ಕುಂಬ್ಳೆ ಉಳಿಸಲು ನಾಯಕತ್ವವನ್ನೇ ಪಣವಾಗಿಟ್ಟಿದ್ದ ಗಂಗೂಲಿ!


Team Udayavani, Dec 2, 2017, 6:40 AM IST

Ganguly-Kumble.jpg

ಮುಂಬೈ: ಭಾರತ ಕ್ರಿಕೆಟ್‌ನ ಶ್ರೇಷ್ಠ ನಾಯಕರಲ್ಲೊಬ್ಬ ಎಂದು ಕರೆಸಿಕೊಳ್ಳಲ್ಪಡುವ ಸೌರವ್‌ ಗಂಗೂಲಿ ಪಟ್ಟು ಬಿಡದ ವ್ಯಕ್ತಿತ್ವಕ್ಕೆ ಹೆಸರುವಾಸಿ. ಆಟಗಾರರ ಹಿತಕ್ಕಾಗಿ ಎಂತಹ ಹೋರಾಟ ಮಾಡಲು ಅವರು ಸಿದ್ಧವಾಗಿದ್ದರು. ಅಂತಹ ಗಂಗೂಲಿ ಮಾಜಿ ನಾಯಕ ಅನಿಲ್‌ ಕುಂಬ್ಳೆಯನ್ನು ತಂಡದಲ್ಲಿ ಉಳಿಸಿಕೊಳ್ಳಲು ತಾವು ನಾಯಕತ್ವವನ್ನೇ ಪಣವಾಗಿಟ್ಟ ಘಟನೆಯನ್ನು  ಕಾರ್ಯಕ್ರಮವೊಂದರಲ್ಲಿ ವಿವರಿಸಿದ್ದಾರೆ.

2003-04ರ ಆಸೀಸ್‌ ಪ್ರವಾಸಕ್ಕೆ ಕುಂಬ್ಳೆಯನ್ನು ಆಯ್ಕೆ ಮಾಡಲು ಬಿಸಿಸಿಐ ಸುತಾರಾಂ ಸಿದ್ಧವಿರಲಿಲ್ಲ, ಆದರೆ ಗಂಗೂಲಿ ತನ್ನ ನಾಯಕತ್ವವನ್ನೇ ಪಣವಾಗಿಟ್ಟ ಪರಿಣಾಮ ಮುಂದೆ ಕುಂಬ್ಳೆ ಆಯ್ಕೆಯಾಗಿದ್ದು ಮಾತ್ರ ವಿಶ್ವದಾಖಲೆಯನ್ನೂ ನಿರ್ಮಿಸಿದರು!

ಗಂಗೂಲಿ ಹೇಳಿದ ಕಥೆ: 2003-04ರ ಆಸ್ಟ್ರೇಲಿಯಾ ಪ್ರವಾಸ ಅತ್ಯಂತ ಕಠಿಣವಾಗಿತ್ತು. ಬಲಗೈ ಲೆಗ್‌ಸ್ಪಿನ್ನರ್‌ಗೆ ಆಸ್ಟ್ರೇಲಿಯನ್ನರು ಉತ್ತಮವಾಗಿ ಆಡುತ್ತಾರೆ, ಆದ್ದರಿಂದ ಎಡಗೈ ಲೆಗ್‌ಸ್ಪಿನ್ನರನ್ನು ಆಯ್ಕೆ ಮಾಡಲು ಬಿಸಿಸಿಐ ಆಯ್ಕೆ ಸಮಿತಿ ಮುಂದಾಗಿತ್ತು. ಇದನ್ನು ಗಂಗೂಲಿ ವಿರೋಧಿಸಿದರು, ಕುಂಬ್ಳೆಯನ್ನು ತಂಡಕ್ಕೆ ಸೇರಿಸಿಕೊಳ್ಳಲೇಬೇಕು ಎಂದು ಪಟ್ಟು ಹಿಡಿದರು. ಸತತ 2 ಗಂಟೆಯಾದರೂ ವಿಷಯ ಬಗೆ ಹರಿಯದಾಗ ಅಂದು ಕೋಚ್‌ ಆಗಿದ್ದ ಜಾನ್‌ ರೈಟ್‌ ಮಧ್ಯಪ್ರವೇಶಿಸಿ, ಬಿಟ್ಟುಬಿಡಿ ಅವರು ಕೊಟ್ಟ ತಂಡದೊಂದಿಗೆ ಆಡೋಣ ಎಂದು ಸೌರವ್‌ಗೆ ಹೇಳಿದರು. ಆದರೆ ಈಗ ಕುಂಬ್ಳೆಯನ್ನು ಬಿಟ್ಟುಬಿಟ್ಟರೆ ಅವರು ಮತ್ತೆಂದೂ ಭಾರತ ತಂಡವನ್ನು ಪ್ರವೇಶಿಸುವುದಿಲ್ಲವೆಂದು ಗಂಗೂಲಿಗೆ ಅನಿಸಿತು. ಆದ್ದರಿಂದ ಕುಂಬ್ಳೆಯನ್ನು ತಂಡಕ್ಕೆ ಸೇರಿಸಿಕೊಳ್ಳದಿದ್ದರೆ ತಂಡದ ಪಟ್ಟಿಗೆ ಸಹಿ ಹಾಕಲು ಸಾಧ್ಯವೇ ಇಲ್ಲ ಎಂದು ಅವರು ತಮ್ಮ ಹಠವನ್ನು ಮುಂದುವರಿಸಿದರು.

