ಮೂರನೇ ಟಿ20: ಭಾರತಕ್ಕೆ 9 ವಿಕೆಟ್ ಗಳ ಸೋಲು ; ಸರಣಿ ಸಮಬಲ


Team Udayavani, Sep 22, 2019, 8:43 PM IST

D-Cock-22-9

ಬೆಂಗಳೂರು: ಮೂರನೇ ಮತ್ತು ಅಂತಿಮ ಟಿ20 ಪಂದ್ಯವನ್ನು 9 ವಿಕೆಟ್ ಗಳಿಂದ ಗೆಲ್ಲುವ ಮೂಲಕ ಕ್ವಿಂಟನ್ ಡಿ ಕಾಕ್ ನೇತೃತ್ವದ ದಕ್ಷಿಣ ಆಫ್ರಿಕಾ ತಂಡ ಟಿ20 ಸರಣಿಯನ್ನು ಸಮಬಲಗೊಳಿಸಿದೆ. ಈ ಮೂಲಕ ಡಿ ಕಾಕ್ ನೇತೃತ್ವದ ದಕ್ಷಿಣ ಆಫ್ರಿಕಾ ತಂಡ ತನ್ನ ಭಾರತ ಪ್ರವಾಸವನ್ನು ಶುಭಾರಂಭಗೊಳಿಸಿದೆ.

ಧರ್ಮಶಾಲಾದಲ್ಲಿ ನಡೆಯಬೇಕಿದ್ದ ಮೊದಲ ಟಿ20 ಪಂದ್ಯ ಮಳೆಯ ಕಾರಣ ಒಂದೂ ಎಸೆತವನ್ನು ಕಾಣದೆ ರದ್ದುಗೊಂಡಿತ್ತು. ಬಳಿಕ ಮೊಹಾಲಿಯಲ್ಲಿ ನಡೆದ ಎರಡನೇ ಟಿ20 ಪಂದ್ಯವನ್ನು ಭಾರತ 7 ವಿಕೆಟ್ ಗಳಿಂದ ಗೆದ್ದುಕೊಂಡಿತ್ತು. ಈ ಮೂಲಕ ಟಿ20 ಸರಣಿ 1-1 ಅಂತರದಲ್ಲಿ ಸಮಬಲಗೊಂಡಿತು.

 ಭಾರತ ನೀಡಿದ 134 ರನ್ನುಗಳ ಸಾಧಾರಣ ಗುರಿಯನ್ನು ಬೆನ್ನತ್ತಿದ ದಕ್ಷಿಣ ಆಫ್ರಿಕಾ ತಂಡ ನಾಯಕ ಡಿ ಕಾಕ್ ಅವರ ಭರ್ಜರಿ ಆಟದ ನೆರವಿನಿಂದ 16.5 ಓವರುಗಳಲ್ಲಿ ಕೇವಲ 1 ವಿಕೆಟ್ ನಷ್ಟದಲ್ಲಿ ಗುರಿ ತಲುಪಿ ಗೆಲುವಿನ ನಗು ಬೀರಿತು.

ಸ್ಪೋಟಕ ಆಟವಾಡಿದ ಕ್ವಿಂಟನ್ ಡಿ ಕಾಕ್ ಅವರು ಕೇವಲ 52 ಎಸೆತಗಳಲ್ಲಿ ಅಜೇಯ 79 ರನ್ನುಗಳನ್ನು ಬಾರಿಸಿ ಹರಿಣಗಳ ಪಾಲಿನ ಗೆಲುವಿನ ರೂವಾರಿ ಆಗಿ ಮೂಡಿಬಂದರು. ಇವರ ಈ ಸ್ಪೋಟಕ ಇನ್ನಿಂಗ್ಸ್ ನಲ್ಲಿ 06 ಬೌಂಡರಿ ಮತ್ತು 05 ಭರ್ಜರಿ ಸಿಕ್ಸರ್ ಗಳು ಸೇರಿದ್ದವು. ಇನ್ನೋರ್ವ ಆರಂಭಿಕ ಆಟಗಾರ ಹೆಂಡ್ರಿಕ್ಸ್ 28 ರನ್ನುಗಳನ್ನು ಬಾರಿಸಿದರು. ಡಿ ಕಾಕ್ ಅವರಿಗೆ ಉತ್ತಮ ಬೆಂಬಲ ನೀಡಿದ ಟೆಂಬಾ ಬವುಮಾ 27 ರನ್ನುಗಳನ್ನು ಬಾರಿಸಿ ಔಟಾಗದೇ ಉಳಿದರು.

