಿ ಜಯಭೇರಿ ಬಾರಿಸುವಂತಾಯಿತು.

ಆರಂಭಿಕರಾದ ಡೇವಿಡ್‌ ವಾರ್ನರ್‌ ಮತ್ತು ಫಿಂಚ್‌ ತಂಡಕ್ಕೆ ಭರ್ಜರಿ ಆರಂಭ ಒದಗಿಸಿದರು. ಬಿರುಸಿನ ಆಟವಾಡಿದ ಅವರಿಬ್ಬರು ಮೊದಲ 3 ಓವರ್‌ಗಳಲ್ಲಿ 30 ರನ್‌ ಪೇರಿಸಿದ್ದರು. ಈ ಜೋಡಿ ಮುರಿದ ಬಳಿಕ ಕ್ರೀಸ್‌ಗೆ ಆಗಮಿಸಿದ ಸ್ಮಿತ್‌ ಮಿಂಚಿನ ಆಟವಾಡಿದರು. ಮೆಕ್‌ಡರ್ಮಟ್‌ ಮತ್ತು ಟರ್ನರ್‌ ಜತೆಗೂಡಿ ಪಾಕ್‌ ದಾಳಿಯನ್ನು ಧ್ವಂಸಗೈದ ಸ್ಮಿತ್‌ ತಂಡಕ್ಕೆ ಸುಲಭ ಜಯ ತಂದುಕೊಟ್ಟರು.

ಅನುಭವಿ ಮೊಹಮ್ಮದ್‌ ಆಮಿರ್‌ ಸಹಿತ ಪಾಕ್‌ ಬೌಲರ್‌ಗಳನ್ನು ದಂಡಿಸಿದ ಸ್ಮಿತ್‌ ಕೇವಲ 51 ಎಸೆತಗಳಲ್ಲಿ 80 ರನ್‌ ಸಿಡಿಸಿ ತಂಡದ ಗೆಲುವಿನ ಆತಂಕವನ್ನು ದೂರ ಮಾಡಿದರು. 11 ಬೌಂಡರಿ ಬಾರಿಸಿದ ಅವರು ಒಂದು ಸಿಕ್ಸರ್‌ ಸಿಡಿಸಿದ್ದರು. ಇನ್ನೂ 9 ಎಸೆತ ಬಾಕಿ ಇರುವಾಗಲೇ ತಂಡ ಗೆಲುವಿನ ನಗೆ ಚೆಲ್ಲಿತು.

ಪಾಕಿಸ್ಥಾನ 150
ಮೊದಲು ಬ್ಯಾಟಿಂಗ್‌ ನಡೆಸಿದ ಪಾಕಿಸ್ಥಾನವು ಆರಂಭಿಕ ಬಾಬರ್‌ ಅಜಂ ಮತ್ತು ಇಫ್ತಿಕಾರ್‌ ಅಹ್ಮದ್‌ ಅವರ ಅರ್ಧಶತಕದಿಂದಾಗಿ ಸಾಧಾ ರಣ ಮೊತ್ತ ಪೇರಿಸುವಂತಾಯಿತು. ಆರಂಭದಲ್ಲಿ ಬಾಬರ್‌ ಬಿರುಸಿನ ಆಟವಾಡಿದರೆ ಉಳಿದವರು ಮಿಂಚಲು ವಿಫ‌ಲರಾದರು. ಫ‌ಕಾರ್‌ ಜಮಾನ್‌, ಹ್ಯಾರಿಸ್‌ ಸೊಹೈಲ್‌ ಬ್ಯಾಟಿಂಗ್‌ ವೈಫ‌ಲ್ಯದಿಂದಾಗಿ ತಂಡದ ರನ್‌ವೇಗಕ್ಕೆ ಕಡಿವಾಣ ಬಿತ್ತು. ಬಾಬರ್‌ ಅಜಂ 38 ಎಸೆತಗಳಿಂದ ಸರಿಯಾಗಿ 50 ರನ್‌ ಹೊಡೆದಿದ್ದರು.

ಕೊನೆಯ ಹಂತದಲ್ಲಿ ಇಫ್ತಿಕಾರ್‌ ಅಹ್ಮದ್‌ ಸ್ಫೋಟಕವಾಗಿ ಆಡಿದ್ದರಿಂದ ತಂಡದ ಮೊತ್ತ 150ರ ಗಡಿ ತಲುಪಿತು. ಇಫ್ತಿಕಾರ್‌ 34 ಎಸೆತ ಗಳಲ್ಲಿ 62 ರನ್‌ ಸಿಡಿಸಿ ಅಜೇಯರಾಗಿ ಉಳಿ ದರು. 5 ಬೌಂಡರಿ, 3 ಸಿಕ್ಸರ್‌ ಸಿಡಿಸಿ ರಂಜಿಸಿದರು.

ಟಾಪ್ ನ್ಯೂಸ್

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.