ದಕ್ಷಿಣ ಆಫ್ರಿಕಕ್ಕೆ ಸೋಲುಣಿಸಿದ ಭಾರತ


Team Udayavani, Feb 16, 2017, 3:45 AM IST

dakshina-africa.jpg

ಕೊಲಂಬೊ: ಆಲ್‌ರೌಂಡ್‌ ಆಟದ ಪ್ರದರ್ಶನ ನೀಡಿದ ಭಾರತ ವನಿತೆಯರು ಐಸಿಸಿ ವನಿತಾ ವಿಶ್ವಕಪ್‌ ಅರ್ಹತಾ ಕೂಟದ ಸೂಪರ್‌ ಸಿಕ್ಸ್‌ ಹಂತದ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 49 ರನ್ನುಗಳಿಂದ ಸೋಲಿಸಿದ್ದಾರೆ. 
ದಿನದ ಇನ್ನೆರಡು ಪಂದ್ಯಗಳಲ್ಲಿ ಶ್ರೀಲಂಕಾ ತಂಡವು ಪಾಕಿಸ್ಥಾನವನ್ನು ಮತ್ತು ಬಾಂಗ್ಲಾ ದೇಶವು ಅಯರ್‌ಲ್ಯಾಂಡ್‌ ತಂಡವನ್ನು ಸೋಲಿಸಿದೆ. ಸೂಪರ್‌ ಸಿಕ್ಸ್‌ ಹಂತದ ದ್ವಿತೀಯ ಪಂದ್ಯದಲ್ಲಿ ಭಾರತ ವನಿತೆಯರು ಫೆ. 17ರಂದು ಬಾಂಗ್ಲಾದೇಶವನ್ನು ಎದುರಿಸಲಿದೆ. 

ಟಾಸ್‌ ಸೋತು ಬ್ಯಾಟಿಂಗಿಗೆ ಇಳಿದ ಭಾರತ ತಂಡವು ಮೋನಾ ಮೆಶ್ರಾಮ್‌ ಮತ್ತು ಮಿಥಾಲಿ ರಾಜ್‌ ಅವರ ಅರ್ಧಶತಕದಿಂದಾಗಿ 8 ವಿಕೆಟಿಗೆ 205 ರನ್ನುಗಳ ಉತ್ತಮ ಮೊತ್ತ ಪೇರಿಸಿತು. ಮೊದಲ ವಿಕೆಟ್‌ ಬೇಗನೇ ಹೋದರೂ ಮೋನಾ ಮತ್ತು ರಾಜ್‌ ದ್ವಿತೀಯ ವಿಕೆಟಿಗೆ 96 ರನ್‌ ಪೇರಿಸಿದ್ದರಿಂದ ತಂಡ ಚೇತರಿಸಿಕೊಂಡಿತು. ಇವರಿಬ್ಬರೂ ಅರ್ಧಶತಕ ಸಿಡಿಸಿ ತಂಡವನ್ನು ಆಧರಿಸಿದರು. ಮೋನಾ 85 ಎಸೆತ ಎದುರಿಸಿ 5 ಬೌಂಡರಿ ಮತ್ತು 2 ಸಿಕ್ಸರ್‌ ನೆರವಿನಿಂದ 55 ರನ್‌ ಹೊಡೆದೆರ ಮಿಥಾಲಿ ರಾಜ್‌ 85 ಎಸೆತ ಎದುರಿಸಿ 10 ಬೌಂಡರಿ ನೆರವಿನಿಂದ 64 ರನ್‌ ಹೊಡೆದರು. 

ಮೋನಾ ಮತ್ತು ಮಿಥಾಲಿ ಅವರನ್ನು ಬಿಟ್ಟರೆ ಉಳಿದ ಯಾವುದೇ ಆಟಗಾರ್ತಿಯರು ಉತ್ತಮ ಬ್ಯಾಟಿಂಗ್‌ ಮಾಡಲು ವಿಫ‌ಲರಾದರು. ಅಂತಿಮವಾಗಿ ತಂಡ 8 ವಿಕೆಟ್‌ ಕಳೆದುಕೊಂಡು 205 ರನ್‌ ತಲುಪಿತು.

ಆರಂಭಿಕ ಕುಸಿತ ಕಂಡ ದಕ್ಷಿಣ ಆಫ್ರಿಕಾಕ್ಕೆ ಭಾರತೀಯ ಬೌಲರ್‌ಗಳು ಕಡಿವಾಣ ಹಾಕಲು ಯಶಸ್ವಿಯಾದರು. ಪಾಂಡೆ ಮತ್ತು ಏಕ್ತ ಬಿಸ್ತ್ ಅವರ ನಿಖರ ದಾಳಿಯಿಂದಾಗಿ ರನ್‌ ಗಳಿಸಿಲು ಒದ್ದಾಡಿದ ದಕ್ಷಿಣ ಆಫ್ರಿಕಾ 46.4 ಓವರ್‌ಗಳಲ್ಲಿ 156 ರನ್ನಿಗೆ ಆಲೌಟಾಯಿತು. ತೃಷಾ ಚೆಟ್ಟಿ 52 ರನ್‌ ಗಳಿಸಿದರು. ಬಿಗು ದಾಳಿ ಸಂಘಟಿಸಿದ ಶಿಖಾ ಪಾಂಡೆ 34 ರನ್ನಿಗೆ 4 ವಿಕೆಟ್‌ ಕಿತ್ತರೆ ಬಿಸ್ತ್ 22 ರನ್ನಿಗೆ 3 ವಿಕೆಟ್‌ ಪಡೆದರು.

ಸಂಕ್ಷಿಪ್ತ ಸ್ಕೋರು: ಭಾರತ ವನಿತೆಯರು 8 ವಿಕೆಟಿಗೆ 205 (ಮೋನಾ ಮೆಶ್ರಾಮ್‌ 55, ಮಿಥಾಲಿ ರಾಜ್‌ 64, ಶಿಖಾ ಪಾಂಡೆ 21, ಮಾರಿಝಾನೆ ಕ್ಯಾಪ್‌ 23ಕ್ಕೆ 2, ಅಯಬೋಂಗಾ ಖಾಟಾ 44ಕ್ಕೆ 2); ದಕ್ಷಿಣ ಆಫ್ರಿಕಾ ವನಿತೆಯರು 46.4 ಓವರ್‌ಗಳಲ್ಲಿ 156 (ತೃಷಾ ಚೆಟ್ಟಿ 52, ಮಾರಿಝಾನೆ ಕ್ಯಾಪ್‌ 29, ಡ್ಯಾನ್‌ ವಾನ ನೀಕೆರ್ಕ್‌ 20, ಶಿಖಾ ಪಾಂಡೆ 34ಕ್ಕೆ 4, ಏಕ್ತ ಬಿಸ್ತ್ 22ಕ್ಕೆ 3).

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.