ಚಿನ್ನಸ್ವಾಮಿಗೆ ಸೌರವ್‌ ಗಂಗೂಲಿ ಭೇಟಿ

ಎನ್‌ಸಿಎ ಅಧ್ಯಕ್ಷ ರಾಹುಲ್‌ ದ್ರಾವಿಡ್‌ ಜತೆ ಚರ್ಚೆ

Team Udayavani, Oct 31, 2019, 4:52 AM IST

GANGULI

ಬೆಂಗಳೂರು: ಬುಧವಾರ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿಗೆ (ಎನ್‌ಸಿಎ) ಭೇಟಿ ನೀಡಿದ ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ, ಎನ್‌ಸಿಎ ಅಧ್ಯಕ್ಷ ರಾಹುಲ್‌ ದ್ರಾವಿಡ್‌ ಜತೆ ಚರ್ಚೆ ನಡೆಸಿದರು. ಎನ್‌ಸಿಎ ಸುಧಾರಣೆ ಕುರಿತಂತೆ ಗಂಗೂಲಿ-ದ್ರಾವಿಡ್‌ ವಿಚಾರ ವಿನಿಮಯ ಮಾಡಿಕೊಂಡಿದ್ದಾರೆ. ಸಭೆಯ ಮುಖ್ಯಾಂಶ ಇನ್ನಷ್ಟೇ ಹೊರಬೇಕಿದೆ.

ಎನ್‌ಸಿಎ ಸುಧಾರಣೆಗೆ ಕ್ರಮಕೈಗೊಳ್ಳುವುದೇ ಗಂಗೂಲಿ ಭೇಟಿಯ ಮುಖ್ಯ ಉದ್ದೇಶವಾಗಿತ್ತು. ಸದ್ಯ ಭಾರತದ ಭವಿಷ್ಯದ ಕ್ರಿಕೆಟಿಗರನ್ನು ರೂಪಿಸುವ ಹೊಣೆಹೊತ್ತಿರುವ ದ್ರಾವಿಡ್‌, ಗಂಗೂಲಿಯೊಂದಿಗೆ ಮಹತ್ವದ ಮಾತುಕತೆ ನಡೆಸಿದ್ದಾರೆ.
ಇದೇ ವೇಳೆ ಕೆಎಸ್‌ಸಿಎ ಸದಸ್ಯರು, ಗಂಗೂಲಿ ಮತ್ತಿತರ ಬಿಸಿಸಿಐ ನೂತನ ಪದಾಧಿಕಾರಿಗಳಿಗೆ ಚಿನ್ನಸ್ವಾಮಿ ಮೈದಾನದಲ್ಲಿ ಅಳವಡಿಸಿರುವ ಸಬ್‌ಏರ್‌ ಒಳಚರಂಡಿ ವ್ಯವಸ್ಥೆಯ ಬಗ್ಗೆ ಮಾಹಿತಿ ನೀಡಿದರು. ಇದಕ್ಕೆ ಗಂಗೂಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಸೌರವ್‌ ಗಂಗೂಲಿ, ಕಾರ್ಯದರ್ಶಿ ಜಯ್‌ ಶಾ, ಖಜಾಂಚಿ ಅರುಣ್‌ ಸಿಂಗ್‌ ಧುಮಾಲ್‌ ಅವರನ್ನು ಕೆಎಸ್‌ಸಿಎಯಿಂದ ಸಮ್ಮಾನಿಸಲಾಯಿತು.

ಕೋಲಾರ ಸಮೀಪ ಕ್ರಿಕೆಟ್‌ ಮೈದಾನಕ್ಕೆ ಜಾಗ
ಭಾರತೀಯ ಕ್ರಿಕೆಟ್‌ ತಂಡ ಅಭ್ಯಾಸ ಪಂದ್ಯಗಳನ್ನಾಡಲು ಕೋಲಾರ ಸಮೀಪ ಜಾಗ ಹುಡುಕುವಂತೆ ಬಿಸಿಸಿಐ ಅಧ್ಯಕ್ಷ ಗಂಗೂಲಿ ಸೂಚಿಸಿದ್ದಾರೆ ಎಂದು ಜಿಲ್ಲೆಯ ಕೆಸಿಸಿಐ ಸಮನ್ವಯಾಧಿಕಾರಿ ಆಯಿಲ್‌ ರಮೇಶ್‌ ತಿಳಿಸಿದ್ದಾರೆ. ಬೆಂಗಳೂರಿಗೆ ಭೇಟಿ ನೀಡಿದ್ದ ಗಂಗೂಲಿಗೆ, ಕೋಲಾರ ಸಮೀಪ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣ ಸ್ಥಾಪಿಸಲು ಸರ್ಕಾರ 16 ಎಕರೆ ಜಮೀನನ್ನು ಮಂಜೂರು ಮಾಡಿರುವುದು ಗಮನಕ್ಕೆ ತರಲಾಯಿತು. ಇದು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಹತ್ತಿರವಾಗಿದೆಯೆಂಬ ಮಾಹಿತಿ ನೀಡಲಾಯಿತು. ಈ ಬಗ್ಗೆ ಆಸಕ್ತಿ ತೋರಿದ ಗಂಗೂಲಿ, ಭಾರತೀಯ ಕ್ರಿಕೆಟ್‌ ತಂಡ ಅಭ್ಯಾಸ ನಡೆಸಲು ವಿಮಾನ ನಿಲ್ದಾಣ ಸಮೀಪ 30 ಎಕರೆ ಜಾಗ ನೀಡಿದರೆ, ಕ್ರೀಡಾಂಗಣ ನಿರ್ಮಾಣ ಮಾಡಲು ಬಿಸಿಸಿಐ ಸಿದ್ಧ ಎಂದು ತಿಳಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.