![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
South Africa Tour ; ಏಕದಿನ ತಂಡಕ್ಕೆ ರಾಹುಲ್ ನಾಯಕ: ರೋಹಿತ್, ಕೊಹ್ಲಿಗೆ ವಿಶ್ರಾಂತಿ
3 ಏಕದಿನ, 3 ಟಿ 20 ಮತ್ತು 2 ಟೆಸ್ಟ್ ಪಂದ್ಯಗಳು.. ಸಂಜು ಸ್ಯಾಮ್ಸನ್, ರಜತ್ ಪಾಟಿದಾರ್ ಗೆ ಅವಕಾಶ
Team Udayavani, Nov 30, 2023, 8:16 PM IST
![1-asdadasd](https://www.udayavani.com/wp-content/uploads/2023/11/1-asdadasd-620x358.jpg)
ಮುಂಬಯಿ: ಭಾರತ ತಂಡ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳುತ್ತಿದ್ದು ಭಾರತದ ಏಕದಿನ, ಟಿ 20 ಮತ್ತು ಟೆಸ್ಟ್ ತಂಡಗಳನ್ನು ಗುರುವಾರ ಬಿಸಿಸಿಐ ಪ್ರಕಟಿಸಿದೆ.
3 ಏಕದಿನ ಪಂದ್ಯಗಳಿಗೆ ಭಾರತ ತಂಡದ ನಾಯಕತ್ವವನ್ನು ಕೆಎಲ್ ರಾಹುಲ್ ವಹಿಸಲಿದ್ದಾರೆ. ತಂಡದಲ್ಲಿ ರುತುರಾಜ್ ಗಾಯಕ್ವಾಡ್, ಸಾಯಿ ಸುದರ್ಶನ್, ತಿಲಕ್ ವರ್ಮಾ, ರಜತ್ ಪಾಟಿದಾರ್, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, (ಉಪನಾಯಕ ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್ , ಮುಖೇಶ್ ಕುಮಾರ್, ಅವೇಶ್ ಖಾನ್, ಅರ್ಶ್ದೀಪ್ ಸಿಂಗ್, ದೀಪಕ್ ಚಾಹರ್ ಅವರಿಗೆ ಸ್ಥಾನ ನೀಡಲಾಗಿದೆ.
ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರು ಪ್ರವಾಸದ ವಿರಾಮಕ್ಕಾಗಿ ಮಂಡಳಿಯನ್ನು ವಿನಂತಿಸಿದ್ದರು ಹಾಗಾಗಿ ಅವರು ವೈಟ್ ಬಾಲ್ ಪಂದ್ಯಗಳನ್ನು ಆಡುತ್ತಿಲ್ಲ. ಮೊಹಮ್ಮದ್. ಶಮಿ ಸದ್ಯ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದು, ಅವರ ಲಭ್ಯತೆಯು ಫಿಟ್ನೆಸ್ಗೆ ಒಳಪಟ್ಟಿರುತ್ತದೆ ಎಂದು ಬಿಸಿಸಿಐ ಪ್ರಕಟಿಸಿದೆ.
3 ಟಿ 20ಗಳಿಗೆ ಭಾರತ ತಂಡ
ಸೂರ್ಯಕುಮಾರ್ ಯಾದವ್ (ನಾಯಕ),ರವೀಂದ್ರ ಜಡೇಜಾ (ಉಪನಾಯಕ) ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ , ರವಿ ಬಿಷ್ಣೋಯ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ದೀಪಕ್ ಚಹಾರ್.
2 ಟೆಸ್ಟ್ ಪಂದ್ಯಗಳಿಗೆ ತಂಡ
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಮೊಹಮದ್ ಶಮಿ, ಜಸ್ಪ್ರೀತ್ ಬುಮ್ರಾ (ಉಪನಾಯಕ), ಪ್ರಸಿಧ್ ಕೃಷ್ಣ.
ಅಜಿಂಕ್ಯ ರಹಾನೆ ಮತ್ತು ಚೇತೇಶ್ವರ ಪೂಜಾರ ಅವರಿಗೆ ಟೆಸ್ಟ್ ತಂಡದಲ್ಲಿ ಅವಕಾಶ ನೀಡಲಾಗಿಲ್ಲ.
ಪಂದ್ಯಗಳ ವೇಳಾಪಟ್ಟಿ
ಡಿಸೆಂಬರ್ 10 ರಂದು ಡರ್ಬನ್ ನಲ್ಲಿ ಭಾರತ ಮೊದಲ ಟಿ 20 ಪಂದ್ಯದೊಂದಿಗೆ ಸರಣಿ ಆರಂಭವಾಗಲಿದೆ.
ಡಿ. 12 ರಂದು 2ನೇ ಟಿ 20 ಗ್ಕೆಬರ್ಹಾ ಸೇಂಟ್ ಜಾರ್ಜ್ ಪಾರ್ಕ್ ನಲ್ಲಿ, ಡಿ. 14 ರಂದು 3ನೇ ಟಿ20 ನ್ಯೂ ವಾಂಡರರ್ಸ್ ಸ್ಟೇಡಿಯಂ, ಜೋಹಾನ್ಸ್ಬರ್ಗ್ ನಲ್ಲಿ ನಡೆಯಲಿದೆ.
ಡಿಸೆಂಬರ್ 17 ರಂದು ಜೋಹಾನ್ಸ್ಬರ್ಗ್ ನಲ್ಲಿ ಮೊದಲ ಏಕದಿನ ಪಂದ್ಯ ,19 ರಂದು ಸೇಂಟ್ ಜಾರ್ಜ್ ಪಾರ್ಕ್ ನಲ್ಲಿ ಎರಡನೇ ಏಕದಿನ ಪಂದ್ಯ , 21 ರಂದು 3ನೇ ಏಕದಿನ ಪಂದ್ಯ ಬೋಲ್ಯಾಂಡ್ ಪಾರ್ಕ್, ಪರ್ಲ್ ನಲ್ಲಿ ನಡೆಯಲಿದೆ.
ಡಿಸೆಂಬರ್ 26 ರಂದು ಮೊದಲ ಟೆಸ್ಟ್ ಆರಂಭವಾಗಲಿದೆ. 2ನೇ ಟೆಸ್ಟ್ ಜನವರಿ 3 ರಂದು ಆರಂಭವಾಗಲಿದೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.