ಕ್ರೀಡಾಪಟುಗಳ ನೋವಿಗೆ ಕ್ರೀಡಾ ಸಚಿವರ ಸ್ಪಂದನೆ


Team Udayavani, Jan 31, 2017, 3:45 AM IST

pramod-madhwaraj-800.jpg

ಬೆಂಗಳೂರು: ಅಂತಾರಾಷ್ಟ್ರೀಯ, ರಾಷ್ಟ್ರೀಯ ಮಟ್ಟದ ವಿವಿಧ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ಗೆದ್ದಿರುವ ರಾಜ್ಯದ ಕ್ರೀಡಾಪಟುಗಳಿಗೊಂದು ಸಿಹಿ ಸುದ್ದಿ. ಕಳೆದ 3 ವರ್ಷಗಳಿಂದ ಸಿಗದಿರುವ ನಗದು ಪುರಸ್ಕಾರ ಇನ್ನೆರಡು ತಿಂಗಳಲ್ಲಿ ನಿಮ್ಮ ಕೈ ಸೇರಲಿದೆ.

ಉದಯವಾಣಿ ಡಿ.30ರಂದು “ಪದಕ ಗೆದ್ದರೂ ರಾಜ್ಯದ ಕ್ರೀಡಾಪಟುಗಳಿಗೆ ಸಿಕ್ಕಿಲ್ಲ ಕಾಸು!’ ಎನ್ನುವ ಶೀರ್ಷಿಕೆಯಡಿ ಪ್ರಕಟಿಸಿದ್ದ ವಿಶೇಷ ವರದಿಗೆ ರಾಜ್ಯ ಕ್ರೀಡಾ ಸಚಿವ ಪ್ರಮೋದ್‌ ಮಧ್ವರಾಜ್‌ ಕ್ಷಿಪ್ರ ಗತಿಯಲ್ಲಿ ಸ್ಪಂದಿಸಿದ್ದು, ಹಣ ಬಿಡುಗಡೆ ಕುರಿತಂತೆ ಹಣಕಾಸು ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐ.ಎನ್‌.ಎಸ್‌.ಪ್ರಸಾದ್‌ ಜತೆಗೆ ಸೋಮವಾರ ತುರ್ತು ಸಭೆ ನಡೆಸಿದ್ದಾರೆ.

ಕ್ರೀಡಾಪಟುಗಳಿಗೆ ಬಾಕಿ ಉಳಿದಿರುವ ಕೋಟ್ಯಂತರ ರೂ. ಬಿಡುಗಡೆ ಮಾಡುವಂತೆ ಆರ್ಥಿಕ ಇಲಾಖೆಯನ್ನು ಸಚಿವರು ಮನವಿ ಮಾಡಿದ್ದು, ಇದಕ್ಕೆ ಸ್ಪಂದಿಸಿರುವ ಐ.ಎನ್‌.ಎಸ್‌.ಪ್ರಸಾದ್‌ ಅವರು, ಕ್ರೀಡಾಪಟುಗಳಿಗೆ ನೀಡಬೇಕಿರುವ ಹಣವನ್ನು ಮುಂದಿನ ಎರಡು ತಿಂಗಳೊಳಗೆ ಬಿಡುಗಡೆ ಮಾಡುವ ಭರವಸೆ ನೀಡಿದ್ದಾರೆ.