ಹರಿಣಗಳ ಒಂದು ವಿಕೆಟ್ ಹಾರ್ಧಿಕ್ ಪಾಂಡ್ಯ ಪಾಲಾಯಿತು.

ತೃತೀಯ ಟಿ-20 ಭಾರತದ ಸಾಧಾರಣ ಮೊತ್ತ

ಪ್ರವಾಸಿ ದಕ್ಷಿಣ ಅಫ್ರಿಕಾ ವಿರುದ್ಧದ ಮೂರನೇ ಮತ್ತು ಅಂತಿಮ ಟಿ20 ಪಂದ್ಯದಲ್ಲಿ ಭಾರತ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆರಿಸಿಕೊಂಡ ಕೊಹ್ಲಿ ಪಡೆ ಪ್ರವಾಸಿಗರ ನಿಖರ ದಾಳಿಗೆ ತತ್ತರಿಸಿದೆ. ಭಾರತದ ಬ್ಯಾಟ್ಸ್ ಮನ್ ಗಳು ಒಬ್ಬರ ಹಿಂದೆ ಒಬ್ಬರಂತೆ ಪೆವಿಲಿಯನ್ ಪರೇಡ್ ನಡೆಸಿದರು. ಈ ಮೂಲಕ ಭಾರತ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ಗಳನ್ನು ಕಳೆದುಕೊಂಡು 134 ರನ್ ಗಳಷ್ಟನ್ನೇ ಕಲೆ ಹಾಕಿತು.

ಭಾರತದ ಬ್ಯಾಟಿಂಗ್ ಸರದಿಯಲ್ಲಿ ಆರಂಭಿಕ ಆಟಗಾರ ಶಿಖರ್ ಧವನ್ (36), ಮಧ್ಯಮ ಕ್ರಮಾಂಕದಲ್ಲಿ ರಿಷಭ್ ಪಂತ್ (19), ಆಲ್ ರೌಂಡರ್ ರವೀಂದ್ರ ಜಡೇಜಾ (19) ಮತ್ತು ಹಾರ್ಧಿಕ್ ಪಾಂಡ್ಯ (14) ಮಾತ್ರವೇ ಎರಡಂಕೆ ಮೊತ್ತವನ್ನು ದಾಟಿದರು. ಉಳಿದಂತೆ ರೋಹಿತ್ ಶರ್ಮಾ (9), ನಾಯಕ ವಿರಾಟ್ ಕೊಹ್ಲಿ (9), ಶ್ರೇಯಸ್ ಐಯ್ಯರ್ (5) ಮೊದಲಾದವರದ್ದು ಕಳಪೆ ಬ್ಯಾಟಿಂಗ್ ಪ್ರದರ್ಶನವಾಗಿತ್ತು.

ದಕ್ಷಿಣ ಆಫ್ರಿಕಾ ಪರ ಯುವ ವೇಗಿ ರಬಾಡಾ 3 ವಿಕೆಟ್ ಪಡೆದು ಮಿಂಚಿದರೆ, ಸ್ಪಿನ್ನರ್ ಕಾರ್ಲ್ ಫೋರ್ಚುನ್, ಬ್ಯುರಾನ್ ಹೆಂಡ್ರಿಕ್ಸ್ ತಲಾ 2 ವಿಕೆಟ್ ಪಡೆದರು.

ಟಾಪ್ ನ್ಯೂಸ್

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.