ಲಕ್ಷ್ಮಣ್‌ಗೂ ಶರ್ಟ್‌ ತೆಗೆಯುವಂತೆ ಸೂಚಿಸಿದ್ದ  ಸೌರವ್‌ ಗಂಗೂಲಿ!


Team Udayavani, Jul 28, 2018, 6:00 AM IST

23.jpg

ಕೋಲ್ಕತಾ: “ಕ್ರಿಕೆಟಿನ ರಾಜಾಂಗಣ ಲಾರ್ಡ್ಸ್‌’ನಲ್ಲಿ ಭಾರತದ ಪಾಲಿಗೆ ಎರಡು ನೆನಪುಗಳು ಸದಾ ಹಸುರು. ಒಂದು, 1983ರಲ್ಲಿ ಕಪಿಲ್‌ದೇವ್‌ ಬಳಗ ಏಕದಿನ ವಿಶ್ವಕಪ್‌ ಚಾಂಪಿಯನ್‌ ಎನಿಸಿಕೊಂಡು ಪ್ರುಡೆನ್ಶಿಯಲ್‌ ಟ್ರೋಫಿ ಎತ್ತಿಹಿಡಿದ್ದದ್ದು; ಇನ್ನೊಂದು, 2002ರ ನಾಟ್‌ವೆಸ್ಟ್‌ ಟ್ರೋಫಿ ಫೈನಲ್‌ನಲ್ಲಿ ಇಂಗ್ಲೆಂಡ್‌ ವಿರುದ್ಧ 326 ರನ್‌ ಬೆನ್ನಟ್ಟಿ ಗೆದ್ದ ಬಳಿಕ ನಾಯಕ ಸೌರವ್‌ ಗಂಗೂಲಿ ಅಂಗಿ ಕಳಚಿ ಸಂಭ್ರಮಿಸಿದ್ದು!

16 ವರ್ಷಗಳ ಹಿಂದೆ ಜುಲೈನಲ್ಲೇ (ಜು. 13) ಭಾರತ ನಾಟ್‌ವೆಸ್ಟ್‌ ಚಾಂಪಿಯನ್‌ ಆಗಿ ಮೂಡಿ ಬಂದಿತ್ತು. ಈ ಸಂಭ್ರಮದ ವೇಳೆ ಗಂಗೂಲಿ ಟೀಮ್‌ ಇಂಡಿಯಾದ ಜೆರ್ಸಿಯನ್ನು ತೆಗೆದು ಸಂಭ್ರಮಿಸಿದ ರೀತಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.

ಶರ್ಟ್‌ ತೆಗೆಯಬೇಡ ಎಂದಿದ್ದ ಲಕ್ಷ್ಮಣ್‌
“ಬ್ರೇಕ್‌ಫಾಸ್ಟ್‌ ವಿತ್‌ ಚಾಂಪಿಯನ್ಸ್‌’ ವೆಬ್‌ ಸರಣಿಯಲ್ಲಿ ಸೌರವ್‌ ಗಂಗೂಲಿ ಅಂದಿನ ಘಟನೆಯನ್ನು ನೆನಪಿಸಿಕೊಂಡಿದ್ದಾರೆ; ತಾನು ವಿವಿಎಸ್‌ ಲಕ್ಷ್ಮಣ್‌ಗೂ ಅಂಗಿ ಕಳಚುವಂತೆ ಸೂಚಿಸಿದ್ದೆ ಎಂದಿದ್ದಾರೆ. “ಘಟನೆಯ ವೇಳೆ ಲಕ್ಷ್ಮಣ್‌ ನನ್ನ ಎಡ ಭಾಗದಲ್ಲಿದ್ದರು, ಹರ್ಭಜನ್‌ ನನ್ನ ಹಿಂದಿದ್ದರು. ನಾನು ಶರ್ಟ್‌ ತೆಗೆಯುತ್ತಿರುವುದನ್ನು ಕಂಡು ದಂಗಾದ ಲಕ್ಷ್ಮಣ್‌, “ಬೇಡ, ಹಾಗೆ ಮಾಡ ಬೇಡ…’ ಎಂದು ನನಗೆ ಹೇಳಲು ಪ್ರಯತ್ನಿಸು ತ್ತಿದ್ದರು. ನಾನು ಅಂಗಿ ತೆಗೆದ ಬಳಿಕ ಅವರು “ನಾನೀಗ ಏನು ಮಾಡಬೇಕು?’ ಎಂದು ಕೇಳಿ ದರು. ನೀವೂ ಶರ್ಟ್‌ ತೆಗೆದುಬಿಡಿ ಎಂದು ನಾನು ಲಕ್ಷ್ಮಣ್‌ಗೆ ಹೇಳಿದೆ….’ ಎಂಬುದಾಗಿ ಗಂಗೂಲಿ ಅಂದಿನ ವಿದ್ಯಮಾನವನ್ನು ವಿವರಿಸಿದರು.

