Sports event ಕರ್ನಾಟಕ ವಿಶ್ವವಿದ್ಯಾಲಯ: ಮತ್ತೆರಡು ಕೂಟ ದಾಖಲೆ ಧೂಳಿಪಟ


Team Udayavani, Dec 17, 2023, 8:15 PM IST

1-sadsad

ಧಾರವಾಡ : ಇಲ್ಲಿನ ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ಕರ್ನಾಟಕ ಕಲಾ ಕಾಲೇಜು ವತಿಯಿಂದ ನಡೆದಿರುವ 2023-24 ನೇ ಕವಿವಿ ಮಟ್ಟದ 70ನೇ ಅಂತರ ಕಾಲೇಜುಗಳ ಅಥ್ಲೆಟಿಕ್ ಕ್ರೀಡಾಕೂಟದ 2ನೇ ದಿನವಾದ ರವಿವಾರವು 26 ಹಾಗೂ 10 ವರ್ಷದ ಎರಡು ಹಳೆಯ ಕೂಟ ದಾಖಲೆಗಳು ಧೂಳಿಪಟವಾಗಿವೆ.

ಪುರುಷರ ವಿಭಾಗದ 1500 ಮೀಟರ್ ಓಟದಲ್ಲಿ 26 ವರ್ಷದ ಹಿಂದೆ ಧಾರವಾಡದಲ್ಲಿಯೇ 1997 ರಲ್ಲಿ ಬೆಳಗಾವಿಯ ಲಿಂಗರಾಜ್ ಕಾಲೇಜಿನ ಆರ್.ಎಂ.ಕುರುಬಗಟ್ಟಿ 4:00.97 ಸೆಕೆಂಡ್‌ನಲ್ಲಿ ಕ್ರಮಿಸುವ ಮೂಲಕ ನೂತನ ಕೂಟ ದಾಖಲೆ ನಿರ್ಮಿಸಿದ್ದರು. ಇದೀಗ 26 ವರ್ಷದ ಬಳಿಕ ಧಾರವಾಡದಲ್ಲಿಯೇ ಕರ್ನಾಟಕ ಕಲಾ ಮಹಾವಿದ್ಯಾಲಯದ ನಾಗರಾಜ್ ದಿವಟೆ ಕ್ರೀಡಾಪಟು 1500 ಮೀಟರ್ ಓಟವನ್ನು 3:56.66 ಸೆಕೆಂಡ್‌ನಲ್ಲಿ ಕ್ರಮಿಸುವ ಮೂಲಕ ಹಳೆಯ ದಾಖಲೆ ಮುರಿದು, ನೂತನ ಕೂಟ ದಾಖಲೆ ಬರೆದಿದ್ದಾರೆ.

ಇನ್ನು ಶನಿವಾರವಷ್ಟೇ 100 ಮೀಟರ್ ಓಟದಲ್ಲಿ ಪ್ರಿಯಾಂಕಾ ಕೆ ಕ್ರೀಡಾಪಟುವಿನ 10 ವರ್ಷದ ಹಿಂದಿನ ದಾಖಲೆ ಮುರಿದಿದ್ದ ಜೆಎಸ್‌ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯ ಕ್ರೀಡಾಪಟುವಾದ ಕಾರವಾರದ ನಯನಾ ಕೊಕರೆ, ರವಿವಾರ ನಡೆದ 200 ಮೀಟರ್ ಓಟದಲ್ಲಿಯೂ ಪ್ರಿಯಾಂಕಳ ಈ ಹಿಂದಿನ 10 ವರ್ಷದ ಮತ್ತೊಂದು ದಾಖಲೆಯನ್ನು ಮುರಿದಿದ್ದಾರೆ. 2013 ರಲ್ಲಿ ಧಾರವಾಡದಲ್ಲಿಯೇ ಕೆಸಿಡಿ ಕಾಲೇಜಿನ ಪ್ರಿಯಾಂಕಾ ಕೆ ದಾಖಲಿಸಿದ್ದ 25.46 ಸೆಕೆಂಡ್ ದಾಖಲೆಯನ್ನು ನಯನಾ, 200 ಮೀಟರ್ ಓಟವನ್ನು 24.88 ಸೆಕೆಂಡ್‌ನಲ್ಲಿ ಕ್ರಮಿಸುವ ಮೂಲಕ ನೂತನ ಕೂಟ ದಾಖಲೆ ನಿರ್ಮಿಸಿರುವುದು ವಿಶೇಷತೆ.

ಇನ್ನು ಎರಡು ದಿನಗಳಲ್ಲಿ ಏಳು ಚಿನ್ನ, ಐದಯ ಬೆಳ್ಳಿ ಪದಕ ಸೇರಿದಂತೆ ಒಟ್ಟು 12 ಪದಕಗಳೊಂದಿಗೆ ಜೆಎಸ್‌ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯು ಅಗ್ರಸ್ಥಾನದಲ್ಲಿ ಮುನ್ನಡೆ ಸಾಽಸಿದೆ. ಏಳು ಚಿನ್ನ, ನಾಲ್ಕು ಬೆಳ್ಳಿ ಹಾಗೂ ಮೂರು ಪದಕಗಳೊಂದಿಗೆ ಕರ್ನಾಟಕ ಕಲಾ ಮಹಾವಿದ್ಯಾಲಯವು ಒಟ್ಟು 14 ಪದಕಗಳನ್ನು ಪಡೆದುಕೊಂಡು ದ್ವಿತೀಯ ಸ್ಥಾನದಲ್ಲಿ ಮುನ್ನಡೆದಿದೆ. ಇದಲ್ಲದೇ ಧಾರವಾಡದ ಶ್ರೀ ಛತ್ರಪತಿ ಶಿವಾಜಿ ಮಹಾರಾಜ್ ಕಲಾ ಮತ್ತು ವಾಣಿಜ್ಯ ಕಾಲೇಜು ಎರಡು ಚಿನ್ನ, ತಲಾ 1 ಬೆಳ್ಳಿ, ಕಂಚು ಪದಕ ಪಡೆದು ತೃತೀಯ ಸ್ಥಾನದಲ್ಲಿದೆ.

ಟಾಪ್ ನ್ಯೂಸ್

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.