ಕಡೆಗೂ ಆಯ್ಕೆ ಮಂಡಳಿ ಮಣಿದು ಕುಂಬ್ಳೆಯನ್ನು ತಂಡಕ್ಕೆ ಸೇರಿಸಿಕೊಂಡಿತು. ಅದರೊಂದಿಗೆ ಷರತ್ತನ್ನೂ ವಿಧಿಸಿತು. ಒಂದು ವೇಳೆ ಕುಂಬ್ಳೆ ವಿಫ‌ಲರಾದರೆ, ಭಾರತ ತಂಡ ವಿಫ‌ಲರಾದರೆ ಮೊದಲನೇ ಬಲಿಪಶು ನೀವೇ ಆಗುತ್ತೀರಿ ಗಂಗೂಲಿಗೆ ಎಚ್ಚರಿಸಿತು. ಇದಕ್ಕೆ ಗಂಗೂಲಿ ತಲೆಯಾಡಿಸಿ ಎದ್ದು ಹೊರಬಂದರು. ಮುಂದೆ ನಡೆದಿದ್ದು ಇತಿಹಾಸ.
ಭಾರತ ಸರಣಿಯನ್ನು 1-1ರಿಂದ ಡ್ರಾ ಮಾಡಿಕೊಂಡು ಐತಿಹಾಸಿಕ ಸಾಧನೆ ಮಾಡಿತು. ಈ ಸರಣಿಯಲ್ಲಿ ಅತಿಹೆಚ್ಚು ಅಂದರೆ 24 ವಿಕೆಟ್‌ ಪಡೆದ ಬೌಲರ್‌ ಆಗಿ ಕುಂಬ್ಳೆ ಮೂಡಿಬಂದರು. ಅಷ್ಟು ಮಾತ್ರವಲ್ಲ ಆ ವರ್ಷದಲ್ಲಿ 80 ವಿಕೆಟ್‌ ಪಡೆದು, ವರ್ಷವೊಂದರಲ್ಲಿ ಗರಿಷ್ಠ ವಿಕೆಟ್‌ ಪಡೆದ ವಿಶ್ವದಾಖಲೆ ನಿರ್ಮಿಸಿದರು.

ಗಂಗೂಲಿ ಇದೇ ರೀತಿ ಹಲವು ಆಟಗಾರರನ್ನು ತಮ್ಮ ನಾಯಕತ್ವದಲ್ಲಿ ರಕ್ಷಿಸಿದ್ದಾರೆ. ಆ ಆಟಗಾರರೆಲ್ಲರೂ ಅದ್ಭುತ ರೀತಿಯಲ್ಲಿ ಗಂಗೂಲಿಯ ತೀರ್ಮಾನವನ್ನು ಸಮರ್ಥಿಸಿದ್ದಾರೆನ್ನುವುದನ್ನು ಇಲ್ಲಿ ನೆನಪಿಸಿಕೊಳ್ಳಬಹುದು. ಅಷ್ಟುಮಾತ್ರವಲ್ಲ ಕುಂಬ್ಳೆಯನ್ನು ಭಾರತ ತಂಡದ ಕೋಚ್‌ ಆಗಿಸಲು ಕಾರಣವೇ ಗಂಗೂಲಿ ಎನ್ನುವುದು ಇಲ್ಲಿ ಗಮನಾರ್ಹ.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.