“ಹೀಗೆ ಅಂಗಿ ತೆಗೆದು ಸಂಭ್ರಮಿಸಬೇಕೆಂಬ ಯೋಚನೆ ನನಗೆ ಹೊಳೆದದ್ದೇ ಅಂತಿಮ ಕ್ಷಣದಲ್ಲಿ. ಇದಕ್ಕೂ ಹಿಂದಿನ ಭಾರತ ಪ್ರವಾಸದ ವೇಳೆ ಇಂಗ್ಲೆಂಡ್‌ ಮುಂಬಯಿ ಏಕದಿನ ಗೆದ್ದು ಸರಣಿಯನ್ನು 3-3 ಸಮಬಲಕ್ಕೆ ತಂದಾಗ ಆ್ಯಂಡ್ರೂé ಫ್ಲಿಂಟಾಫ್ ವಾಂಖೇಡೆಯಲ್ಲಿ ಇದೇ ರೀತಿ ವರ್ತಿಸಿದ್ದರು. ನಾನೇಕೆ ಲಾರ್ಡ್ಸ್‌ನಲ್ಲಿ ಇದನ್ನು ಪುನರಾವರ್ತಿಸಬಾರದು ಎಂದು ತೀರ್ಮಾನಿಸಿದೆ…’ ಎಂದು ಈ ಘಟನೆಯ ಹಿಂದಿನ “ಪ್ರೇರಣೆ’ಯನ್ನು ತೆರೆದಿಟ್ಟರು.

ಮಗಳೂ ಇದನ್ನು ಪ್ರಶ್ನಿಸಿದ್ದಳು!
“ಈ ವರ್ತನೆಯಿಂದ ನನಗೂ ನಾಚಿಕೆಯಾ ಗಿದೆ. ಒಮ್ಮೆ ನನ್ನ ಮಗಳು ಕೂಡ ಇದನ್ನು ಪ್ರಶ್ನಿಸಿದ್ದಳು-ನೀನೇಕೆ ಹಾಗೆ ಮಾಡಿದೆ ಅಪ್ಪ, ಕ್ರಿಕೆಟ್‌ನಲ್ಲಿ ಹೀಗೆಲ್ಲ ಮಾಡಲೇಬೇಕೇ? ಎಂದು ಕೇಳಿದ್ದಳು. ಇಲ್ಲ, ಅರಿವಿಲ್ಲದೆ ಹೀಗೆ ಮಾಡಿದೆ ಎಂದು ಉತ್ತರಿಸಿದ್ದೆ. ಕೆಲವೊಮ್ಮೆ ಬದುಕಿನಲ್ಲಿ ನಮ್ಮ ಮೇಲೆಯೇ ನಮಗೆ ನಿಯಂತ್ರಣ ಇರುವುದಿಲ್ಲ. ಆಗ ಇಂಥದ್ದೆಲ್ಲ ಸಂಭವಿಸುತ್ತದೆ’ ಎಂದು ಗಂಗೂಲಿ ಕಾರ್ಯಕ್ರಮದಲ್ಲಿ ಹೇಳಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.