ಟಿ20 ಪಂದ್ಯ: ದಕ್ಷಿಣ ಆಫ್ರಿಕಾ ಚೇಸಿಂಗ್‌ ದಾಖಲೆ


Team Udayavani, Mar 28, 2023, 5:50 AM IST

ಟಿ20 ಪಂದ್ಯ: ದಕ್ಷಿಣ ಆಫ್ರಿಕಾ ಚೇಸಿಂಗ್‌ ದಾಖಲೆ

ಸೆಂಚುರಿಯನ್‌: ಏಕದಿನ ಪಂದ್ಯದಲ್ಲಿ ಸರ್ವಾಧಿಕ ಮೊತ್ತವನ್ನು ಬೆನ್ನಟ್ಟಿ ಗೆದ್ದು ವಿಶ್ವದಾಖಲೆ ನಿರ್ಮಿಸಿರುವ ದಕ್ಷಿಣ ಆಫ್ರಿಕಾ ಇದೀಗ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲೂ ಚೇಸಿಂಗ್‌ ದಾಖಲೆ ಸ್ಥಾಪಿಸಿದೆ. ಪ್ರವಾಸಿ ವೆಸ್ಟ್‌ ಇಂಡೀಸ್‌ ವಿರುದ್ಧ ಸೆಂಚುರಿಯನ್‌ನಲ್ಲಿ ನಡೆದ ಮುಖಾಮುಖಿಯಲ್ಲಿ ಹರಿಣಗಳ ಪಡೆ ಈ ಸಾಧನೆಗೈದಿತು.

ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ವೆಸ್ಟ್‌ ಇಂಡೀಸ್‌ 5 ವಿಕೆಟಿಗೆ 258 ರನ್‌ ರಾಶಿ ಹಾಕಿತು. ಇದನ್ನು ಬೆನ್ನಟ್ಟಿಕೊಂಡು ಹೋದ ದಕ್ಷಿಣ ಆಫ್ರಿಕಾ 18.5 ಓವರ್‌ಗಳಲ್ಲಿ 4 ವಿಕೆಟಿಗೆ 259 ರನ್‌ ಬಾರಿಸಿ ಅಮೋಘ ಗೆಲುವು ಸಾಧಿಸಿತು. ನ್ಯೂಜಿಲ್ಯಾಂಡ್‌ ಎದುರಿನ 2018ರ ಆಕ್ಲೆಂಡ್‌ ಪಂದ್ಯದಲ್ಲಿ ಆಸ್ಟ್ರೇಲಿಯ 5ಕ್ಕೆ 245 ರನ್‌ ಚೇಸ್‌ ಮಾಡಿ ಗೆದ್ದದ್ದು ಈವರೆಗಿನ ದಾಖಲೆಯಾಗಿತ್ತು.

ಹಾಗೆಯೇ ಏಕದಿನ ಅಂತಾರಾಷ್ಟ್ರೀಯ ಪಂದ್ಯವೊಂದರಲ್ಲಿ ಮೊದಲ ಬಾರಿಗೆ 500 ರನ್‌ ಹರಿದು ಬಂತು (517 ರನ್‌). 2018ರ ಭಾರತ-ವೆಸ್ಟ್‌ ಇಂಡೀಸ್‌ ನಡುವಿನ ಲಾಡರ್‌ಹಿಲ್‌ ಪಂದ್ಯದಲ್ಲಿ 489 ರನ್‌ ಒಟ್ಟುಗೂಡಿದ ದಾಖಲೆ ಪತನಗೊಂಡಿತು.

ಆರಂಭಕಾರ ಕ್ವಿಂಟನ್‌ ಡಿ ಕಾಕ್‌ ಅವರ ಸ್ಫೋಟಕ 100 ರನ್‌ (44 ಎಸೆತ, 9 ಬೌಂಡರಿ, 8 ಸಿಕ್ಸರ್‌), ಇವರು ರೀಝ ಹೆಂಡ್ರಿಕ್ಸ್‌ (68) ಜತೆಗೂಡಿ ಮೊದಲ ವಿಕೆಟಿಗೆ 10.5 ಓವರ್‌ಗಳಲ್ಲಿ ದಾಖಸಿದ 152 ರನ್‌ ಜತೆಯಾಟ ದಕ್ಷಿಣ ಆಫ್ರಿಕಾದ ಯಶಸ್ವಿ ಚೇಸಿಂಗ್‌ನಲ್ಲಿ ಪ್ರಮುಖ ಪಾತ್ರ ವಹಿಸಿತು.

ವೆಸ್ಟ್‌ ಇಂಡೀಸ್‌ ಪರ ವನ್‌ಡೌನ್‌ ಬ್ಯಾಟರ್‌ ಜಾನ್ಸನ್‌ ಚಾರ್ಲ್ಸ್‌ 46 ಎಸೆತಗಳಿಂದ 118 ರನ್‌ ಸಿಡಿಸಿದರು (10 ಬೌಂಡರಿ, 11 ಸಿಕ್ಸರ್‌).

ಈ ಪಂದ್ಯ ಒಟ್ಟು 35 ಸಿಕ್ಸರ್‌ ಹಾಗೂ 46 ಬೌಂಡರಿಗಳಿಂದ ಕ್ರಿಕೆಟ್‌ ಪ್ರೇಮಿಗಳನ್ನು ರಂಜಿಸಿತು.

ಸಂಕ್ಷಿಪ್ತ ಸ್ಕೋರ್‌
ವೆಸ್ಟ್‌ ಇಂಡೀಸ್‌-5 ವಿಕೆಟಿಗೆ 258 (ಚಾರ್ಲ್ಸ್‌ 118, ಮೇಯರ್ 51, ಶೆಫ‌ರ್ಡ್‌ ಔಟಾಗದೆ 41, ಜಾನ್ಸೆನ್‌ 52ಕ್ಕೆ 3, ಪಾರ್ನೆಲ್‌ 43ಕ್ಕೆ 2). ದಕ್ಷಿಣ ಆಫ್ರಿಕಾ-18.5 ಓವರ್‌ಗಳಲ್ಲಿ 4 ವಿಕೆಟಿಗೆ 259 (ಡಿ ಕಾಕ್‌ 100, ಹೆಂಡ್ರಿಕ್ಸ್‌ 68, ಮಾರ್ಕ್‌ರಮ್‌ ಔಟಾಗದೆ 38, ಪೊವೆಲ್‌ 27ಕ್ಕೆ 1). ಪಂದ್ಯಶ್ರೇಷ್ಠ: ಕ್ವಿಂಟನ್‌ ಡಿ ಕಾಕ್‌.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.