2 ದಿನದ ಒಳಗೆ ಕ್ರೀಡಾಪಟುಗಳ ಪಟ್ಟಿ ಹಣಕಾಸು ಇಲಾಖೆಗೆ:  ಈ ಹಿನ್ನೆಲೆಯಲ್ಲಿ ಪದಕ ವಿಜೇತ ಕ್ರೀಡಾಪಟುಗಳ ಪಟ್ಟಿಯನ್ನು ಎರಡು ದಿನಗಳಲ್ಲಿ ಹಣಕಾಸು ಇಲಾಖೆಗೆ ಕ್ರೀಡಾ ಇಲಾಖೆ ಕಳುಹಿಸಿ ಕೊಡಲಿದೆ. ಪಟ್ಟಿಯಲ್ಲಿರುವ ಅರ್ಹ ಕ್ರೀಡಾಪಟುಗಳ ಸಾಧನೆಯನ್ನು ಹಣಕಾಸು ಇಲಾಖೆ ಪರಿಶೀಲನೆ ನಡೆಸಲಿದೆ. ಬಳಿಕ ಫೆಬ್ರವರಿಯಲ್ಲಿ ಅನುದಾನ ನೀಡುವ ಕುರಿತು ಹಣಕಾಸು ಇಲಾಖೆ ಕ್ರಮಕೈಗೊಳ್ಳಲಿದೆ. ಈ ಬಗ್ಗೆ ಕ್ರೀಡಾ ಸಚಿವ ಪ್ರಮೋದ್‌ ಮಧ್ವರಾಜ್‌ ಅವರು ಉದಯವಾಣಿಗೆ ಮಾಹಿತಿ ನೀಡಿದ್ದು, ಮುಂದಿನ ಎರಡು ತಿಂಗಳ ಒಳಗೆ ಹಣ ಬಿಡುಗಡೆಯಾಗುವುದು ಖಚಿತ ಎಂದಿದ್ದಾರೆ.

ಬಾಕಿ ಇರುವುದು 14.50 ಕೋಟಿ ರೂ.: 2014ನೇ ಸಾಲಿನಿಂದ ಅಂತಾರಾಷ್ಟ್ರೀಯ, ರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆದ್ದ ರಾಜ್ಯದ ಕ್ರೀಡಾಪಟುಗಳಿಗೆ ನಗದು ಪುರಸ್ಕಾರ ಕ್ರೀಡಾ ಇಲಾಖೆಯಿಂದ ಸಿಕ್ಕಿರಲಿಲ್ಲ. ಅಷ್ಟೊಂದು ದೊಡ್ಡ ಮೊತ್ತವನ್ನು ನೀಡಲು ಇಲಾಖೆ ಬಳಿ ಅನುದಾನ ಇರಲಿಲ್ಲ. ಈ ಬಗ್ಗೆ ಕ್ರೀಡಾ ಸಚಿವ ಪ್ರಮೋದ್‌ ಮಧ್ವರಾಜ್‌ ಕಳೆದ ವರ್ಷವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ಚರ್ಚೆ ನಡೆಸಿದ್ದರು. ಮುಖ್ಯಮಂತ್ರಿಗಳು ಅನುದಾನ ಬಿಡುಗಡೆ ಮಾಡಲು ಹಣಕಾಸು ಇಲಾಖೆಗೆ ಸೂಚಿಸಿದ್ದರು. ಆದರೆ ಅದು ಪ್ರಗತಿಯಲ್ಲಿ ಇರಲಿಲ್ಲ. ಇದರಿಂದ ಸಾಕಷ್ಟು ಅಥ್ಲೀಟ್‌ಗಳ ಅಭ್ಯಾಸಕ್ಕೆ ತೊಡಕಾಗಿತ್ತು.

ಹಣಕಾಸು ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಜತೆ ತುರ್ತು ಸಭೆ ನಡೆಸಿ ಕ್ರೀಡಾಪಟುಗಳಿಗೆ ನೀಡಲು ಬಾಕಿ ಇರುವ 14.50 ಕೋಟಿ ರೂ. ಶೀಘ್ರದಲ್ಲೇ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದೇನೆ.  ಅವರೂ ಮನವಿಗೆ ಸ್ಪಂದಿಸಿದ್ದು, ಕ್ರೀಡಾ ಇಲಾಖೆಯಿಂದ ಪದಕ ವಿಜೇತ ಅಥ್ಲೀಟ್‌ಗಳ ಪಟ್ಟಿಯನ್ನು ಎರಡು ದಿನಗಳ ಒಳಗಾಗಿ ಕಳುಹಿಸಿಕೊಡುವಂತೆ ಸೂಚಿಸಿದ್ದಾರೆ. ಮುಂದಿನ ಎರಡು ತಿಂಗಳ ಒಳಗಾಗಿ ಸಮಸ್ಯೆ ಬಗೆ ಹರಿಯಲಿದೆ.
– ಪ್ರಮೋದ್‌ ಮಧ್ವರಾಜ್‌, ಯುವಜನ ಮತ್ತು ಕ್ರೀಡಾ ಸಚಿವ

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.